spot_img
spot_img

9 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಕೆಂಪಕೆರೆಯನ್ನು ಪ್ರವಾಸಿತಾಣವಾಗಿ ಪುನರಾಭಿವೃದ್ಧಿ ಮಾಡುವ ಕಾಮಗಾರಿ ಬಹುತೇಕ ಪೂರ್ಣವಾಗಿದೆ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಹೊಸ ರೂಪ ಪಡೆದು ಇನ್ನೇನು ಉದ್ಘಾಟನೆಯಾಗಬೇಕಿದ್ದ ಕೆಂಪಕೆರೆ ಮತ್ತೆ ಕಳೆಗುಂದುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರವಾಸೋದ್ಯಮ ಇಲಾಖೆ 5 ಕೋಟಿ, ಹು-ಧಾ ಮಹಾನಗರ ಪಾಲಿಕೆ 15ನೇ ಹಣಕಾಸು ಅನುದಾನದಡಿ 1.50 ಕೋಟಿ ಹಾಗೂ ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ 3.50 ಕೋಟಿ ಸೇರಿ ಒಟ್ಟು 9 ಕೋಟಿ ರೂ. ವೆಚ್ಚದಲ್ಲಿ ಇದನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ.
ಈ ಕೆರೆಯನ್ನು ಪ್ರವಾಸೋದ್ಯಮ ತಾಣವಾಗಿಸುವ ಉದ್ದೇಶದಿಂದ ಈಗಾಗಲೇ ಕೆರೆ ಸ್ವಚ್ಛಗೊಳಿಸಿ ಹೂಳೆತ್ತಲಾಗಿದೆ. ವಾಕಿಂಗ್ ಪಾತ್, ಪ್ರವೇಶ ದ್ವಾರ ನಿರ್ಮಾಣದ ಜೊತೆಗೆ ಹತ್ತಾರು ಬಗೆಯ ಹೂವಿನ ಗಿಡಗಳನ್ನು ಬೆಳೆಸಲಾಗಿದೆ. ಉದ್ಯಾನದ ಸುತ್ತಲೂ ತಡೆಗೋಡೆ ನಿರ್ಮಾಣ, ವಿದ್ಯುತ್ ದೀಪಗಳು, ಫುಡ್ ಕೋರ್ಟ್ ನಿರ್ಮಿಸಲಾಗಿದೆ. ಅರ್ಬನ್ ಫಾರೆಸ್ಟ್ ಪ್ರದೇಶ ನಿರ್ಮಾಣ, ಚಿಕ್ಕ ಮಕ್ಕಳಿಗೆ ಆಡಲು ವಿವಿಧ ಆಟದ ಸಾಮಗ್ರಿಗಳು, ಪಾರ್ಕಿಂಗ್, ಕೆರೆಯ ಸೌಂದರ್ಯ ಸವಿಯಲು ಮೂರು ಕಡೆ ಸೇತುವೆ, ಬೋಟಿಂಗ್ ವ್ಯವಸ್ಥೆಯನ್ನೂ ಮಾಡಲಾಗಿದೆ.
ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸಣ್ಣ ಪುಟ್ಟ ಕೆಲಸ ಬಾಕಿ ಇದೆ. ಇದೇ ನವೆಂಬರ್​ನಲ್ಲಿ ಉದ್ಘಾಟನೆ ಕೂಡ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಈ ಮಧ್ಯೆ ಸದ್ಯ ಸದ್ಯ ಕೆರೆಯಲ್ಲಿ ಅಂತರಗಂಗೆ ಬೆಳೆದು ಇಡೀ ಕೆರೆಯನ್ನು ಆವರಿಸಿದೆ. ಆವರಣದಲ್ಲಿ ಗಿಡಗಂಟಿಗಳು ಬೆಳೆದಿದ್ದು, ಹಳೆಯ ಕೆರೆಯಂತೆಯೇ ಕಂಡುಬರುತ್ತಿದೆ. ಉದ್ಯಾನದಲ್ಲಿ ಕಸದರಾಶಿ, ವಿದ್ಯುತ್ ಕಂಬಗಳು ತುಕ್ಕು ಹಿಡಿದಿರುವದು, ಹಸಿರಿನಿಂದ ಕಂಗೊಳ್ಳಿಸಬೇಕಾದ ಪಾರ್ಕ್ ಒಣಗುತ್ತಿರುವುದರಿಂದ ಕೆರೆ ಕಳೆದುಕೊಳ್ಳುತ್ತಿದೆ.
ಪ್ರವಾಸಿಗರನ್ನು ಸೆಳೆಯಲು ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ. ಬೋಟಿಂಗ್, ವ್ಯೂ ಪಾಯಿಂಟ್, ಫುಡ್ ಕೋರ್ಟ್, ಒಂದು ಕಿ.ಮೀ ಕೆರೆಯ ಸುತ್ತ ಪಾತ್ ವೇ, ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಮಕ್ಕಳಿಗೆ ಆಟದ ಸಾಮಗ್ರಿಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಸದ್ಯದಲ್ಲೇ ಶಾಸಕ ಪ್ರಸಾದ ಅಬ್ಬಯ್ಯ ಅವರ ಜೊತೆ ಚರ್ಚಿಸಿ ಆದಷ್ಟು ಬೇಗ ಉದ್ಘಾಟನೆ ಮಾಡುವುದಾಗಿ ತಿಳಿಸಿದರು.
ಉದ್ಘಾಟನೆಯಾದ ಬಳಿಕ ಅದರ ನಿರ್ವಹಣೆಗೆ ಟೆಂಡರ್ ಕರೆಯಲಾಗುವುದು. ಸಾರ್ವಜನಿಕರಿಗೆ ಬೆಳಿಗ್ಗೆ ಹಾಗೂ ಸಂಜೆ ವಾಯುವಿಹಾರಕ್ಕೆ ಉಚಿತ ಪ್ರವೇಶ ಇರಲಿದೆ. ಇನ್ನೂ ಮಧ್ಯಾಹ್ನ ಬರುವವರಿಗೆ ಶುಲ್ಕ ನಿಗದಿಪಡಿಸಲಾಗುವುದು. ಇದರಿಂದ ಸಂಗ್ರಹವಾಗುವ ಹಣದಿಂದ ನಿರ್ವಹಣೆ ಹಾಗೂ ಸಿಬ್ಬಂದಿಗೆ ಸಂಬಳ ನೀಡಲಾಗುವುದು ಎಂದು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ವಿಜಯಕುಮಾರ್ ತಿಳಿಸಿದರು.
ಕೋಟ್ಯಾಂತರ ರೂಪಾಯಿ ‌ಖರ್ಚು ಮಾಡಿ ಕೆರೆ ಅಭಿವೃದ್ಧಿ ಮಾಡಲಾಗಿದೆ. ‌ಆದ್ರೆ ಕೆರೆಯಲ್ಲಿ ‌ಕಳೆ ತುಂಬಿದೆ. ಇಲ್ಲಿನ‌ ಉಪಕರಣಗಳು ತುಕ್ಕು ಹಿಡಿಯುವ ಹಂತಕ್ಕೆ ಬಂದಿವೆ. ಸರ್ಕಾರ ಹಾಗೂ ಮಹಾನಗರ ಪಾಲಿಕೆ ಕೂಡಲೇ ಉದ್ಘಾಟನೆ ಮಾಡಿ ಸಾರ್ವಜನಿಕರಿಗೆ ಮುಕ್ತ ಮಾಡಬೇಕು ಎಂದು ಸ್ಥಳೀಯ ಮಂಜುನಾಥ ಹೆಬಸೂರು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

HIGH COURT:ಕ್ರಿಮಿನಲ್ ಪ್ರಕರಣ ತ್ವರಿತ ವಿಚಾರಣೆಗಾಗಿ ವಿದ್ಯುನ್ಮಾನ ಸಾಕ್ಷ್ಯಾಗಳ ಪರಿಶೀಲನೆ.

Bangalore News: ಕ್ರಿಮಿನಲ್ ಪ್ರಕರಣಗಳ ವಿಚಾರಣೆ ತ್ವರಿತವಾಗಿ ನಡೆಸಬೇಕಿದೆ. ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು ನ್ಯಾಯಾಲಯವು ಪರಿಗಣಿಸಬೇಕಾದರೆ, ಅದನ್ನು ಪರೀಕ್ಷಕರು/ಪರಿಣಿತರು ದೃಢೀಕರಿಸಬೇಕಿದೆ ಎಂದು ಹೈಕೋರ್ಟ್ ತಿಳಿಸಿದೆ. ಅದರ ಪ್ರಕಾರ...

UNION BUDGET 2025 : ಈ ಬಾರಿಯ ಕೇಂದ್ರ ಬಜೆಟ್ಲ್ಲಿ ಸಿಗುತ್ತಾ ಶಿವಮೊಗ್ಗ to ಚನ್ನಗಿರಿ ರೈಲು ಯೋಜನೆಗೆ ಗ್ರೀನ್ ಸಿಗ್ನಲ್?

Davangere News: ಬಹುದಿನದ ಯೋಜನೆಗಾಗಿ ಚನ್ನಗಿರಿ ಜನ ಕಾಯುತ್ತಿದ್ದು, ಬರುವ 2025ನೇ ಸಾಲಿನ UNIONಬಜೆಟ್​​ನಲ್ಲಿ ನೂತನ ರೈಲು ಮಾರ್ಗಕ್ಕೆ UNIONಸರ್ಕಾರ ಗ್ರೀನ್ ಸಿಗ್ನಲ್ ಕೊಡಬಹುದು ಎಂಬ...

MICRO FINANCE TORTURE:ಬೀದಿ ಪಾಲಾದ ಕುಟುಂಬ; ಡಿಸಿ ಹೇಳಿದ್ದಿಷ್ಟು .

Belgaum News: ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿರುವ ಮೈಕ್ರೋ FINANCE ಸಿಬ್ಬಂದಿ, ಕುಟುಂಬವೊಂದರ ಮನೆ ಜಪ್ತಿ ಮಾಡಿದೆ.ಕಳೆದ 5 ವರ್ಷಗಳ...

SAMSUNG GALAXY S25 SERIES : ಭಾರತೀಯ ಮಾರುಕಟ್ಟೆಗೆ ಕಾಲಿಟ್ಟ ಸ್ಯಾಮ್ಸಂಗ್ ಹೊಸ ಸ್ಮಾರ್ಟ್ಫೋನ್ಗಳು

Hyderabad News: ಬಹುನಿರೀಕ್ಷಿತ SAMSUNG GALAXY S25ಸರಣಿಯು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳು ಇಲ್ಲಿವೆ.ದಕ್ಷಿಣ ಕೊರಿಯಾದ ಟೆಕ್ ದೈತ್ಯ...