spot_img
spot_img

ಬಾಣಂತಿಯರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ: ಸಿಎಂ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
“ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಈಗಾಗಲೇ ಎರಡು ಲಕ್ಷ ರೂ ಪರಿಹಾರ ಘೋಷಿಸಲಾಗಿತ್ತು. ಇದೀಗ ಆ ಮೊತ್ತವನ್ನು ಐದು ಲಕ್ಷಕ್ಕೇರಿಸಲು ನಿರ್ಧರಿಸಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಂಡೂರಿನಲ್ಲಿಂದು ಮತದಾರರಿಗೆ ಅಭಿನಂದನಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
“ಮುಡಾ, ವಕ್ಪ್, ವಾಲ್ಮೀಕಿ ಹಗರಣದ ಬಗ್ಗೆ ಸುಳ್ಳು ಆರೋಪ ಮಾಡೋದನ್ನು ನಿಲ್ಲಿಸಿ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ನಾಚಿಕೆ ಆಗಬೇಕು. ಸಿದ್ದರಾಮಯ್ಯ ಸರ್ಕಾರ ಅಬಕಾರಿ ಇಲಾಖೆಯಿಂದ 750 ಕೋಟಿ ರೂ ಸಂಗ್ರಹಿಸಿ ಮಹಾರಾಷ್ಟ್ರ ಚುನಾವಣೆಗೆ ಕೊಟ್ಟಿದೆ ಅಂತಾ ಮೋದಿ ಆರೋಪ ಮಾಡಿದ್ರು. ನಿಮ್ಮ ಆರೋಪ ನಿಜವಾದ್ರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ನಾನು ಮೋದಿ ಅವರಿಗೆ ಹೇಳಿದ್ದೆ. ಆರೋಪ ಸಾಬೀತು ಮಾಡಿಲ್ಲ ಅಂದ್ರೆ ನೀವು ರಾಜೀನಾಮೆ ಕೊಡುತ್ತೀರಾ ಅಂತಲೂ ಕೇಳಿದ್ದೆ. ಅದಕ್ಕವರು ಬಾಯಿ ಬಿಡಲಿಲ್ಲ” ಎಂದು ವಾಗ್ದಾಳಿ ನಡೆಸಿದರು.
“ಬಿಜೆಪಿ ಬಡವರ, ಸಂವಿಧಾನ ಪರವಾಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಯಾವುದೇ ಜಾತಿ, ಪಕ್ಷ ಭೇದ ಮಾಡದೇ ಗ್ಯಾರಂಟಿ ಯೋಜನೆ ನೀಡಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ನೀವು ಮನ್ನಣೆ ಕೊಡಬೇಕು, ಪಕ್ಷಕ್ಕೆ ಶಕ್ತಿ ಕೊಡಬೇಕು ಅಂತಾ ಮನವಿ ಮಾಡಿದ್ವಿ. ನೀವು ಗ್ಯಾರಂಟಿ ಯೋಜನೆಗಳಿಗೆ ಮನ್ನಣೆ ಕೊಟ್ಟಿದ್ದೀರಿ. ನಾವು 2028ರವರೆಗೆ ಅಧಿಕಾರದಲ್ಲಿ ಇರುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ. 2028ರ ಬಳಿಕ ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ” ಎಂದು ಸಿಎಂ ಭರವಸೆ ನೀಡಿದರು.
“ಚನ್ನಪಟ್ಟಣ, ಶಿಗ್ಗಾಂವಿಯಲ್ಲಿ ಕೂಡ ನಮ್ಮ ಅಭ್ಯರ್ಥಿಗಳು ಗೆದ್ದಿದ್ದಾರೆ. ಕುಮಾರಸ್ವಾಮಿ, ಬೊಮ್ಮಾಯಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ರು. ಜನರ ಆಲೋಚನೆಯನ್ನು ಜೆಡಿಎಸ್‌ನವರು ಅರ್ಥ ಮಾಡಿಕೊಳ್ಳಬೇಕು. ನಿಮಗೆ ಮಾನ, ಮರ್ಯಾದೆ ಇದ್ರೆ ಸರ್ಕಾರದ ಜೊತೆ ಸಹಕರಿಸಿ. ರಚನಾತ್ಮಕ ಟೀಕೆ ಮಾಡಿದರೆ ಅದಕ್ಕೆ ನಾವು ಉತ್ತರ ಕೊಡ್ತೇವೆ” ಎಂದರು.
“ತುಕಾರಾಂ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ನಂತರ ಈ ಕ್ಷೇತ್ರ ತೆರವಾಗಿತ್ತು. ನಿಮ್ಮೆಲ್ಲರ ಅಭಿಪ್ರಾಯದಂತೆ ಅನ್ನಪೂರ್ಣ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿತ್ತು. ಅವರನ್ನ ನೀವು ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಿದ್ದೀರಿ. ಈ ಚುನಾವಣೆಯಲ್ಲಿ ಅನ್ನಪೂರ್ಣ ಅವರಿಗೆ ಆಶೀರ್ವಾದ ಮಾಡಿ ಸಂಡೂರು ಕಾಂಗ್ರೆಸ್ ಭದ್ರಕೋಟೆ ಅಂತಾ ಸಾಬೀತು ಮಾಡಿದ್ದೀರಿ. ಸಂಡೂರು ಕ್ಷೇತ್ರದ ಮತದಾರರಿಗೆ, ಕಾರ್ಯಕರ್ತರಿಗೆ ವಿಶೇಷ ಧನ್ಯವಾದ” ಎಂದರು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...