spot_img
spot_img

INVEST KARNATAKA 2025:2030ರೊಳಗೆ ₹7.5 ಲಕ್ಷ ಕೋಟಿ ಹೂಡಿಕೆ, 20 ಲಕ್ಷ ಉದ್ಯೋಗ ಸೃಷ್ಟಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಇಂದು ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸದೃಢ ನೀತಿ ನಿರೂಪಣೆ, ಸಕ್ರಿಯ ಆಡಳಿತ ಮತ್ತು ವ್ಯವಹಾರ-ಸ್ನೇಹಿ ಪರಿಸರ ವ್ಯವಸ್ಥೆಯಿದ್ದು, ಇಲ್ಲಿ ಮಾಡುವ ಪ್ರತಿ ಹೂಡಿಕೆಯೂ ಯಶಸ್ವಿಯಾಗುವಂತೆ ಹಾಗೂ ಸುಸ್ಥಿರ ಬೆಳವಣಿಗೆಗೆ ಕೊಡುಗೆ ನೀಡುವಂತೆ ಖಾತ್ರಿಪಡಿಸುತ್ತೇವೆ ಎಂದರು.2030 ರೊಳಗೆ 7.5 ಲಕ್ಷ ಕೋಟಿ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಜನೆಯ ಗುರಿ ಹೊಂದಲಾಗಿದೆ ಎಂದು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ KARNATAKA ಸದಾ ಮುಂಚೂಣಿಯಲ್ಲಿರುವ ರಾಜ್ಯ.

ಇಂದು ದೇಶದಲ್ಲಿಯೇ KARNATAKA ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವೆಂಬ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ದೃಢೀಕರಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ನೂತನ ಕೈಗಾರಿಕಾ ನೀತಿ-2025, ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಳ್ಳುವ ಬೆಳವಣಿಗೆಯನ್ನು ಸೇರಿದಂತೆ KARNATAKA ದ ಮಹತ್ವಾಕಾಂಕ್ಷಿ ದೂರದೃಷ್ಟಿಯನ್ನು ಒತ್ತಿಹೇಳಿದೆ. ಉತ್ಪಾದನಾ ವಲಯದಲ್ಲಿ ಶೇ.12 ರಷ್ಟು ವಾರ್ಷಿಕ ಬೆಳವಣಿಗೆಯ ದರದ ಗುರಿಯನ್ನು ಹೊಂದಿದ್ದು, 2030 ರೊಳಗೆ 7.5 ಲಕ್ಷ ಕೋಟಿ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಜನೆಯ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಜಾಗತಿಕ ಹೂಡಿಕೆದಾರರ ಸಮಾವೇಶ – ಇನೆವೆಸ್ಟ್ KARNATAKA -2025ರಲ್ಲಿ ಆಯೋಜಿಸಿರುವ ನಾವೀನ್ಯತೆಯ ಭವಿಷ್ಯ ಕುರಿತ ವಸ್ತುಪ್ರದರ್ಶನವು ಸುಮಾರು 40ಕ್ಕೂ ಹೆಚ್ಚು ಜಾಗತಿಕ ಕಂಪನಿಗಳು, ಸ್ಟಾರ್ಟ್ ಅಪ್ ಕಂಪನಿಗಳಿಂದ, ಡ್ರೋನ್ ತಂತ್ರಜ್ಞಾನ, ಅಂತರಿಕ್ಷ ತಂತ್ರಜ್ಞಾನ, ಆರೋಗ್ಯ ವಲಯ, ಕೃಷಿ ಹಾಗೂ ಆರೋಗ್ಯ ತಂತ್ರಜ್ಞಾನ ಮತ್ತು ವೈಮಾನಿಕ ಮತ್ತು ರಕ್ಷಣಾ ವಲಯಗಳ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ವಲಯಗಳ ಕುರಿತು ಸ್ವಾಯತ್ತ ಪರಿಹಾರಗಳನ್ನು ಒದಗಿಸುತ್ತಿರುವುದನ್ನು ಬಿಂಬಿಸಲಿದೆ.

ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಸೂಕ್ತವಾದ ಸ್ಥಳವನ್ನು ಗುರುತಿಸುವ ಕಾರ್ಯ ಸಕ್ರಿಯವಾಗಿ ನಡೆದಿದೆ. ಬೆಂಗಳೂರಿನ ಜಾಗತಿಕ ಸಂಪರ್ಕ ಮತ್ತು ಆರ್ಥಿಕ ಸಾಮರ್ಥ್ಯವನ್ನು ಇದು ಇನ್ನಷ್ಟು ಉತ್ತೇಜಿಸಲಿದೆ. ರಾಜ್ಯದ 320 ಕಿ.ಮೀ ಉದ್ದದ ಕರಾವಳಿ ಪ್ರದೇಶವು ಅನೇಕ ಬಂದರುಗಳನ್ನು ಹೊಂದಿದ್ದು, ಕಡಲತೀರದ ವ್ಯಾಪಾರ, ಮೀನುಗಾರಿಕೆ ಮತ್ತು ಕರಾವಳಿ ತೀರದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿವೆ.

ಸೆಮಿಕಂಡಕ್ಟರ್ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ತನ್ನ ಸ್ಥಾನವನ್ನು ಭದ್ರಗೊಳಿಸಿಕೊಳ್ಳುತ್ತಿರುವ KARNATAKA ಇಂಟೆಲ್, ಟಿಎಸ್‍ಎಂಸಿ ಮತ್ತು ಮೈಕ್ರಾನ್ ಸಂಸ್ಥೆಗಳಿಂದ ಪ್ರಮುಖ ಹೂಡಿಕೆಗಳನ್ನು ಹೊಂದಿದೆ ಎಂದು ತಿಳಿಸಿದರು.15 ಸಾವಿರಕ್ಕೂ ಹೆಚ್ಚು ಸ್ಟಾರ್ಟ್‍ಅಪ್ ಹಾಗೂ 40ಕ್ಕೂ ಹೆಚ್ಚು ಯೂನಿಕಾರ್ನ್ ಹೊಂದಿರುವ KARNATAKA ಭಾರತದ ಅತಿದೊಡ್ಡ ಸ್ಟಾರ್ಟ್ ಅಪ್ ಹಬ್ ಮತ್ತು ಜಾಗತಿಕವಾಗಿ ಮೊದಲ ಐದರಲ್ಲಿ ಗುರುತಿಸಿಕೊಂಡಿದೆ.

ರಾಜ್ಯದಲ್ಲಿ ಟೆಸ್ಲಾ, ಓಲಾ ಎಲೆಕ್ಟ್ರಿಕ್, ಏಥರ್ ಎನರ್ಜಿ ಮತ್ತು ಮಹಿಂದ್ರಾ ಎಲೆಕ್ಟ್ರಿಕ್ ಹೂಡಿಕೆ ಮಾಡುವ ಮೂಲಕ KARNATAKA , ಭಾರತದ ಇವಿ ರಾಜಧಾನಿಯಾಗಿ ಹೊರಹೊಮ್ಮಿದೆ. ಶೇ. 65 ಕ್ಕೂ ಹೆಚ್ಚು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆ ರಾಜ್ಯದಲ್ಲಿ ಆಗುತ್ತಿದ್ದು, KARNATAKA ಭಾರತದ ಅತಿ ದೊಡ್ಡ ಏರೋಸ್ಪೇಸ್ ಕೇಂದ್ರವೂ ಆಗಿದೆ ಎಂದು ಸಿಎಂ ತಿಳಿಸಿದರು.

ಭಾರತದ ಎಲೆಕ್ಟ್ರಾನಿಕ್ ಉತ್ಪನ್ನಗಳ ರಫ್ತಿನಲ್ಲಿ ಶೇ.60 ರಷ್ಟನ್ನು ಪೂರೈಸುವ ಮೂಲಕ KARNATAKA ನೆಕ್ಸ್ಟ್ ಜೆನ್ ಚಿಪ್ಸ್ ಹಾಗೂ ಸಾಧನಗಳ ಜಾಗತಿಕ ಪೂರೈಕೆದಾರ ಎನಿಸಿದೆ. ಇನ್‍ಫೋಸಿಸ್, ವಿಪ್ರೋ, ಟಿಸಿಎಸ್, ಗೂಗಲ್, ಅಮೆಜಾನ್ ಮತ್ತು ಆಪಲ್ ನಂತಹ ಪ್ರಮುಖ ಟೆಕ್ ಕಂಪನಿಗಳಿಗೆ ನೆಲೆಯಾಗಿರುವ ಕರ್ನಾಟಕ ಭಾರತದ ಸಾಫ್ಟ್ ವೇರ್ ರಫ್ತಿಗೆ ಶೇ. 40 ರಷ್ಟು ಕೊಡುಗೆ ನೀಡುತ್ತಿದೆ. ಡಿಜಿಟಲ್ ಅರ್ಥಿಕತೆಯನ್ನು ಭವಿಷ್ಯಕ್ಕೆ ಸೂಕ್ತವಾಗುವ ರೀತಿಯಲ್ಲಿ ಅಣಿಮಾಡಲು KARNATAKA       ವು ಎಐ ಆಡಳಿತ, ಬ್ಲಾಕ್ ಚೈನ್ ಅಳವಡಿಕೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ಗಳಲ್ಲಿ ಹೂಡಿಕೆ ಮಾಡುತ್ತಿದೆ ಎಂದು ಹೇಳಿದರು.

 

ಇದನ್ನು ಓದಿರಿ :INVEST KARNATAKA 2025:ಕರ್ನಾಟಕದಲ್ಲಿ ಅಮೆರಿಕದ ಲ್ಯಾಮ್ ರಿಸರ್ಚ್ ಕಂಪೆನಿಯಿಂದ ₹10 ಸಾವಿರ ಕೋಟಿ ಹೂಡಿಕೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...