spot_img
spot_img

MAHA KUMBH 2025 : ಮಹಾಕುಂಭ ಮೇಳದ ಮುಕ್ತಾಯದ ದಿನಾಂಕ ವಿಸ್ತರಣೆ?

spot_img
spot_img

Share post:

Mahakumbha Nagar (Uttar Pradesh) News:

MAHA KUMBH 2025 ಮುಕ್ತಾಯದ ದಿನಾಂಕವು ವಿಸ್ತರಣೆ ಆಗಲಿದೆ ಎಂಬ ಸುದ್ದಿಗಳ ಕುರಿತಂತೆ ಪ್ರಯಾಗ್‌ರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಪಷ್ಟನೆ ನೀಡಿದ್ದಾರೆ. ಧಾರ್ಮಿಕ ಮುಹೂರ್ತಗಳನ್ನು ಆಧರಿಸಿ ಮಹಾ ಕುಂಭಮೇಳದ ವೇಳಾಪಟ್ಟಿ ಇರುತ್ತದೆ ಎಂದಿದ್ದಾರೆ.

ಜನವರಿ 13ರಂದು ಆರಂಭಗೊಂಡಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಇದುವರೆಗೂ ನಿರೀಕ್ಷೆಗೂ ಮೀರಿ 50 ಕೋಟಿಗೂ ಅಧಿಕ ಜನರು ಭಾಗವಹಿಸಿ, ಪವಿತ್ರ ಸ್ನಾನ ಮಾಡಿದ್ದಾರೆ. ಅಲ್ಲದೇ, ಮಹಾಕುಂಭವು ಪೂರ್ವ ನಿರ್ಧಾರಿತವಾದಂತೆ ಫೆಬ್ರವರಿ 26ರಂದು ಸಮಾಪ್ತಿಯಾಗಲಿದೆ. MAHA KUMBH 2025 ಪ್ರಯಾಗ್​ರಾಜ್​ನಲ್ಲಿ 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಸಾಗರೋಪಾದಿಯಲ್ಲಿ ಕೋಟ್ಯಂತರ ಭಕ್ತರು ಆಗಮಿಸುತ್ತಿದ್ದಾರೆ.

ಭಾರಿ ಜನದಟ್ಟಣೆ ಹಿನ್ನೆಲೆಯಲ್ಲಿ ಮಹಾಕುಂಭಮೇಳವನ್ನು ಪೂರ್ವ ನಿರ್ಧರಿತ ದಿನಾಂಕದಂದು ಮುಗಿಸದೇ, ವಿಸ್ತರಣೆ ಮಾಡಲಾಗುತ್ತಿದೆ ಎಂಬ ವದಂತಿಗಳು ಹರಡಿವೆ.”ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆಗಳ ಪ್ರಕಾರ, ಆಡಳಿತವು ಎಲ್ಲ ಭಕ್ತರಿಗೆ ಸುಗಮ ಪ್ರಯಾಣ ಮತ್ತು ಇತರ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ. ಮೇಳದ ದಿನಾಂಕ ವಿಸ್ತರಿಸಲು ಸರ್ಕಾರ ಅಥವಾ ಜಿಲ್ಲಾಡಳಿತದಿಂದ ಯಾವುದೇ ಪ್ರಸ್ತಾಪವಿಲ್ಲ. ಯಾತ್ರಿಕರು ಅಂತಹ ತಪ್ಪು ಮಾಹಿತಿ ನಂಬಬಾರದು” ಎಂದು ಡಿಎಂ ಹೇಳಿದ್ದಾರೆ.

ಮಹಾಕುಂಭಮೇಳವು ವಿಸ್ತರಣೆ ಆಗಲಿದೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳನ್ನು ಪ್ರಯಾಗರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ರವೀಂದ್ರ ಮಂದರ್ ಮಂಗಳವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

”ಕಾರ್ಯಕ್ರಮದ ವೇಳಾಪಟ್ಟಿಯನ್ನು ಧಾರ್ಮಿಕ ಮುಹೂರ್ತಗಳನ್ನು (ಶುಭ ಸಮಯಗಳು) ಆಧರಿಸಿ ನಿರ್ಧರಿಸಲಾಗುತ್ತದೆ ಹಾಗೂ ಅದರಲ್ಲಿ ಯಾವುದೇ ಬದಲಾಣೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. MAHA KUMBH 2025 ”ತ್ರಿವೇಣಿ ಸಂಗಮದಲ್ಲಿ ಯಾವುದೇ ತೊಡಕುಗಳಿಲ್ಲದೇ ಪವಿತ್ರ ಸ್ನಾನ ಮಾಡಲು ಅನುಕೂಲವಾಗುವಂತೆ ಮಹಾಕುಂಭದ ಉಳಿದ ದಿನಗಳಲ್ಲಿಯೂ ಎಲ್ಲ ಅಗತ್ಯ ವ್ಯವಸ್ಥೆಗಳು ಮುಂದುವರೆಯಲಿದೆ.

ಪ್ರಯಾಗ್‌ರಾಜ್‌ನಲ್ಲಿ ಭಕ್ತರ ಚಲನವಲನ ಮತ್ತು ಸಾಮಾನ್ಯ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳಲು ಆಡಳಿತವು ಸಂಚಾರ ನಿರ್ವಹಣೆಯತ್ತ ಗಮನಹರಿಸಿದೆ” ಎಂದು ತಿಳಿಸಿದರು.

Railway station not closed:

ರೈಲು ನಿಲ್ದಾಣ ಬಂದ್​ ಮಾಡುವ ಕುರಿತು ಪ್ರತಿಕ್ರಿಯಿಸಿ, ಯಾವುದೇ ನಿಲ್ದಾಣವನ್ನು ಪೂರ್ವ ಸೂಚನೆ ಇಲ್ಲದೇ ಮುಚ್ಚಲಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. MAHA KUMBH 2025 “ದಟ್ಟಣೆ ಆದ ದಿನಗಳಲ್ಲಿ ದರಗಂಜ್‌ನಲ್ಲಿರುವ ಪ್ರಯಾಗ್ ಸಂಗಮ್ ರೈಲು ನಿಲ್ದಾಣವನ್ನು ಮುಚ್ಚುವುದು ಹಿಂದಿನಿಂದಲೂ ನಿಯಮಿತವಾಗಿ ನಡೆದುಕೊಂಡುಬಂದಿದೆ.

ಯಾಕೆಂದರೆ ಅದು ಮೇಳ ಸ್ಥಳದ ಸಮೀಪವೇ ಇದೆ. ಜನದಟ್ಟಣೆ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗುತ್ತದೆ. ಆದಾಗ್ಯೂ, ಎಲ್ಲ ಇತರ ರೈಲು ನಿಲ್ದಾಣಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಯಾಣಿಕರು ಸುಗಮವಾಗಿ ಪ್ರಯಾಣಿಸುತ್ತಿದ್ದಾರೆ ಎಂದು ಡಿಸಿ ಸ್ಪಷ್ಟಪಡಿಸಿದರು.

ಭಕ್ತರು ಮತ್ತು ನಿವಾಸಿಗಳು ಮಾಹಿತಿಗಾಗಿ ಅಧಿಕೃತ ಮೂಲಗಳನ್ನು ಮಾತ್ರ ಅವಲಂಬಿಸುವಂತೆ ಪ್ರಯಾಗರಾಜ್ ಜಿಲ್ಲಾಡಳಿತವು ವಿನಂತಿಸಿದೆ. ”ಅಲ್ಲದೇ, ಮೇಳದ ಕಾರಣಕ್ಕೆ ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿಗಳು ತಮ್ಮ ಬೋರ್ಡ್ ಪರೀಕ್ಷೆಗಳನ್ನು ತಪ್ಪಿಸಿಕೊಂಡಿಲ್ಲ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪರೀಕ್ಷಾ ಕೇಂದ್ರಗಳನ್ನು ಮುಂಚಿತವಾಗಿ ತಲುಪಲು ನಾವು ಮೊದಲೇ ಸೂಚಿಸಿದ್ದೇವೆ.

ಎಲ್ಲರೂ ಆ ಸೂಚನೆಗಳನ್ನು ಪಾಲಿಸಿದ್ದಾರೆ. ಇದಲ್ಲದೇ, ಅನಿವಾರ್ಯ ಸಂದರ್ಭಗಳಲ್ಲಿ ಪರೀಕ್ಷೆಗಳನ್ನು ತಪ್ಪಿಸಿಕೊಳ್ಳಬಹುದಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಂಡಳಿಗಳು ನಿರ್ಧರಿಸಿವೆ” ಎಂದು ರವೀಂದ್ರ ಮಂದರ್ ಹೇಳಿದರು.

ಇದನ್ನು ಓದಿರಿ : ICC CHAMPIONS TROPHY : ಪಾಕಿಸ್ತಾನಕ್ಕೆ ಪ್ರಯಾಣಿಸಲಿರುವ ಮೂವರು ಭಾರತೀಯ ಕ್ರಿಕೆಟರ್ಸ್

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...