spot_img
spot_img

HIGH COURT : ಭೂ ಮಂಜೂರಾತಿ ಶಿಫಾರಸು ಜಾರಿ ಮಾಡುವುದು ತಹಶೀಲ್ದಾರ್ ಕರ್ತವ್ಯ

spot_img
spot_img

Share post:

Bangalore News:

ಭೂ ಮಂಜೂರಾತಿ ಸಮಿತಿಯು ಭೂಮಿ ಮಂಜೂರು ಮಾಡಲು ಶಿಫಾರಸು ಮಾಡಿದ ನಂತರ ತಹಶೀಲ್ದಾರ್ ಅವರು ಕಾನೂನು ಪ್ರಕಾರ ಸಾಗುವಳಿ ಚೀಟಿ ವಿತರಿಸುವುದು ಆದ್ಯಕರ್ತವ್ಯ ಎಂದು HIGH COURT ಹೇಳಿದೆ.

ತನ್ನ ತಂದೆ ಪರವಾಗಿ ಭೂ ಮಂಜೂರಾತಿ ಸಮಿತಿಯ ಶಿಫಾರಸಿನಂತೆ ಸಾಗುವಳಿ ಚೀಟಿ ವಿತರಿಸಲು ತಹಶೀಲ್ದಾರ್‌ಗೆ ನಿರ್ದೇಶಿಸುವಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಪ್ಪೆಗೌಡನ ಹಳ್ಳಿಯ ನಿವಾಸಿ ಎ.ವಿ. ಮುನಿಯಪ್ಪ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಈ ಪ್ರಕರಣದಲ್ಲಿ ಅರ್ಜಿದಾರರು ಕಾನೂನಿನ ಆದೇಶಿಸದಂತೆ ಅಗತ್ಯವಾದ ಮೊತ್ತವನ್ನು ಠೇವಣಿ ಇಡುವುದಕ್ಕೆ ಸಿದ್ಧರಿದ್ದಾರೆ.

ಭೂ ಅನುದಾನ ಸಮಿತಿಯು ಅರ್ಜಿದಾರರ ತಂದೆ ಅನಧಿಕೃತವಾಗಿ ಬಳಕೆ ಮಾಡುತ್ತಿದ್ದ ಜಮೀನನ್ನು ಕ್ರಮ ಬದ್ಧಗೊಳಿಸಲು ಶಿಫಾರಸು ಮಾಡಿರುವುದರಿಂದ ಅರ್ಜಿದಾರರು ಈ ನ್ಯಾಯಾಲಯದಿಂದ ಸೂಕ್ತ ಆದೇಶವನ್ನು ಪಡೆಯುವ ಹಕ್ಕು ಹೊಂದಿದ್ದಾರೆ ಎಂದು ಪೀಠ ಹೇಳಿದೆ. ಅರ್ಜಿದಾರರು ಕರ್ನಾಟಕ ಭೂ ಕಂದಾಯ ನಿಯಮಗಳ ಸೆಕ್ಷನ್ 108ಡಿ(3) ಅಡಿಯಲ್ಲಿ ಈಗಾಗಲೇ ಭೂ ಮಂಜೂರಾತಿ ಸಮಿತಿಯಿಂದ ಕಾನೂನು ಬದ್ಧವಾಗಿ ಶಿಫಾರಸು ಪಡೆದುಕೊಂಡಿದ್ದಾರೆ.

ಆ ಶಿಫಾರಸಅನ್ನು ತಹಶೀಲ್ದಾರ್ ಅವರು ಅಂಗೀಕರಿಸುವುದು ಮತ್ತು ನಿಗದಿತ ಕಾನೂನು ಕಾರ್ಯವಿಧಾನಕ್ಕೆ ಅನುಗುಣವಾಗಿ ಸಾಗುವಳಿ ಚೀಟಿ ವಿತರಣೆಗೆ ಮಾಡುವುದಕ್ಕೆ ಬಾಧ್ಯರಾಗಿರುತ್ತಾರೆ ಎಂದು ಪೀಠ ಹೇಳಿದೆ. ಹೀಗಾಗಿ, ಅರ್ಜಿದಾರರ ಆಸ್ತಿಯ ಹಕ್ಕು ಪಡೆಯಲು ಅರ್ಹತೆ ಹೊಂದಿದ್ದಾರೆ. ಯಾವುದೇ ವಿಳಂಬ ದೋರಣೆ ಅನುಸರಿಸದೆ, ಕಾನೂನಿನ ಪ್ರಕಾರ ಸಾಗುವಳಿ ಚೀಟಿ ನೀಡಬೇಕು ಎಂದು ಪೀಠ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

Argument of the lawyer:

HIGH COURT ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ಅರ್ಜಿದಾರರ ತಂದೆ ಅನಧಿಕೃತವಾಗಿ ಕೃಷಿ ಕಾರ್ಯಗಳನ್ನು ಮಾಡುತ್ತಿದ್ದ ಜಮೀನನ್ನು ಸಕ್ರಮಗೊಳಿಸಲು ಕೋರಿ ಭೂ ಮಂಜೂರಾತಿ ಸಮಿತಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು.

ಅರ್ಜಿಯ ಕುರಿತು ವಿಚಾರಣೆ ನಡೆಸಿದ್ದ ಸಮಿತಿ ಅನಧಿಕೃತ ಜಮೀನನ್ನು ಅಧಿಕೃತ ಮಾಡಿಕೊಳ್ಳಲು ಅರ್ಜಿದಾರರ ತಂದೆ ಅರ್ಹರಾಗಿದ್ದಾರೆ ಎಂಬುದಾಗಿ ಶಿಫಾರಸು ನೀಡಿತ್ತು. ಆದರೆ, ಈ ಶಿಫಾರಸ್ಸಿನ ಪ್ರತಿಯೊಂದಿಗೆ ಅರ್ಜಿದಾರರು ಸಾಗುವಳಿ ಚೀಟಿಯನ್ನು ನೀಡುವಂತೆ ಕೋರಿ ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದರು. ಇದಕ್ಕೆ

ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ HIGH COURT ಮೆಟ್ಟಿಲೇರಿದ್ದು, ಶಿಫಾರಸು ಆಧಾರದಲ್ಲಿ ಭೂಮಿಗೆ ಸಾಗುವಳಿ ಚೀಟಿ ನೀಡಲು ನಿರ್ದೇಶನ ನೀಡಬೇಕು” ಎಂದು ಕೋರಿದ್ದರು. ಇದಕ್ಕೆ ಆಕ್ಷೇಪಿಸಿದ್ದ ಸರ್ಕಾರದ ವಕೀಲರು, ”ಅರ್ಜಿದಾರರು ಹೆಚ್ಚುವರಿ ಭೂಮಿ ಹೊಂದಿದ್ದಾರೆ. ಹೀಗಾಗಿ, ಅನಧಿಕೃತವಾಗಿ ಉಳಿಮೆ ಮಾಡುತ್ತಿರುವ ಭೂಮಿಯನ್ನು ಅಧಿಕೃತಗೊಳಿಸುವುದಕ್ಕೆ ಅವಕಾಶವಿಲ್ಲ. ಹೀಗಾಗಿ, ಅರ್ಜಿ ವಜಾಗೊಳಿಸಬೇಕು” ಎಂದು ಮನವಿ ಮಾಡಿದ್ದರು.

ಇದನ್ನು ಓದಿರಿ : Champions Trophy 2025: India Stars Unveil Jersey; Includes ‘Pakistan’ Imprint

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...