spot_img
spot_img

DARSHAN : ದರ್ಶನ್ ಅಭಿಮಾನಿಗಳ ಪುಣ್ಯಕಾರ್ಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Darshan News:

ವಿವಿಧ ಸಾಮಾಜಿಕ ಸೇವೆ ಮೂಲಕ DARSHAN​ ಅವರ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ನಟ ದರ್ಶನ್​​​ ಇದೇ ಫೆಬ್ರವರಿ 16ರಂದು 48ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಈ ಬಾರಿ ತಮ್ಮ ಅಭಿಮಾನಿಗಳೊಂದಿಗೆ ಜನ್ಮದಿನ ಆಚರಿಸಿಕೊಂಡಿಲ್ಲ. ಈ ಬಗ್ಗೆ ತಮ್ಮ ಕೋಟ್ಯಂತರ ಅಭಿಮಾನಿಗಳಿಗೆ ಮೊದಲೇ ತಿಳಿಸಿದ್ದರು. ಇದೀಗ ತಮ್ಮ ಅಭಿಮಾನಿಗಳ ಪುಣ್ಯಕಾರ್ಯಕ್ಕೆ ದಾಸ ಹೃದಯಪೂರ್ವಕ ನಮನ ಸಲ್ಲಿಸಿದ್ದಾರೆ.

Darshan What’s in the post?

ಸ್ಯಾಂಡಲ್​ವುಡ್​ನ ಚಾಲೆಂಜಿಂಗ್​ ಸ್ಟಾರ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ನಲ್ಲಿ ಸರಣಿ ಪೋಸ್ಟ್​​ಗಳನ್ನು​ ಹಂಚಿಕೊಂಡಿದ್ದಾರೆ. ಸ್ಪೆಷಲ್​ ಪೋಸ್ಟ್​ಗಳಿಗೆ, ”ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ನನ್ನ ಸೆಲೆಬ್ರಿಟಿಸ್​​ಗಳಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಪ್ರತೀ ಪೋಸ್ಟ್​​ಗಳೂ ಕೂಡಾ ಅವರ ಅಭಿಮಾನಿಗಳ ಸಮಾಜ ಸೇವೆಯನ್ನು ಒತ್ತಿ ಹೇಳಿದೆ. ರಾಜ್ಯದ ಹಲವೆಡೆ ಫ್ಯಾನ್ಸ್​ ತಮ್ಮದೇ ಆದ ರೀತಿಯಲ್ಲಿ ತಮ್ಮ ಮೆಚ್ಚಿನ ನಟನ ಜನ್ಮದಿನ ಆಚರಿಸಿದ್ದಾರೆ.ಎರಡನೇ ಪೋಸ್ಟ್​​ನಲ್ಲಿ ಸರ್ಕಾರಿ ಆಸ್ಪತ್ರೆಗೆ ಕೊಡುಗೆ ನೀಡೋ ಮೂಲಕ DARSHAN ಬರ್ತ್​​ಡೇ ಸೆಲೆಬ್ರೇಟ್​ ಮಾಡಲಾಗಿದೆ. ಇಲ್ಲಿ ವೈದ್ಯಕೀಯ ತಂಡ, ಆಸ್ಪತ್ರೆ ಸಿಬ್ಬಂದಿಯನ್ನೊಳಗೊಂಡ ಫೋಟೋವನ್ನು ಕಾಣಬಹುದು.

ಮೂರನೇ ಪೋಸ್ಟ್​​ನಲ್ಲಿ, ಶಾಲಾ ಮಕ್ಕಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಗಿದೆ. ನಾಲ್ಕನೇ ಪೋಸ್ಟ್​​ನಲ್ಲಿ, ಶಾಲಾ ಮಕ್ಕಳೊಂದಿಗೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಲಾಗಿದೆ. ಹೀಗೆ DARSHAN​ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ 30ಕ್ಕೂ ಹೆಚ್ಚು ಪೋಸ್ಟ್​ಗಳನ್ನು ಹಂಚಿಕೊಂಡಿದ್ದು, ಎಲ್ಲವೂ ಅವರ ಅಭಿಮಾನಿಗಳ ಪುಣ್ಯಕಾರ್ಯಗಳಾಗಿವೆ.

ಪಟಾಕಿ ಸಿಡಿಸಿ ಕೇಕ್​ ಕತ್ತರಿಸುವುದರಿಂದ ಹಿಡಿದು ಪುಣ್ಯಕಾರ್ಯಗಳ ಫೋಟೋ ವಿಡಿಯೋಗಳನ್ನು ಈ ಪೋಸ್ಟ್​​ಗಳಲ್ಲಿ ಕಾಣಬಹುದು. ದರ್ಶನ್​​ ಜನ್ಮದಿನ ಆಚರಣೆಗೆ ಸಂಬಂಧಿಸಿದ ಮೊದಲ ಪೋಸ್ಟ್​​ನಲ್ಲಿ ಅಭಿಮಾನಿ ಬಳಗ ಒಂದೆಡೆ ಸೇರಿ ನಟನ ಜನ್ಮದಿನ ಆಚರಿಸಿದ್ದಾರೆ. ಇಲ್ಲಿ ಎರಡು ಫೋಟೋಗಳನ್ನು ಹಂಚಿಕೊಳ್ಳಲಾಗಿದ್ದು, ಜನಸಮೂಹವನ್ನು ಕಾಣಬಹುದು.

I am forever indebted to Immaculate Hearts:

ಜನ್ಮದಿನದ ಬಳಿಕ ಪೋಸ್ಟ್ ಹಂಚಿಕೊಂಡ ನಟ, ಪ್ರೀತಿಯ ಸೆಲೆಬ್ರಿಟಿಸ್​​ಗಳೇ, ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ. ನಿಮ್ಮ ದಾಸ ದರ್ಶನ್  ಎಂದು ಬರೆದುಕೊಂಡಿದ್ದರು.

ಇದನ್ನು ಓದಿರಿ : DELTA AIRLINES PLANE FLIPS : ಲ್ಯಾಂಡಿಂಗ್ ವೇಳೆ ರನ್ವೇಯಲ್ಲಿ ಜಾರಿ ಪಲ್ಟಿಯಾದ ವಿಮಾನ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...