spot_img
spot_img

VOLVO SIGNS AGREEMENT:ಕನ್ನಡಿಗರಿಗೆ ಹೆಚ್ಚು ಉದ್ಯೋಗ ಕೊಡಿ ಎಂದ ಸಿದ್ದರಾಮಯ್ಯ

spot_img
spot_img

Share post:

Bangalore News:

ವೋಲ್ವೋ ಕಂಪೆನಿಗೆ ಸರ್ಕಾರ ಅಗತ್ಯ ಸೌಲಭ್ಯ, ನೆರವು ಒದಗಿಸಲಿದ್ದು, ಹೆಚ್ಚಿನ ಕನ್ನಡಿಗರಿಗೆ ಉದ್ಯೋಗ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಅಧಿಕೃತ ನಿವಾಸ ಕಾವೇರಿಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೂ ಈ ವೇಳೆ ಉಪಸ್ಥಿತರಿದ್ದರು.

ಒಡಂಬಡಿಕೆಗೆ ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದರು.ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್​ ಮೂಲದ ವೋಲ್ವೋ ಕಂಪೆನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,300ರಿಂದ 1,500 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

Give more jobs to Kannadigas:ವೋಲ್ವೋ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, “ಕರ್ನಾಟಕದಲ್ಲಿ ಕಂಪೆನಿಯು ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಈಗ ನಾವು ವರ್ಷಕ್ಕೆ ಇಲ್ಲಿ 3,000 ಬಸ್/ಟ್ರಕ್ ತಯಾರಿಸುತ್ತಿದ್ದೇವೆ. ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್/ಟ್ರಕ್ ತಯಾರಿಸಬಹುದು.

ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಜತೆಗೆ ಸ್ಥಳೀಯ ಮಾರುಕಟ್ಟೆ ಅಗತ್ಯಗಳನ್ನೂ ಸರಾಗವಾಗಿ ಪೂರೈಸಲು ಸಾಧ್ಯವಾಗಲಿದೆ” ಎಂದರು.ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, “ವೋಲ್ವೋ ಕಂಪೆನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತ್ತು. ಈಗ ನಮ್ಮಲ್ಲಿ ವೋಲ್ವೋ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ. ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೋ ಕಂಪೆನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ. ಕಂಪೆನಿಯು ತನ್ನಲ್ಲಿ ಹೆಚ್ಚಿನ ಕನ್ನಡಿಗರಿಗೆ ಕೆಲಸ ಕೊಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಎರಡನ್ನೂ ಸಾಧಿಸಬಹುದು” ಎಂದರು.

“ಬೆಂಗಳೂರು ವೋಲ್ವೋ ಕಂಪೆನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ. ಇಲ್ಲಿರುವ ನಮ್ಮ ಜಿಸಿಸಿ ಕೇಂದ್ರದಲ್ಲಿ 3,500ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದು, ಇಲ್ಲಿ ಆರ್ & ಡಿ, ಐಟಿ, ಖರೀದಿ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇವೆಗಳನ್ನು ನಿರ್ವಹಿಸಲಾಗುತ್ತಿದೆ. ಇದಲ್ಲದೆ ಮಧ್ಯಪ್ರದೇಶದಲ್ಲಿ ಕೂಡ ಜಂಟಿ ಸಹಭಾಗಿತ್ವದ ಯೋಜನೆ ಜಾರಿಯಲ್ಲಿದೆ. ಕಂಪನಿಯ ವಹಿವಾಟು ಈಗ ವರ್ಷಕ್ಕೆ 50 ಬಿಲಿಯನ್ ಡಾಲರ್ ದಾಟಿದೆ” ಎಂದು ತಿಳಿಸಿದರು.

 

ಇದನ್ನು ಓದಿರಿ :UP Court Summons Rahul Gandhi On March 24 Over Remarks Against Army

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...