spot_img
spot_img

KUMBH MELA : ಮಹಾಕುಂಭಕ್ಕೆ ಹೋಗಲು ಆಗದ ಕನ್ನಡಿಗರಿಗೆ ಸರ್ಕಾರದಿಂದ ಗುಡ್ನ್ಯೂಸ್

spot_img
spot_img

Share post:

Prayag Raj News:

ರಾಜ್ಯ ಸರ್ಕಾರ ನಾಡಿನ ಜನತೆಗೆ ಸಿಹಿಸುದ್ದಿ ನೀಡಿದೆ. ಉತ್ತರಪ್ರದೇಶದ ಪ್ರಯಾಗರಾಜ್​ಗೆ ತೆರಳಿ ಪುಣ್ಯಸ್ನಾನ ಮಾಡಲು ಸಾಧ್ಯ ಆಗುತ್ತಿಲ್ಲ ಎಂದು ಕೊರಗುತ್ತಿದ್ದವರಿಗೆ ಕರುನಾಡಿನ ಮಣ್ಣಿನಲ್ಲೇ KUMBH MELAವನ್ನ ಕಣ್ತುಂಬಿಕೊಳ್ಳುವ ಸೌಭಗ್ಯವನ್ನ ಒದಗಿಸಿಕೊಟ್ಟಿದೆ. ಅಷ್ಟಕ್ಕೂ ಈ KUMBH MELA ಜರುಗುತ್ತಿರುವುದು ಎಲ್ಲಿ?.

KUMBH MELA.. ಸದ್ಯ ಈ ಶಬ್ಧ ಇಡೀ ವಿಶ್ವವನ್ನೇ ಭಾರತದತ್ತ ತಿರುಗಿನೋಡುವಂತೆ ಮಾಡಿದೆ.. ಸನಾತನ ಧರ್ಮದ ಕೀರ್ತಿಪತಾಕೆಯನ್ನ ಆಕಾಶದೆತ್ತರಕ್ಕೆ ಪುಟಿದೆಬ್ಬಿಸಿರೋ ಈ ಮಹಾಮೇಳ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮದಲ್ಲಿ ಹೊಸ ದೃಶ್ಯಕಾವ್ಯವನ್ನೇ ಸೃಷ್ಟಿಸಿದೆ.

KUMBH MELA ಜಗತ್ತಿನ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳ ದಾಖಲೆಗಳನ್ನ ಸರಿಗಟ್ಟಿದೆ. ಕೋಟಿ ಕೋಟಿ ಭಕ್ತರ ಮಹಾಸಂಗಮ ಹಾಗೂ ಲಕ್ಷಾಂತರ ಸಾಧು-ಸಂತರ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಗಿರೋ ಈ ಮಹಾಮೇಳ ಅದೆಷ್ಟೋ ಜನರಿಗೆ ಕನಸಾಗೇ ಉಳಿದಿದೆ. ಕುಂಭಮೇಳವನ್ನ ಕಾಣಲಾಗಲಿಲ್ಲವಲ್ಲ ಎಂಬ ಕೊರಗಿನಲ್ಲಿರೋ ಕರುನಾಡಿನ ಜನತೆಗೆ ಸರ್ಕಾರ ಒಂದು ಗುಡ್​ ನ್ಯೂಸ್​ ನೀಡಿದೆ.

The glory of Kumbh Mela, which has grown in Karunad too!

ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 6 ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ KUMBH MELAದ ಅಂಗವಾಗಿ ಸಕಲ ಸಿದ್ಧತೆ ಕೈಗೊಂಡಿದೆ.

ಇಂದು ಬೆಳಗ್ಗೆ 9 ರಿಂದ 9.30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12 ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. KUMBH MELAವನ್ನ ಮಿಸ್​ ಮಾಡಿಕೊಂಡ ಕುರುನಾಡ ಜನೆತೆಗೆ ಸರ್ಕಾರ ಬಂಪರ್​ ಗಿಫ್ಟ್​ ಒಂದನ್ನ ನೀಡಿದೆ.

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರೋ ಮಹಾಕುಂಭಮೇಳಕ್ಕೆ ತೆರಳಲು ಆಗದೇ ಇರುವಂತವರು ಕರುನಾಡ ಮಣ್ಣಿನಲ್ಲೇ ಕುಂಭಮೇಳದ ವೈಭವ ಕಣ್ತುಂಬಿಕೊಳ್ಳುವ ಸದಾವಕಾಶ ಒದಗಿಬಂದಿದೆ.

ಮೈಸೂರು ಜಿಲ್ಲೆಯ ತಿರುಮಕೂಡಲು ನರಸೀಪುರದಲ್ಲಿ ಕುಂಭಮೇಳ ಏರ್ಪಡಿಸಲಾಗಿದೆ. ಕಾವೇರಿ, ಕಪಿಲ ಹಾಗೂ ಸ್ಫಟಿಕ ನದಿಗಳು ಸೇರುವ ಅಪರೂಪದ ಜಾಗದಲ್ಲಿ ಇಂದಿನಿಂದ 3 ದಿನಗಳ ಕಾಲ ಕುಂಭಮೇಳ ನಡೆಯಲಿದೆ.

Deployment of divers in many places

ಇಂದು ತ್ರಯೋದಶಿ ಹಿನ್ನೆಲೆ ಪುಷ್ಯ ಪ್ರಾತಃಕಾಲ 9 ಗಂಟೆಗೆ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ..

ಮೈಸೂರಿನಲ್ಲಿ ನಡೆಯುತ್ತಿರೋ ಮಿನಿಕುಂಭಮೇಳ ಹೊಸ ಬಾಷ್ಯ ಬರೆಯಲು ಅಣಿಯಾಗಿದೆ. ಕುಂಭಮೇಳದ ಅಂಗವಾಗಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ, ಲೈಟಿಂಗ್ಸ್ ಅಳವಡಿಕೆ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.

ನದಿ ಪಾತ್ರದ ಹಲವೆಡೆ ಮುಳುಗುತಜ್ಞರನ್ನ ನಿಯೋಜನೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.

ಇದನ್ನು ಓದಿರಿ : Tharoor Says Uninterrupted Dialogue With Pak Not Possible, But Bats For People-To-People Ties

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...