spot_img
spot_img

ಹ್ಯಾಂಡಲ್ ಮಾಡೋದು ನಮ್ಗೂ ಗೊತ್ತಿದೆ ; ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಿಡಿಕಾರಿದ್ದಾರೆ.!

spot_img
spot_img

Share post:

ಮಂಡ್ಯದ ನಾಗಮಂಗಲ ಘಟನೆಯನ್ನು ರಾಜಕೀಯ ಮಾಡಬೇಡಿ ಎಂದಿದ್ದರೂ ವಿಪಕ್ಷದವರು ರಾಜಕೀಯ ಮಾಡ್ತಿದ್ದಾರೆ. ಮಾಡಲಿ, ಅದನ್ನು ಹ್ಯಾಂಡಲ್ ಮಾಡೋದು ನಮ್ಗೂ ಗೊತ್ತಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಿಡಿಕಾರಿದ್ದಾರೆ.

ನಾಗಮಂಗಲ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು.. ವರದಿ ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಹಿರಿಯ ಅಧಿಕಾರಿಗಳು, ಡಿಜಿಯವರು, ಎಡಿಜಿ ಲಾ ಅಂಡ್ ಆರ್ಡರ್ ಇವರೆಲ್ಲ ಸೇರಿ ಸಭೆ ಮಾಡಿ ಸೂಚನೆ ಕೊಟ್ಟಿರುತ್ತಾರೆ. ಸರ್ಕಾರದಿಂದ ನಾವು ಕೂಡ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಸೂಚಿಸಿರುತ್ತೇವೆ.

ಇದನ್ನೂ ಓದಿ:ಬೆಳ್ಳುಳ್ಳಿ ತಿಂದರೆ ಕ್ಯಾನ್ಸರ್ ರೋಗ ಬರುತ್ತದೆ. ಶಾಕಿಂಗ್ ನ್ಯೂಸ್ !

ನಾಗಮಂಗಲದಲ್ಲಿ ಕೆಎಸ್​ಆರ್​ಪಿ ವ್ಯಾನ್ ಸಮೇತ ಇದ್ದರು. ಘಟನೆ ನಡೆದು ಅರ್ಧ ಗಂಟೆಯಲ್ಲಿ ಎಸ್​ಪಿ, ಐಜಿಯವರು ಸ್ಥಳಕ್ಕೆ ಬಂದು ತಕ್ಷಣ ಗಲಾಟೆ ನಿಲ್ಲಿಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದ್ದು ವರದಿ ಕೊಡಿ ಎಂದು ಕೇಳಿದ್ದೇವೆ ಎಂದರು.

ನಾಗಮಂಗಲ ಈಗ ಕಂಟ್ರೋಲ್​ನಲ್ಲಿದ್ದು ಮಾನಿಟರ್ ಮಾಡ್ತಿದ್ದಾರೆ. ಪೊಲೀಸರು ಅಲ್ಲಿ ಕ್ಯಾಂಪ್ ಮಾಡಿದ್ದಾರೆ. ಶಾಂತಿಯಿಂದ ಇದ್ದು ಶಾಂತಿ ಸಭೆ ಕೂಡ ಮಾಡ್ತಿದ್ದಾರೆ. ವರದಿ ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ. ಘಟನೆಗೆ ಕಾರಣಗಳೇನು?

ಎಂಬುದರ ಕುರಿತು ವರದಿ ನೀಡುವಂತೆ ಈಗಾಗಲೇ ಸೂಚಿಸಿದ್ದೇನೆ‌. ವರದಿ ಬಂದ ನಂತರ ಕಾನೂನು ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತೇವೆ. ಕಾನೂನಿಗಿಂತ ಯಾರು ದೊಡ್ಡವರಲ್ಲ. ಗಣೇಶನ ಹಬ್ಬ ಸೇರಿದಂತೆ ಬೇರೆ ಹಬ್ಬಗಳಲ್ಲಿ ಗೊಂದಲ ಸೃಷ್ಟಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಂತವರನ್ನು ಬಿಡಲ್ಲ. ಕಾನೂನು ಪ್ರಕಾರ ಅವರ ಮೇಲೆ ಕಟ್ಟುನಿಟ್ಟಾಗಿ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಆಕಸ್ಮಿಕವಾಗಿ ಗೃಹ ಸಚಿವರಾಗಿ ಆಯ್ಕೆಯಾಗಿದ್ದಾರೆ ಎನ್ನುವ ಬಿಜೆಪಿ ನಾಕಯಕ ಹೇಳಿಕೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಗರಂ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಶಬ್ಧಗಳನ್ನು ಟ್ವಿಸ್ಟ್ ಮಾಡಿ ಹೇಳುವುದಕ್ಕೆ ಬರಲ್ಲ.

ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಪರೀಕ್ಷೆ ಇಲ್ಲದೆ, 3 ಸಾವಿರಕ್ಕೂ ಅಧಿಕ ಜಾಬ್ಸ್ ಲಭ್ಯ..!

ನಿಮಗೆ ಬೇಕಾದಂಗೆ ಟ್ವಸ್ಟ್ ಮಾಡಿಕೊಂಡರೆ ಏನು ಮಾಡೋಕೆ ಆಗಲ್ಲ. ನಮಗೆ ಜವಾಬ್ದಾರಿ ಇದೆ. ರಾಜ್ಯದಲ್ಲಿ ಜಾವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಇವರ ಸರ್ಟಿಫಿಕೆಟ್​  ಬೇಕಾಗಿಲ್ಲ. ಘಟನೆಯನ್ನು ಯಾರಾದರೂ ಸಮರ್ಥನೆ ಮಾಡುತ್ತಾರಾ?.

ಈಗಾಗಲೇ 52 ಜನರನ್ನು ಬಂಧಿಸಲಾಗಿದೆ. ಕನ್ನಡ ಭಾಷೆಯನ್ನು ಟ್ವಿಸ್ಟ್​ ಮಾಡಿ, ಟರ್ನ್ ಮಾಡಿ, ಸಣ್ಣದು ಅಂದ್ರು, ದೊಡ್ಡದು ಅಂದ್ರು ವಿಪಕ್ಷದವರು ಹೇಳಲಿ. ನನಗೂ ಮಾತನಾಡೋಕೆ ಬರುತ್ತೆ, ನನಗೂ ಗೊತ್ತಿದೆ. ವಿರೋಧ ಪಕ್ಷದವರು ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಈಗಾಗಲೇ ಹೇಳಿದ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...