spot_img
spot_img

BOOK LOVERS DAY: ಮಂಗಳೂರಿನಲ್ಲಿ ರಂಗ ಸಂಗಾತಿಯ ವಿಶಿಷ್ಟ ಕಲ್ಪನೆ

spot_img
spot_img

Share post:

Mangalore News:

ಇಡೀ ದಿನ BOOKಗಳನ್ನು ಬಿಡುಗಡೆ ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಲು ಕಾರ್ಯಕ್ರಮ ಆಯೋಜಿಸಿದೆ. ಈ ಬಾರಿ 10 ಕೃತಿಗಳು ಬಿಡುಗಡೆಗೊಳ್ಳಲಿವೆ.ಫೆಬ್ರವರಿ 14ರಂದು ಜಗತ್ತಿನೆಲ್ಲೆಡೆ ವ್ಯಾಲೆಂಟೈನ್ಸ್​ ಡೇ ಆಚರಿಸಲಾಗುತ್ತದೆ. ಪ್ರೇಮಿಗಳ ದಿನಾಚರಣೆಯನ್ನು ಯುವ ಜೋಡಿಗಳು ಸಂಭ್ರಮಿಸುತ್ತಾರೆ. ಆದರೆ, ಮಂಗಳೂರಿನಲ್ಲಿ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ BOOK ಓದುವ ಹವ್ಯಾಸ ಹೆಚ್ಚಿಸಬೇಕೆಂಬ ಉದ್ದೇಶದಿಂದ ಫೆ.14 ಅನ್ನು BOOK ಪ್ರೇಮಿಗಳ ದಿನವಾಗಿ ವಿನೂತನವಾಗಿ ಆಚರಿಸಲು ನಿರ್ಧರಿಸಿದೆ.

ಮಂಗಳೂರಿನಲ್ಲಿ ವ್ಯಾಲೆಂಟೈನ್ಸ್ ಡೇಯನ್ನು BOOK ಪ್ರೇಮಿಗಳ ದಿನವೆಂದು ಆಚರಿಸಲು ನಿರ್ಧರಿಸಲಾಗಿದ್ದು, ಇಡೀ ದಿನದ ಕಾರ್ಯಕ್ರಮದಲ್ಲಿ BOOKಗಳ ಬಿಡುಗಡೆ ಹಾಗೂ ಚಿತ್ರರಚನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.ಆ ದಿನ ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ BOOK ಪ್ರೇಮಿಗಳ ದಿನಾಚರಣೆ ನಡೆಯಲಿದೆ. ಲೇಖಕಿ ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಕಾತೀಶ್ವರ ವಚನಗಳು’, ಪ್ರೊ. ಅಕ್ಷಯ ಆರ್.

ಶೆಟ್ಟಿ ಅವರ ‘ಅವಳೆಂದರೆ ಬರಿ ಹೆಣ್ಣೆ’ ಕನ್ನಡ ಕಥೆಗಳು, ಪ್ರಕಾಶ್ ವಿ.ಎನ್. ಅವರ ‘ನಮ್ಮವನು ಶ್ರೀ ರಾಮಚಂದ್ರ’ ಕನ್ನಡ ನಾಟಕ, ಡಾ.ವಿಶ್ವನಾಥ ಬದಿಕಾನ ಅವರ ‘ಕನ್ನಡ ಜಾನಪದ ಅಧ್ಯಯನದ ಮೊದಲ ಘಟ್ಟ’ ಸಂಶೋಧನಾ ಗ್ರಂಥ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರ ‘ಸೃಷ್ಟಿ ಸಿರಿಯಲಿ ಪುಷ್ಪವೃಷ್ಟಿ’ ಕನ್ನಡ ಕವನ ಸಂಕಲನ, ಅಕ್ಷತಾರಾಜ್ ಪೆರ್ಲ ಅವರ ‘ನೆಲ ಉರುಳು’ ಕನ್ನಡ ನಾಟಕ, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ‘ನೆಪವು ಸಿಕ್ಕಿದೆ ಬದುಕಿಗೆ’ ಕನ್ನಡ ಕವನ ಸಂಕಲನ, ಕರುಣಾಕರ ಬಳ್ಳೂರು ಅವರ ‘ಬೆಳಕು’ ಕವನ ಸಂಕಲನ, ಡಾ.ಎಸ್.ಎಂ.ಶಿವಪ್ರಕಾಶ್ ಅವರ ‘ಟೆಕ್ನಾಲಜಿ ವರ್ಸಸ್ ಎಕಾಲಜಿ’ ಮೀನುಗಳ ಕುರಿತ ಕನ್ನಡ ಮತ್ತು ಆಂಗ್ಲ ಭಾಷೆಯ ಮಿಶ್ರ ಕವನ ಸಂಕಲನ, ರಘು ಇಡ್ಕಿದು ಅವರ ‘ಪೊನ್ನಂದಣ’ ಕೃತಿ ವಿಮರ್ಶೆ ಲೋಕಾರ್ಪಣೆಗೊಳ್ಳಲಿದೆ.

Image Making Competition:ಈ ಬಗ್ಗೆ ಮಾತನಾಡಿದ ರಂಗ ಸಂಗಾತಿ ಉಪಾಧ್ಯಕ್ಷ ಮೈಮ್ ರಾಮ್ ದಾಸ್, “ರಂಗ ಸಂಗಾತಿ ಕಳೆದ ಕೆಲವು ವರ್ಷಗಳಿಂದ ಮಂಗಳೂರಿನಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ವರ್ಷ ಫೆಬ್ರವರಿ 14ರಂದು BOOK ಪ್ರೇಮಿಗಳ ದಿನವನ್ನು ಆಯೋಜಿಸುತ್ತಿದ್ದೇವೆ. ಪ್ರೇಮಿಗಳ ದಿನದಂದು BOOK ಪ್ರೇಮಿಗಳ ದಿನಾಚರಣೆ ಆಚರಿಸುವ ಬಗ್ಗೆ ಕಳೆದ ಎರಡು ವರ್ಷಗಳಿಂದ ಚಿಂತನೆ‌ಯಿತ್ತು.

ಯುವ ಜನತೆ BOOK ಪ್ರೇಮಿಗಳಾಗಬೇಕು. BOOKಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, BOOK ಪ್ರೇಮಿಗಳಾಗುವ ಜೊತೆಗೆ ಓದುವ, ಬರೆಯುವ ಅಭ್ಯಾಸ ಬೆಳೆಯಬೇಕು ಎಂಬುದು ನಮ್ಮ ಉದ್ದೇಶ” ಎಂದು ತಿಳಿಸಿದರು. ಬೆಳಗ್ಗೆ 10ರಿಂದ 12 ಗಂಟೆವರೆಗೆ ಪುರಭವನದಲ್ಲಿ ಚಿತ್ರ ರಚನೆ ಸ್ಪರ್ಧೆಯೂ ನಡೆಯಲಿದೆ. 1-4ನೇ ತರಗತಿ ಮಕ್ಕಳಿಗೆ ‘ಹಳ್ಳಿಯ ದೃಶ್ಯ’, 5-7ನೇ ತರಗತಿ ಮಕ್ಕಳಿಗೆ BOOK ಮಾರಾಟದ ಜಾತ್ರೆ’, 8-10ನೇ ತರಗತಿ ಮಕ್ಕಳಿಗೆ ‘ಪಾರ್ಕ್‌ನಲ್ಲಿ BOOK ಓದುತ್ತಿರುವವರು’, ‘BOOK ಓದಿನ ಮಹತ್ವ’, ಸಾರ್ವಜನಿಕರ ಮುಕ್ತ ಅವಕಾಶ ವಿಭಾಗದಲ್ಲಿ ‘ಮೊಬೈಲ್ ವರ್ಸಸ್ BOOK’, ‘BOOK ಪ್ರೇಮ’ ವಿಷಯ ನೀಡಲಾಗಿದೆ.

 

ಇದನ್ನು ಓದಿರಿ :HYDERABAD ONE DAY TOUR:ಕೇವಲ ₹380ಗೆ ಹೈದರಾಬಾದ್ ಪ್ರವಾಸ, ಒಂದೇ ದಿನದಲ್ಲಿ ಎಲ್ಲಾ ಸ್ಥಳಗಳನ್ನು ವೀಕ್ಷಿಸಿ!

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...