spot_img
spot_img

SAJJAN KUMAR GETS LIFE IMPRISONMENT- ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ಕುಮಾರ್ಗೆ ಜೀವಾವಧಿ ಶಿಕ್ಷೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi NEWS:

1984 ರ ಸಿಖ್ ವಿರೋಧಿ ದಂಗೆಯ ವೇಳೆ ಸರಸ್ವತಿ ವಿಹಾರ್ ಪ್ರದೇಶದಲ್ಲಿ ತಂದೆ-ಮಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​ನ ಮಾಜಿ ಸಂಸದ SAJJAN KUMAR ದೆಹಲಿ ಕೋರ್ಟ್​ ಜೀವಾವಧಿ ಶಿಕ್ಷೆಯನ್ನು ಮಂಗಳವಾರ ಪ್ರಕಟಿಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 21 ರಂದು ನಡೆದಿದ್ದ ವಿಚಾರಣೆಯಲ್ಲಿ ಕಾಂಗ್ರೆಸ್​ನ ಮಾಜಿ ನಾಯಕನನ್ನು ದೋಷಿ ಎಂದು ಘೋಷಿಸಿ, ತೀರ್ಪು ಕಾಯ್ದಿರಿಸಿದ್ದರು. ಇಂದು ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಿದರು. ದಂಗೆ ಸಂತ್ರಸ್ತರು ಮತ್ತು ತನಿಖೆ ನಡೆಸಿದ ಪೊಲೀಸರು SAJJAN KUMAR ಮರಣದಂಡನೆ ನೀಡಬೇಕು. ಇದು ಅಪರೂಪದ ಪ್ರಕರಣ ಎಂದು ಕೋರ್ಟ್​ ಮುಂದೆ ವಾದಿಸಿದ್ದರು. ಆದರೆ, ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ.

What happened in 1984?

1984ರ ಅಕ್ಟೋಬರ್​ 31ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಸಿಖ್​​ ಗನ್​​ಮ್ಯಾನ್​​ಗಳು ಕೊಂದ ಬಳಿಕ, ಇದರ ವಿರುದ್ಧ ಸೇಡು ತೀರಿಸಿಕೊಳ್ಳಲು ಅಂದಿನ ಪ್ರಭಾವಿ ಕಾಂಗ್ರೆಸ್​​ ನಾಯಕರಾಗಿದ್ದ SAJJAN KUMAR ಅವರು ಶಸ್ತ್ರಾಸ್ತ್ರ ಪಡೆಯನ್ನು ರೂಪಿಸಿದ್ದರು. ಜೊತೆಗೆ ಅದರ ನೇತೃತ್ವವನ್ನೂ ವಹಿಸಿದ್ದರು.

ಇಂದಿರಾ ಹತ್ಯೆಯಾದ ಮರುದಿನ ಅಂದರೆ, ನವೆಂಬರ್ 1ರಂದು ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ತಮ್ಮ ಶಸ್ತ್ರಸಜ್ಜಿತ ಗುಂಪನ್ನು ನುಗ್ಗಿಸಿ ದಂಗೆ ಎಬ್ಬಿಸಿದ್ದ ಆರೋಪ ಇವರ ಮೇಲಿದೆ. ಗಲಭೆಯಲ್ಲಿ ಸಿಖ್​ ಸಮುದಾಯದ ಜಸ್ವಂತ್​ ಸಿಂಗ್​ ಮತ್ತು ಅವರ ಮಗ ತರುಣ್​​ದೀಪ್​ ಸಿಂಗ್​​ ಅವರ ಕೊಲೆಯಾಗಿತ್ತು. ಬಳಿಕ SAJJAN KUMAR​​ ನೇತೃತ್ವದ ಗುಂಪಿನ ವಿರುದ್ಧ ಪಂಜಾಬಿ ಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Second life sentence ;

ಸಜ್ಜನ್​ಕುಮಾರ್​ ಅವರಿಗೆ ವಿಧಿಸಲಾಗುತ್ತಿರುವ ಎರಡನೇ ಜೀವಾವಧಿ ಶಿಕ್ಷೆ ಇದಾಗಿದೆ. 1984 ರ ಸಿಖ್​​ ವಿರೋಧಿ ದಂಗೆಗೆ ಸಂಬಂಧಿಸಿದಂತೆ ದೆಹಲಿಯ ಕಂಟೋನ್ಮೆಂಟ್ ನಡೆದ ​ದಂಗೆಯಲ್ಲಿ ಭಾಗಿಯಾದ ಪ್ರಕರಣದಲ್ಲಿ ಅವರಿಗೆ 2018 ರಲ್ಲಿ ದೆಹಲಿಯ ವಿಶೇಷ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದರಿಂದ ಸಜ್ಜನ್​ಕುಮಾರ್​​ ತಿಹಾರ್​ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದರ ವಿರುದ್ಧ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ.

What was in the investigation report?

ಈ ಬಗ್ಗೆ ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಕೋರ್ಟ್​ಗೆ ವರದಿ ನೀಡಿತ್ತು. ಅದರಲ್ಲಿ ಸಜ್ಜನ್​ಕುಮಾರ್​ ಅವರ ನೇತೃತ್ವದ ಶಸ್ತ್ರಸಜ್ಜಿತ ಗುಂಪಿನ ವಿರುದ್ಧ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿತ್ತು. ಚಾರ್ಜ್​ಶೀಟ್​ನಲ್ಲಿ ತಿಳಿಸಿದಂತೆ, ಸಶಸ್ತ್ರ ಪಡೆಯು ಇಂದಿರಾ ಅವರ ಹತ್ಯೆಗೆ ಪ್ರತೀಕಾರವಾಗಿ ನವೆಂಬರ್​​ 1 ಮತ್ತು 2 ರಂದು ಸಿಖ್ಖರ ನರಮೇಧ ನಡೆಸಿತು. ಸರಸ್ವತಿ ವಿಹಾರ್​ನಲ್ಲಿ ತಂದೆ- ಮಗನನ್ನು ಸಜೀವ ದಹನ ಮಾಡಿದ್ದರು.

ಮನೆಗೆ ಬೆಂಕಿ ಹಚ್ಚಲಾಯಿತು. ಆಸ್ತಿಪಾಸ್ತಿ ನಾಶ ಮಾಡಿದ್ದರು. ಬಳಿಕ ದೆಹಲಿ ಕಂಟೋನ್ಮೆಂಟ್​​ನಲ್ಲಿ ಐವರನ್ನು ಹತ್ಯೆ ಮಾಡಲಾಗಿತ್ತು. ಈ ಎಲ್ಲಾ ಹತ್ಯೆಗಳಲ್ಲಿ ಸಜ್ಜನ್​​ಕುಮಾರ್​ ಅವರ ನೇತೃತ್ವದ ಗುಂಪು ಭಾಗಿಯಾಗಿದೆ ಎಂದು ಎಸ್​​ಐಟಿ ಹೇಳಿತ್ತು. ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆದು ಇದೀಗ ತೀರ್ಪು ಪ್ರಕಟವಾಗಿದೆ.

ನ್ನೂ, 1984 ರ ಅಕ್ಟೋಬರ್ 31 ರಂದು ಪ್ರಧಾನಿ ಇಂದಿರಾ ಗಾಂಧಿ ಅವರು ತಮ್ಮ ಸಿಖ್ ಅಂಗರಕ್ಷಕರಿಂದ ಹತ್ಯೆಯಾದ ನಂತರ ಗಲಭೆಗಳು ಭುಗಿಲೆದ್ದಿದ್ದವು. ದೆಹಲಿಯಲ್ಲಿಯೇ ಕನಿಷ್ಠ 2,800 ಸಿಖ್ಖರ ಹತ್ಯೆ ನಡೆದಿತ್ತು. ದಂಗೆಗೆ ಸಂಬಂಧಿಸಿದಂತೆ 587 ಎಫ್‌ಐಆರ್‌ಗಳು ದಾಖಲಾಗಿಧ್ದವು.

ಇದರಲ್ಲಿ 240 ಎಫ್‌ಐಆರ್‌ಗಳು ರದ್ದಾಗಿ, 250 ಕೇಸ್​​ಗಳಲ್ಲಿ ಆರೋಪಿಗಳಿಗೆ ಖುಲಾಸೆ ಸಿಕ್ಕಿದೆ. ಕೇವಲ 28 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. ಸಜ್ಜನ್​​ಕುಮಾರ್ ಸೇರಿದಂತೆ ಸುಮಾರು 50 ಮಂದಿ ಹತ್ಯೆ ಕೇಸಲ್ಲಿ ಶಿಕ್ಷೆಗೊಳಗಾಗಿದ್ದಾರೆ.

ಇದನ್ನೂ ಓದಿ:  NIA Court Convicts Husband, Wife In Naval Espionage Case

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...