spot_img
spot_img

9 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ

spot_img
spot_img

Share post:

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಕೆಂಪಕೆರೆಯನ್ನು ಪ್ರವಾಸಿತಾಣವಾಗಿ ಪುನರಾಭಿವೃದ್ಧಿ ಮಾಡುವ ಕಾಮಗಾರಿ ಬಹುತೇಕ ಪೂರ್ಣವಾಗಿದೆ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಹೊಸ ರೂಪ ಪಡೆದು ಇನ್ನೇನು ಉದ್ಘಾಟನೆಯಾಗಬೇಕಿದ್ದ ಕೆಂಪಕೆರೆ ಮತ್ತೆ ಕಳೆಗುಂದುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರವಾಸೋದ್ಯಮ ಇಲಾಖೆ 5 ಕೋಟಿ, ಹು-ಧಾ ಮಹಾನಗರ ಪಾಲಿಕೆ 15ನೇ ಹಣಕಾಸು ಅನುದಾನದಡಿ 1.50 ಕೋಟಿ ಹಾಗೂ ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ 3.50 ಕೋಟಿ ಸೇರಿ ಒಟ್ಟು 9 ಕೋಟಿ ರೂ. ವೆಚ್ಚದಲ್ಲಿ ಇದನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ.
ಈ ಕೆರೆಯನ್ನು ಪ್ರವಾಸೋದ್ಯಮ ತಾಣವಾಗಿಸುವ ಉದ್ದೇಶದಿಂದ ಈಗಾಗಲೇ ಕೆರೆ ಸ್ವಚ್ಛಗೊಳಿಸಿ ಹೂಳೆತ್ತಲಾಗಿದೆ. ವಾಕಿಂಗ್ ಪಾತ್, ಪ್ರವೇಶ ದ್ವಾರ ನಿರ್ಮಾಣದ ಜೊತೆಗೆ ಹತ್ತಾರು ಬಗೆಯ ಹೂವಿನ ಗಿಡಗಳನ್ನು ಬೆಳೆಸಲಾಗಿದೆ. ಉದ್ಯಾನದ ಸುತ್ತಲೂ ತಡೆಗೋಡೆ ನಿರ್ಮಾಣ, ವಿದ್ಯುತ್ ದೀಪಗಳು, ಫುಡ್ ಕೋರ್ಟ್ ನಿರ್ಮಿಸಲಾಗಿದೆ. ಅರ್ಬನ್ ಫಾರೆಸ್ಟ್ ಪ್ರದೇಶ ನಿರ್ಮಾಣ, ಚಿಕ್ಕ ಮಕ್ಕಳಿಗೆ ಆಡಲು ವಿವಿಧ ಆಟದ ಸಾಮಗ್ರಿಗಳು, ಪಾರ್ಕಿಂಗ್, ಕೆರೆಯ ಸೌಂದರ್ಯ ಸವಿಯಲು ಮೂರು ಕಡೆ ಸೇತುವೆ, ಬೋಟಿಂಗ್ ವ್ಯವಸ್ಥೆಯನ್ನೂ ಮಾಡಲಾಗಿದೆ.
ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸಣ್ಣ ಪುಟ್ಟ ಕೆಲಸ ಬಾಕಿ ಇದೆ. ಇದೇ ನವೆಂಬರ್​ನಲ್ಲಿ ಉದ್ಘಾಟನೆ ಕೂಡ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಈ ಮಧ್ಯೆ ಸದ್ಯ ಸದ್ಯ ಕೆರೆಯಲ್ಲಿ ಅಂತರಗಂಗೆ ಬೆಳೆದು ಇಡೀ ಕೆರೆಯನ್ನು ಆವರಿಸಿದೆ. ಆವರಣದಲ್ಲಿ ಗಿಡಗಂಟಿಗಳು ಬೆಳೆದಿದ್ದು, ಹಳೆಯ ಕೆರೆಯಂತೆಯೇ ಕಂಡುಬರುತ್ತಿದೆ. ಉದ್ಯಾನದಲ್ಲಿ ಕಸದರಾಶಿ, ವಿದ್ಯುತ್ ಕಂಬಗಳು ತುಕ್ಕು ಹಿಡಿದಿರುವದು, ಹಸಿರಿನಿಂದ ಕಂಗೊಳ್ಳಿಸಬೇಕಾದ ಪಾರ್ಕ್ ಒಣಗುತ್ತಿರುವುದರಿಂದ ಕೆರೆ ಕಳೆದುಕೊಳ್ಳುತ್ತಿದೆ.
ಪ್ರವಾಸಿಗರನ್ನು ಸೆಳೆಯಲು ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ. ಬೋಟಿಂಗ್, ವ್ಯೂ ಪಾಯಿಂಟ್, ಫುಡ್ ಕೋರ್ಟ್, ಒಂದು ಕಿ.ಮೀ ಕೆರೆಯ ಸುತ್ತ ಪಾತ್ ವೇ, ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಮಕ್ಕಳಿಗೆ ಆಟದ ಸಾಮಗ್ರಿಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಸದ್ಯದಲ್ಲೇ ಶಾಸಕ ಪ್ರಸಾದ ಅಬ್ಬಯ್ಯ ಅವರ ಜೊತೆ ಚರ್ಚಿಸಿ ಆದಷ್ಟು ಬೇಗ ಉದ್ಘಾಟನೆ ಮಾಡುವುದಾಗಿ ತಿಳಿಸಿದರು.
ಉದ್ಘಾಟನೆಯಾದ ಬಳಿಕ ಅದರ ನಿರ್ವಹಣೆಗೆ ಟೆಂಡರ್ ಕರೆಯಲಾಗುವುದು. ಸಾರ್ವಜನಿಕರಿಗೆ ಬೆಳಿಗ್ಗೆ ಹಾಗೂ ಸಂಜೆ ವಾಯುವಿಹಾರಕ್ಕೆ ಉಚಿತ ಪ್ರವೇಶ ಇರಲಿದೆ. ಇನ್ನೂ ಮಧ್ಯಾಹ್ನ ಬರುವವರಿಗೆ ಶುಲ್ಕ ನಿಗದಿಪಡಿಸಲಾಗುವುದು. ಇದರಿಂದ ಸಂಗ್ರಹವಾಗುವ ಹಣದಿಂದ ನಿರ್ವಹಣೆ ಹಾಗೂ ಸಿಬ್ಬಂದಿಗೆ ಸಂಬಳ ನೀಡಲಾಗುವುದು ಎಂದು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ವಿಜಯಕುಮಾರ್ ತಿಳಿಸಿದರು.
ಕೋಟ್ಯಾಂತರ ರೂಪಾಯಿ ‌ಖರ್ಚು ಮಾಡಿ ಕೆರೆ ಅಭಿವೃದ್ಧಿ ಮಾಡಲಾಗಿದೆ. ‌ಆದ್ರೆ ಕೆರೆಯಲ್ಲಿ ‌ಕಳೆ ತುಂಬಿದೆ. ಇಲ್ಲಿನ‌ ಉಪಕರಣಗಳು ತುಕ್ಕು ಹಿಡಿಯುವ ಹಂತಕ್ಕೆ ಬಂದಿವೆ. ಸರ್ಕಾರ ಹಾಗೂ ಮಹಾನಗರ ಪಾಲಿಕೆ ಕೂಡಲೇ ಉದ್ಘಾಟನೆ ಮಾಡಿ ಸಾರ್ವಜನಿಕರಿಗೆ ಮುಕ್ತ ಮಾಡಬೇಕು ಎಂದು ಸ್ಥಳೀಯ ಮಂಜುನಾಥ ಹೆಬಸೂರು ಒತ್ತಾಯಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...