spot_img
spot_img

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಜನರಲ್ಲಿನ ಭಕ್ತಿ ಪರಾಕಾಷ್ಠೆಯನ್ನೂ ಅವರು ಹಾಡಿ ಹೊಗಳಿದ್ದಾರೆ.ಉತ್ತರಪ್ರದೇಶದ ಪ್ರಯಾಗ್​​ರಾಜ್​​ನಲ್ಲಿ ನಡೆಯುತ್ತಿರುವ ಸನಾತನ ಧರ್ಮದ ಅತಿದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳಕ್ಕೆ ವಿಶ್ವದ ಮೂಲೆಮೂಲೆಗಳಿಂದ ಭಕ್ತರು ಸಾವಿರಾರು ರೂಪಾಯಿ ಖರ್ಚು ಮಾಡಿಕೊಂಡು ಆಗಮಿಸುತ್ತಿದ್ದಾರೆ.

ಈವರೆಗೂ 59 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.ಮುಂಬೈನ ಸಾಮಾಜಿಕ ಮಾಧ್ಯಮ ಪ್ರಭಾವಿ ದಿವ್ಯಾ ಫೋಫಾನಿ ಅವರು ನಯಾಪೈಸೆ ಖರ್ಚಿಲ್ಲದೆ, ಪ್ರಯಾಗ್​ರಾಜ್​​ಗೆ ಹೇಗೆ ತಲುಪಿದೆ ಎಂಬುದನ್ನು ಇನ್​ಸ್ಟಾಗ್ರಾಮ್​​ನಲ್ಲಿ ತಿಳಿಸಿದ್ದಾರೆ.

Mumbai to Prayagraj Journey:1500 ಕಿ.ಮೀ ದೂರವನ್ನು ಒಂದೇ ಒಂದು ರೂಪಾಯಿ ಖರ್ಚು ಮಾಡದೆ ತಲುಪಿದ್ದಾರೆ ಎಂದು ಅದರಲ್ಲಿ ಬರೆದುಕೊಂಡಿದ್ದಾರೆ. ಫೆಬ್ರವರಿ 12 ರಂದು ಮುಂಬೈನಿಂದ ಪ್ರಯಾಣ ಆರಂಭಿಸಿ, ಎರಡು ದಿನಗಳ ನಂತರ ಪ್ರಯಾಗ್‌ರಾಜ್‌ ತಲುಪಿದೆ.

ತಮ್ಮ ಈ ಪ್ರಯಾಣ ರೋಮಾಂಚಕ ಮತ್ತು ನಂಬಿಕೆ, ಸಾಹಸ ಮತ್ತು ಮಾನವ ದಯೆಯಿಂದ ಕೂಡಿತ್ತು ಎಂದು ಬಣ್ಣಿಸಿದ್ದಾರೆ.ಸಾಮಾಜಿಕ ಮಾಧ್ಯಮಗಳಲ್ಲಿ ಕಂಟೆಂಟ್​​ ಕ್ರಿಯೇಟರ್​ ಆಗಿರುವ ದಿವ್ಯಾ ಫೋಫಾನಿ ಅವರು ಮುಂಬೈನಿಂದ ಪ್ರಯಾಗ್​ರಾಜ್​​ ತಲುಪಲು ತಾನು ಏನೆಲ್ಲಾ ಮಾಡಿದೆ ಎಂಬ ಬಗ್ಗೆ ತಮ್ಮ ಇನ್​​ಸ್ಟಾಗ್ರಾಮ್​​ನಲ್ಲಿ ವಿಸ್ತಾರವಾದ ಪೋಸ್ಟ್​ ಹಂಚಿಕೊಂಡಿದ್ದಾರೆ.

Bhakti culmination of Sanatani:‘ಲಿಫ್ಟ್’ ಎಂದು ಬರೆದ ಫಲಕವನ್ನು ಹಿಡಿದುಕೊಂಡು, ಫೋಫಾನಿ ಮುಂಬೈನ ಉಪನಗರ ಥಾಣೆಯಿಂದ ನಾಗ್ಪುರಕ್ಕೆ ಬೈಕ್‌ಗಳು, ಸ್ಕೂಟರ್‌ಗಳು, ಕಾರುಗಳು ಮತ್ತು ಟ್ರಕ್‌ಗಳಲ್ಲಿ ಪ್ರಯಾಣಿಸಿದೆ. ಹೀಗೆಯೇ ಸುಮಾರು 1,500 ಕಿ.ಮೀ. ದೀರ್ಘ ಪ್ರಯಾಣವನ್ನು ಕ್ರಮಿಸಿದೆ.

ಮಧ್ಯಪ್ರದೇಶಕ್ಕೆ ತಲುಪಿದ ಬಳಿಕ, ಜಬಲ್‌ಪುರದಿಂದ ಪ್ರಯಾಗ್​ರಾಜ್​ ಬರಲು ತುಸು ಕಷ್ಟಪಡಬೇಕಾಯಿತು. ಪ್ರಯಾಗ್‌ರಾಜ್‌ವರೆಗಿನ ಅಂತಿಮ ಪ್ರಯಾಣ ಅತ್ಯಂತ ಸವಾಲಿನದ್ದಾಗಿತ್ತು ಎಂದು ಹೇಳಿದ್ದಾರೆ.ಮುಂಬೈನಿಂದ ಪ್ರಯಾಗ್​ರಾಜ್​​ಗೆ ಪ್ರಯಾಣಿಸುವಾಗ, ಭಾರತೀಯರು ಪವಿತ್ರ ಸ್ಥಳವನ್ನು ತಲುಪಲು ಯಾವುದೇ ಹಿಂಜರಿಕೆಯಿಲ್ಲದೆ ಪರಸ್ಪರ ಸಹಾಯ ಮಾಡುತ್ತಾರೆ ಎಂಬುದನ್ನು ನಾನು ನೇರವಾಗಿ ಕಂಡೆ. ಈ ಪ್ರಯಾಣವು ಅಪರಿಚಿತರಲ್ಲಿನ ದಯೆ, ಕರುಣೆ, ಸಹಾಯಹಸ್ತ ಮತ್ತು ಏಕತೆಯ ಪ್ರತೀಕವಾಗಿತ್ತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.ಜಬಲ್‌ಪುರದಿಂದ ಪ್ರಯಾಗ್‌ರಾಜ್‌ವರೆಗಿನ ಮಾರ್ಗದಲ್ಲಿ ಟ್ರಕ್‌ಗಳಿಗೆ ಅವಕಾಶವಿರಲಿಲ್ಲ. ಇದು ಪ್ರಯಾಣವನ್ನು ಕಷ್ಟಕರವಾಗಿಸಿತು.

ಆದಾಗ್ಯೂ, ಸ್ಥಳೀಯರ ನೆರವಿನಿಂದ ಫೆಬ್ರವರಿ 15 ಕ್ಕೆ ಕುಂಭಮೇಳ ಸ್ಥಳವನ್ನು ನಯಾಪೈಸೆ ಖರ್ಚು ಮಾಡದೆ ತಲುಪಿದೆ ಎಂದು ಬರೆದುಕೊಂಡಿದ್ದಾರೆ. ಈ ಅದ್ಭುತ ಯಾತ್ರೆಯ ಕುರಿತು ಪೋಸ್ಟ್ 36 ಸಾವಿರಕ್ಕೂ ಹೆಚ್ಚು ಲೈಕ್ಸ್​​ಗಳನ್ನು ಕಂಡಿದೆ.ಉತ್ತರಪ್ರದೇಶ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, ಇಲ್ಲಿಯವರೆಗೆ 59 ಕೋಟಿ ಜನರು ಗಂಗಾ, ಯಮುನಾ ಮತ್ತು ಸರಸ್ವತಿಯ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದಿದೆ.45 ದಿನಗಳ ಈ ಮಹಾ ಕುಂಭವು ಜನವರಿ 13 ರಂದು ಪ್ರಾರಂಭವಾಗಿದ್ದು, ಫೆಬ್ರವರಿ 26 ರಂದು ಮಹಾಶಿವರಾತ್ರಿಯ ದಿನದಂದು ಕೊನೆಗೊಳ್ಳುತ್ತದೆ.

 

ಇದನ್ನು ಓದಿರಿ :Pakistan To Repatriate 22 Indian Fishermen As They Complete Their Sentences

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

GOLD PRICE PREDICTION:2027ಕ್ಕೆ ಇಷ್ಟು ದರ ತಲುಪಲಿದೆಯಂತೆ ಬಂಗಾರ!

New Delhi News: ಮುಂದಿನ 2 ವರ್ಷಗಳಲ್ಲಿ GOLDದ ಬೆಲೆ ಮತ್ತೆ ಏರಿಕೆಯಾಗಲಿದೆ. ಬೇಡಿಕೆ ಹೆಚ್ಚಿದ ಹಿನ್ನೆಲೆ ಮುಂಗಡ ಬುಕ್ಕಿಂಗ್​ ಕೂಡ ಹೆಚ್ಚಾಗುವ ಸಾಧ್ಯತೆ ಇದೆ....