spot_img
spot_img

AMARTYA SEN DESCRIBE MANMOHAN:ಮನಮೋಹನ್ ಸಿಂಗ್ ಒಬ್ಬ ಮಹಾನ್ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ

spot_img
spot_img

Share post:

Kolkata (West Bengal) News:

ಪಶ್ಚಿಮ ಬಂಗಾಳದ ಬಿರ್ಭೂಮ್​​ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, MANMOHAN​ ಸಿಂಗ್​ ಮತ್ತು ನಾನು ಕೇಂಬ್ರಿಡ್ಜ್‌ನಲ್ಲಿ ಓದುತ್ತಿರುವ ವೇಳೆ ಉತ್ತಮ ಸ್ನೇಹಿತರಾಗಿದ್ದೆವು. ಅವರು ಸಿಖ್​ ಸಮುದಾಯದವರಾಗಿದ್ದರೂ ‘ವಜ್ರಚ್ಛೇದಿಕ ಪ್ರಜ್ಞಾಪರಮಿತಾ’ದಲ್ಲಿ ಗೌತಮ ಬುದ್ಧರ ಸಂದೇಶಗಳನ್ನು ಅಳವಡಿಸಿಕೊಂಡಿದ್ದರು” ಎಂದು ತಿಳಿಸಿದರು.

“ಮಾಜಿ ಪ್ರಧಾನಿ ದಿವಂಗತ MANMOHAN​ ಸಿಂಗ್​ ಅವರು ಒಬ್ಬ ಮಹಾನ್​ ವ್ಯಕ್ತಿ, ಉತ್ತಮ ರಾಜಕೀಯ ನಾಯಕ, ಜಗತ್ತಿನ ಅವಶ್ಯಕತೆಗಳನ್ನು ಅರಿತುಕೊಂಡಿದ್ದ ಅದ್ಭುತ ಅರ್ಥಶಾಸ್ತ್ರಜ್ಞ” ಎಂದು ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್​ ಬಣ್ಣಿಸಿದ್ದಾರೆ.

“ಹೀಗಾಗಿ, ಭಾರತದಲ್ಲಿ ಪಾಕಿಸ್ತಾನವು ಭಯೋತ್ಪಾದನೆ ನಡೆಸಿದ ಪುರಾವೆಗಳು ಸಿಕ್ಕರೂ, ಬುದ್ಧನ ಸಂದೇಶದ ಅನುಸಾರ ಪ್ರತಿಕ್ರಿಯಿಸುತ್ತಿದ್ದರು. ನೆರೆಯ ರಾಷ್ಟ್ರದ ವಿರುದ್ಧ ತೀಕ್ಷ್ಣವಾಗಿ ನಡೆದುಕೊಳ್ಳಬಾರದು ಎಂಬುದನ್ನು ಅವರು ಅರಿತಿದ್ದರು” ಎಂದು ಅಮರ್ತ್ಯ ಸೇನ್​ ತಿಳಿಸಿದರು.”ವಜ್ರಚ್ಛೇದಿಕಾ ಪ್ರಜ್ಞಾಪರಮಿತಾ ಸೂತ್ರ’ ಅಥವಾ ‘ಮಹಾಯಾನ’ದಲ್ಲಿರುವ ಗೌತಮ ಬುದ್ಧನ ಸಂದೇಶವಾದ ಮಾನವರ ವಿಭಿನ್ನ ನಂಬಿಕೆಗಳನ್ನು ಗೌರವಿಸುವುದು ಮತ್ತು ಒಂದು ನಿರ್ದಿಷ್ಟ ನಂಬಿಕೆಯನ್ನು ಬೆಂಬಲಿಸುವುದು, ಇತರರನ್ನು ಅವಹೇಳನ ಮಾಡದಿರುವುದನ್ನು ಆಳವಾಗಿ ಅರ್ಥ ಮಾಡಿಕೊಂಡಿದ್ದರು” ಎಂದು ಸೇನ್​ ಹೇಳಿದರು.

A friend is a wonderful person though:“ವಜ್ರ ಸೂತ್ರದಲ್ಲಿನ ಬುದ್ಧನ ಸಂದೇಶಗಳನ್ನು ಸಿಂಗ್​ ಚೆನ್ನಾಗಿ ಅರಿತುಕೊಂಡಿದ್ದರು ಎಂದು ನಾನು ಭಾವಿಸುತ್ತೇನೆ. ಅವರು ಸಿಖ್​ ಧರ್ಮದವರಾಗಿದ್ದರೂ, ಇತರ ಧರ್ಮಗಳು ಮತ್ತು ಸಮುದಾಯಗಳ ಜನರಿಗೆ ಸಂಬಂಧಿಸಿದಂತೆ ಗೌತಮ ಬುದ್ಧನ ಸಂದೇಶದ ಆಧಾರದ ಮೇಲೆ ನಡೆದುಕೊಳ್ಳುತ್ತಿದ್ದರು. ಅವರೊಬ್ಬ ಮಹಾನ್​ ವ್ಯಕ್ತಿ. ಅವರು ನನ್ನ ಸ್ನೇಹಿತರಾಗಿದ್ದ ಕಾರಣಕ್ಕೆ ಹೇಳುತ್ತಿಲ್ಲ” ಎಂದರು.

“ಸಿಂಗ್​ ಅವರ ಜೊತೆಗಿನ ವಿದ್ಯಾಭ್ಯಾಸದ ದಿನಗಳನ್ನು ಮೆಲುಕು ಹಾಕಿರುವ ಅರ್ಥಶಾಸ್ತ್ರಜ್ಞ, ನಾವು ವಿದ್ಯಾರ್ಥಿಗಳಾಗಿದ್ದಾಗ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಸಹೋದ್ಯೋಗಿಯಾಗಿದ್ದಾಗ ಈ ಬಗ್ಗೆ ನಾವಿಬ್ಬರೂ ಸುದೀರ್ಘ ಮಾತುಕತೆ ನಡೆಸಿದ್ದೆವು. ಇತರ ಧರ್ಮಗಳು ಮತ್ತು ಸಮುದಾಯಗಳ ಬಗ್ಗೆ ಬುದ್ಧನ ಸಂದೇಶ ಪಾಲನೆ ಅಗತ್ಯ ಎಂಬುದನ್ನು ಅವರು ಹೇಳುತ್ತಿದ್ದರು” ಎಂದು ಮಾಹಿತಿ ನೀಡಿದರು.

 

ಇದನ್ನು ಓದಿರಿ :Farmers will sit in mass protest against the government in Patna from March 24 to 26

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...