spot_img
spot_img

PAWAR FELICITATE SHINDE : ಶಿವಸೇನೆ ಆಕ್ಷೇಪ, ಎಲ್ಲದರಲ್ಲೂ ರಾಜಕೀಯ ಬೇಡವೆಂದ ಎನ್ಸಿಪಿ

spot_img
spot_img

Share post:

Mumbai (Maharashtra) News:

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಏಕನಾಥ್​ ಶಿಂಧೆ ಅವರನ್ನು ಎನ್​​ಸಿಪಿ ನಾಯಕ ಶರದ್​ ಪವಾರ್​ ಸನ್ಮಾನಿಸಿದ್ದಕ್ಕೆ ಠಾಕ್ರೆ ಬಣದ ಶಿವಸೇನೆ ಸಿಟ್ಟಾಗಿದೆ. “ಬಾಳಾ ಠಾಕ್ರೆ ಅವರ ಶಿವಸೇನೆಯನ್ನು ವಿಭಜಿಸಿ ದ್ರೋಹ ಬಗೆದ ವ್ಯಕ್ತಿಗೆ I.N.D.I.A ಕೂಟದ ಭಾಗವಾಗಿರುವ ಶರದ್​ ಪವಾರ್​ ಅವರು ಸನ್ಮಾನಿಸಿದ್ದು ಸರಿಯಲ್ಲ. ಇದನ್ನು ಮಹಾರಾಷ್ಟ್ರದ ಜನರು ಸಹಿಸುವುದಿಲ್ಲ” ಎಂದು ಪಕ್ಷ ಹೇಳಿದೆ.

PAWAR FELICITATE SHINDE    ದೆಹಲಿಯಲ್ಲಿ ನಡೆದ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಎನ್​ಸಿಪಿ ನಾಯಕ (ಎಸ್​​ಪಿ) ಶರದ್​ ಪವಾರ್ ಅವರು ಸನ್ಮಾನಿಸಿದ್ದಕ್ಕೆ ಉದ್ಧವ್​ ಠಾಕ್ರೆ ಬಣದ ಶಿವಸೇನೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

“PAWAR FELICITATE SHINDE ಪವಾರ್ ಅವರು ನಿನ್ನೆ ಸನ್ಮಾನಿಸಿದ್ದು ಶಿಂಧೆಯನ್ನಲ್ಲ, ಬಿಜೆಪಿಯನ್ನು. ಮಹಾರಾಷ್ಟ್ರದ ಶತ್ರು ಎಂದು ಪರಿಗಣಿಸುವ ವ್ಯಕ್ತಿಗೆ ಇಂತಹ ಗೌರವ ನೀಡುವುದು ಮರಾಠಿಗರ ಹೆಮ್ಮೆಗೆ ಕಳಂಕ. ಅವರ ಭಾವನೆಗೆ ನೋವುಂಟು ಮಾಡಿದಿರಿ. ಇಂತಹ ರಾಜಕೀಯವು ರಾಜ್ಯದ ಜನರಿಗೆ ಇಷ್ಟವಾಗಲಿಲ್ಲ” ಎಂದರು.

ಈ ಬಗ್ಗೆPAWAR FELICITATE SHINDE  ಮಾತನಾಡಿರುವ ಸಂಸದ ಸಂಜಯ್​ ರಾವುತ್​, “ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್​ನ ಮಹಾವಿಕಾಸ್​ ಅಘಾಡಿ ಸರ್ಕಾರವನ್ನು ಕೆಡವಿದ ಮತ್ತು ಅಖಂಡ ಶಿವಸೇನೆ ವಿಭಜಿಸಿದ ವ್ಯಕ್ತಿಗೆ ಶರದ್​ ಪವಾರ್​ ಅವರು ಅಭಿನಂದಿಸಿದ್ದು ಒಪ್ಪಲಾಗದು. ಮೇಲಾಗಿ, ಅವರು ಕಾರ್ಯಕ್ರಮಕ್ಕೇ ಹೋಗಬಾರದಿತ್ತು” ಎಂದು ಹೇಳಿದರು.

“ನಿಮ್ಮ (ಶರದ್​ ಪವಾರ್​) ದೆಹಲಿ ರಾಜಕೀಯ ನಮಗೆ ಅರ್ಥವಾಗುತ್ತಿಲ್ಲ. ಆದರೆ ನಮಗೂ ರಾಜಕೀಯದ ಅರಿವಿದೆ” ಎಂದು ಮಾರ್ಮಿಕವಾಗಿ ನುಡಿದರು.

BJP Response:

ಹಿರಿಯ ನಾಯಕ ಶರದ್​ ಪವಾರ್ ಅವರು ಏಕನಾಥ್​ ಶಿಂಧೆ ಅವರನ್ನು ಸನ್ಮಾನಿಸುವ ಮೂಲಕ, ಉದ್ಧವ್​ ಠಾಕ್ರೆ ಅವರಿಗಿಂತ ಶಿಂಧೆ ಉತ್ತಮ ಸಿಎಂ ಎಂದು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಕುಟುಕಿದೆ. “ಪವಾರ್​ ಅವರು ಮಹಾರಾಷ್ಟ್ರದ ಘನತೆಯನ್ನು ಎಂದಿಗೂ ಎತ್ತಿ ಹಿಡಿದಿದ್ದಾರೆ. ಇದರಲ್ಲಿ ಶಿವಸೇನೆ (ಯುಬಿಸಿ) ಕೊಂಕು ಹುಡುಕುವುದರಲ್ಲಿ ಅರ್ಥವಿಲ್ಲ” ಎಂದು ಹೇಳಿದೆ.

What did NCP say?:

ಶಿವಸೇನೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎನ್​ಸಿಪಿ, “ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವು ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವಾಗಿತ್ತು. ಅಧ್ಯಕ್ಷತೆ ವಹಿಸಿದ್ದ ಶರದ್​​ ಪವಾರ್​ ಅವರು ಎಲ್ಲರಂತೆ ಶಿಂಧೆ ಅವರನ್ನು ಸನ್ಮಾನಿಸಿದ್ದಾರೆ. ಇದರಲ್ಲಿ ರಾಜಕೀಯವೇನಿಲ್ಲ. ಎಲ್ಲದರಲ್ಲೂ ರಾಜಕೀಯ ತರುವುದು ಸರಿಯಲ್ಲ” ಎಂದು ಸ್ಪಷ್ಟನೆ ನೀಡಿದೆ.

ಇದನ್ನು ಓದಿರಿ : IPL 2025: Virat Kohli, Rajat Patidar Frontrunners, Who Will Become RCB’s New Captain?

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...