spot_img
spot_img

ಶ್ರೀಲಂಕಾ ನೌಕಾಪಡೆಯಿಂದ 18 ತಮಿಳುನಾಡು ಭಾರತೀಯ ಮೀನುಗಾರರ ಬಂಧನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ತಮಿಳುನಾಡು: ಶ್ರೀಲಂಕಾ ನೌಕಾಪಡೆಯು 18 ತಮಿಳುನಾಡಿನಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಿದೆ. ಕಡಲ ಗಡಿ ರೇಖೆ (ಐಎಂಬಿಎಲ್) ದಾಟಿ ಒಳಗೆ ಬಂದಿದ್ಧಾರೆ ಎಂದು ಆರೋಪಿಸಿ ನೆಡುಂಥೀವು ಬಳಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡಿನ 18 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಮಂಗಳವಾರ ಬಂಧಿಸಿದೆ. ಈ ಮೀನುಗಾರರು ಶ್ರೀಲಂಕಾದ ಜಲಪ್ರದೇಶವನ್ನು ಪ್ರವೇಶಿಸಿ ಅಕ್ರಮ ಮೀನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಶ್ರೀಲಂಕಾದ ಅಧಿಕಾರಿಗಳು ಆರೋಪಿಸಿದ್ದಾರೆ ಎಂದು ತಮಿಳುನಾಡು ಕರಾವಳಿ ಪೊಲೀಸರು ಹೇಳಿದ್ದಾರೆ.
ಎರಡು ಮೀನುಗಾರಿಕಾ ದೋಣಿಗಳಲ್ಲಿದ್ದ ಬಂಧಿತ ಮೀನುಗಾರರನ್ನು ಹೆಚ್ಚಿನ ತನಿಖೆಗಾಗಿ ಕಂಗೆಸನ್ ನೌಕಾ ನೆಲೆಗೆ ಕರೆದೊಯ್ಯಲಾಗಿದೆ. ಶ್ರೀಲಂಕಾ ನೌಕಾಪಡೆಯು ಪದೇ ಪದೆ ಭಾರತೀಯ ಮೀನುಗಾರರನ್ನು ಬಂಧಿಸುತ್ತಿರುವುದು ಮೀನುಗಾರರ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಇಂಥ ಘಟನೆಗಳನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಶ್ರೀಲಂಕಾಕ್ಕೆ ಭೇಟಿ ನೀಡಿದ್ದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಈ ಬಂಧನಗಳ ವಿಷಯ ಪ್ರಸ್ತಾಪಿಸಿ, ಭವಿಷ್ಯದಲ್ಲಿ ಮತ್ತಷ್ಟು ಭಾರತೀಯರ ಬಂಧನವಾಗದಂತೆ ಮತ್ತು ದೋಣಿ ವಶಪಡಿಸಿಕೊಳ್ಳದಂತೆ ಕ್ರಮ ತೆಗೆದುಕೊಳ್ಳುವಂತೆ ಶ್ರೀಲಂಕಾ ಸರ್ಕಾರಕ್ಕೆ ಒತ್ತಾಯಿಸಿದ್ದರು.
ಜೂನ್ 16 ರಿಂದ ಈವರೆಗೆ ಶ್ರೀಲಂಕಾ ನೌಕಾಪಡೆಯು ತಮಿಳುನಾಡಿನ 425 ಮೀನುಗಾರರನ್ನು ಬಂಧಿಸಿದೆ ಮತ್ತು 58 ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ. ಈ ಮೀನುಗಾರರ ಪೈಕಿ ಅನೇಕರು ಶ್ರೀಲಂಕಾದ ಜೈಲುಗಳಲ್ಲಿ ಬಂಧನದಲ್ಲಿದ್ದಾರೆ.
ಈ ಚರ್ಚೆಗಳ ಹೊರತಾಗಿಯೂ ಮೀನುಗಾರರ ಬಂಧನ ಘಟನೆಗಳು ಮುಂದುವರೆದಿವೆ. ಇದನ್ನು ವಿರೊಧಿಸಿ ತಮಿಳುನಾಡಿನ ಮೀನುಗಾರರ ಸಂಘಗಳು ಕರಾವಳಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ನಡೆಸಲು ಸಿದ್ಧವಾಗಿವೆ. ಬಂಧನಗಳನ್ನು ವಿರೋಧಿಸಿ ಮೀನುಗಾರರ ಸಂಘಗಳು ವ್ಯಾಪಕ ಪ್ರತಿಭಟನೆಗಳನ್ನು ಆಯೋಜಿಸಲಿವೆ ಎಂದು ತಮಿಳುನಾಡು ಮೀನಾವರ್ ಪೆರವೈನ ಪ್ರಧಾನ ಕಾರ್ಯದರ್ಶಿ ಎ. ತಾಜುದ್ದಿನ್ ಐಎಎನ್ಎಸ್​ಗೆ ತಿಳಿಸಿದ್ದಾರೆ.
“ನಮ್ಮ ಮೀನುಗಾರರ ಜೀವನೋಪಾಯವು ಅಪಾಯದಲ್ಲಿದೆ. ಮೀನುಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಮೀನುಗಾರರು ಮತ್ತು ಅವರ ಕುಟುಂಬದವರು ಸಮುದ್ರಕ್ಕೆ ಇಳಿಯಬೇಕಾದರೆ ಭಯ ಪಡುವಂಥ ಸನ್ನಿವೇಶ ಸೃಷ್ಟಿಯಾಗಿದೆ” ಎಂದು ಅವರು ಹೇಳಿದರು.
ರಾಮನಾಥಪುರಂನ ಮೀನುಗಾರ ಮುಖಂಡ ಕೆ.ಎಂ.ಪೆರಿಯಸಾಮಿ ಮಾತನಾಡಿ, ಈ ಬಂಧನಗಳಿಂದ ಮೀನುಗಾರರು ಮತ್ತು ಅವರ ಕುಟುಂಬಗಳ ಮೇಲೆ ಆಗುತ್ತಿರುವ ಭಾವನಾತ್ಮಕ ಮತ್ತು ಆರ್ಥಿಕ ನಷ್ಟದ ಬಗ್ಗೆ ಆತಂಕ ವ್ಯಕ್ತಪಡಿಸಿದರು. “ಶ್ರೀಲಂಕಾ ನೌಕಾಪಡೆಯು ಸಮುದ್ರದ ಮಧ್ಯದಲ್ಲಿ ನಿರಂತರವಾಗಿ ಮೀನುಗಾರರನ್ನು ಬಂಧಿಸುತ್ತಿರುವುದರಿಂದ ಮತ್ತು ಅವರ ಮೇಲೆ ದಾಳಿ ನಡೆಸುತ್ತಿರುವುದರಿಂದ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ” ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GALWAN VALLEY IN LEH LADAKH:ಭರದ ಕಾರ್ಯಾಚರಣೆ.

Leh (Ladakh) News: ಭಾರತೀಯ ಸೇನೆ ಮತ್ತು ಸ್ಥಳೀಯ ಮಧ್ಯಸ್ಥಗಾರರ ಸಹಯೋಗದಲ್ಲಿ ಅಧಿಕಾರಿಗಳು ಕಣಿವೆಯಲ್ಲಿ ಈ ಯೋಜನೆಗೆ ಮುಂದಾಗಿದ್ದು, ಸ್ಥಳೀಯ ಪ್ರವಾಸಿಗ ಆಕರ್ಷಿಣೀಯ ತಾಣವಾಗಿ ರೂಪಿಸುವ...

PINK SALT BENEFITS FOR HEALTH : ಪಿಂಕ್ ಉಪ್ಪಿನಿಂದ ಆರೋಗ್ಯಕ್ಕೆ ಹಲವು ಪ್ರಯೋಜನ

Pink Salt Benefits for Health News: ಹಿಮಾಲಯನ್ ಪಿಂಕ್ ರಾಕ್ SALT ಅಥವಾ ಪಿಂಕ್ ಉಪ್ಪು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ಹಲವು ಪ್ರಯೋಜನಗಳು ದೊರೆಯುತ್ತವೆ...

MACHINERY CAPITAL : ಕರ್ನಾಟಕವು ದೇಶದ ಯಂತ್ರೋಪಕರಣಗಳ ರಾಜಧಾನಿ

Bangalore News: ಭಾರತದ MACHINERY ಉದ್ಯಮದಲ್ಲಿ ಕರ್ನಾಟಕ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ ಎಂದು ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ತಿಳಿಸಿದರು.MACHINERY ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ...

SHAH JAHAN URUS: ಪ್ರವಾಸಿಗರಿಗೆ ಉಚಿತ ಪ್ರವೇಶ, ಬಿಗಿ ಭದ್ರತೆ.

Agra (Uttar Pradesh) News : ಉಚಿತ ಅಷ್ಟೇ ಅಲ್ಲ, ಪ್ರವಾಸಿಗರು ಚಕ್ರವರ್ತಿ ಷಹಜಹಾನ್ ಮತ್ತು ಬೇಗಂ ಮುಮ್ತಾಜ್ ಅವರ ನಿಜವಾದ ಸಮಾಧಿಗಳನ್ನು ವೀಕ್ಷಿಸಬಹುದಾಗಿದೆ.ಜನವರಿ 26,...