spot_img
spot_img

ʼಗಾಂಧಿ ಭಾರತʼ ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮ ನಿರ್ಣಯ

spot_img
spot_img

Share post:

ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ.
ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು.
ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸಲು ಸೂಚನೆ ನೀಡಲಾಗಿದೆ.
ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಗಿದೆ. ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಲಾಗುವುದು.
ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.
ಕಲಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ ಮತ್ತು ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.
ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸುವ ಬಗ್ಗೆ, ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ, ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಯಿತು.
ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜಿಸುವ ಕುರಿತು ಹಾಗೂ ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...