spot_img
spot_img

2 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಕ್ಯಾನ್ಸಲ್ ! ಸಿಕ್ಕದ್ದಷ್ಟೇ ಅವರ ಪಾಲಿನ ‘ಪಂಚಾಮೃತ’.

spot_img
spot_img

Share post:

ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಕಂತು ಬಂದಿಲ್ಲ ಎಂದು 2-3  ತಿಂಗಳಿಂದ ನೀವು ಹಾದಿ ನೋಡುತ್ತಿದ್ದರೆ, ನಿಮ್ಮಲ್ಲಿ ಬಹುತೇಕರಿಗೆ ಈ ಯೋಜನೆಯೇ ರದ್ದಾಗಿರುವ ಸಾಧ್ಯತೆ ಇರುತ್ತದೆ. ಹೌದು ಸದ್ದಿಲ್ಲದೆ ಐಟಿ,ಜಿಎಸ್‌ಟಿ ಯೋಜನೆ.

ರಾಜ್ಯ ಸರಕಾರದ ಪಂಚ ‘ಗ್ಯಾರಂಟಿ’ ಗಳಲ್ಲಿಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ ಸದ್ದಿಲ್ಲದೆ ಐಟಿ (ಆದಾಯ ತೆರಿಗೆ) ಶಾಕ್‌ ನೀಡಿದೆ. ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಇನ್ನು ಮುಂದೆ ಗೃಹಲಕ್ಷ್ಮೀ ಹಣ ಸಿಗಲ್ಲ.ಇದುವರೆಗೆ ಸಿಕ್ಕದ್ದಷ್ಟೇ ಅವರ ಪಾಲಿನ ‘ಪಂಚಾಮೃತ’. ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿದಾರ ಮಹಿಳೆಯರನ್ನು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಹೊರಗಿಡಲಾಗಿದೆ. IT GST ಪಾವತಿದಾರರ ಪಟ್ಟಿ ಸಿದ್ಧವಾಗಿದ್ದು, ಅವರಿಗೆ ಯೋಜನೆ ಸ್ಥಗಿತಗೊಳಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪರಿಶೀಲಿಸಿ

ಕಳೆದ 2-3 ತಿಂಗಳಿಂದ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂದಿಲ್ಲ. ಇವತ್ತು – ನಾಳೆ ಅಷ್ಟೂ ತಿಂಗಳ ಹಣ ಒಟ್ಟಿಗೇ ಬರುತ್ತದೆ ಎಂದು ನಿರೀಕ್ಷಿ ಇಟ್ಟುಕೊಳ್ಳುವುದು ಹಾಗೂ ಬ್ಯಾಂಕ್‌ಗಳಿಗೆ ಪದೇಪದೆ ಈ ಉದ್ದೇಶದಿಂದ ಅಲೆಯುವುದು ಬೇಡ. ಸ್ಥಳೀಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಾಲಯದಲ್ಲಿ ವಿಚಾರಿಸಿದರೆ ಕಾರಣ ಸ್ಪಷ್ಟವಾಗಲಿದೆ. ಎನ್‌ಪಿಸಿಐ ಇನ್‌ ಆಕ್ಟಿವ್‌ ಆದ ಫಲಾನುಭವಿಗಳಿಗೂ ಹಣ ಖಾತೆಗೆ ಜಮೆಯಾಗಿಲ್ಲ.

ಆಧಾರ್‌ ಲಿಂಕ್‌, ಬ್ಯಾಂಕ್‌ ಖಾತೆ ಜೋಡಣೆ ಮೊದಲಾದ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆ ಕಾರಣದಿಂದ ಯೋಜನೆ ಹಣ ಬರದಿದ್ದರೆ ಅಪ್‌ಡೇಟ್‌ ಮಾಡಿಸಿಕೊಂಡ ಹಾಗೂ ಸಮಸ್ಯೆ ಬಗೆಹರಿದ ಕೂಡಲೇ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಖಾತೆಗೆ ಜಮೆ ಆಗಲಿದೆ.

ಇದನ್ನೂ ಓದಿ: ಹ್ಯಾಂಡಲ್ ಮಾಡೋದು ನಮ್ಗೂ ಗೊತ್ತಿದೆ ; ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಿಡಿಕಾರಿದ್ದಾರೆ.!

2 ಲಕ್ಷ ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ

ರಾಜ್ಯದ 1.28 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳಲ್ಲಿ ಸದ್ಯದ ಲಭ್ಯ ಮಾಹಿತಿ ಪ್ರಕಾರ ಸುಮಾರು 2 ಲಕ್ಷ ಮಹಿಳೆಯರನ್ನು ಐಟಿ, ಜಿಎಸ್‌ಟಿ ಪಾವತಿ ಕಾರಣದಿಂದ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗಿದೆ. ತುಮಕೂರು ಜಿಲ್ಲೆಯೊಂದರಲ್ಲೇ ಐಟಿ, ಜಿಎಸ್‌ಟಿ ಕಟ್ಟುವ 7,343 ಮಹಿಳೆಯರು ಗೃಹಲಕ್ಷ್ಮೀ’ಯಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ:ನಾಗಮಂಗಲ ಪರಿಸ್ಥಿತಿ ಶಾಂತಿಯುತವಾಗಿದ್ದು, ಶಾಂತಿ ಸಭೆ ನಡೆಸಲಾಗುತ್ತಿದೆ; ಸಚಿವ ಪರಮೇಶ್ವರ ಹೇಳಿದ್ದಾರೆ.!

ಅಧಿಕೃತ ಹಿಂಬರಹ

ಐಟಿ, ಜಿಎಸ್‌ಟಿ ಪಾವತಿದಾರ ಮಹಿಳೆಯರು ‘ಗೃಹಲಕ್ಷ್ಮೀ’ ಹಣ ಬಂದಿಲ್ಲವೆಂದು ಕಚೇರಿಗೆ ಅಲೆಯುತ್ತಿದ್ದರೆ, ಅವರನ್ನು ಆ ಉದ್ದೇಶಕ್ಕಾಗಿ ಅಲೆಸಬಾರದು. ಜಿಎಸ್‌ಟಿ, ಐಟಿ ಪಾವತಿದಾರರಾಗಿರುವುದರಿಂದ ನಿಮಗೆ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ಸಿಗುವುದಿಲ್ಲಎಂದು ಅಧಿಕೃತವಾಗಿಯೇ ಹಿಂಬರಹ ನೀಡುವಂತೆ ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆದೇಶಿಸಿದ್ದಾರೆ.

ಐಟಿ, ಜಿಎಸ್‌ಟಿ ಕ್ಯಾತೆ ಏಕೆ?

ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಐದು ಗ್ಯಾರಂಟಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರದ ವೇಳೆ, ‘ತನ್ನ ಪತ್ನಿಗೂ ಸೇರಿದಂತೆ ಪ್ರತಿಯೊಬ್ಬ ಮಹಿಳೆಯರಿಗೂ ಗ್ಯಾರಂಟಿ ಲಾಭ ಸಿಗಲಿದೆ. ಗೃಹಲಕ್ಷ್ಮೀ ಯೋಜನೆ ಹಣ 2000 ರೂ. ಮಾಸಿಕವಾಗಿ ಬ್ಯಾಂಕ್‌ ಖಾತೆಗೆ ಸಂದಾಯವಾಗಲಿದೆ’ ಎಂದಿದ್ದರು. ಆದರೆ ಈಗ ‘ಷರತ್ತುಬದ್ಧ ಗ್ಯಾರಂಟಿ’ ನೀಡಿಕೆ ಟೀಕೆಗೆ ಅಸ್ತ್ರವಾಗುತ್ತಿದೆ.

ಇದನ್ನೂ ಓದಿ:ಮಾರುತಿ ಸುಜುಕಿ ಕಾರು ಒಂದು ಬಾರಿ ಚಾರ್ಜ್ ಮಾಡಿದ್ರೆ 500km ಚಲಿಸುತ್ತೆ .! ಹೊಸ ಎಲೆಕ್ಟ್ರಿ ವಾಹನ.

ಐಟಿ, ಜಿಎಸ್‌ಟಿ ಪಾವತಿದಾರರನ್ನು ಗೃಹಲಕ್ಷ್ಮೀ ಯೋಜನೆಯಿಂದ ಕೈಬಿಡಲಾಗಿದೆ. ಫಲಾನುಭವಿಗಳ ಪಟ್ಟಿಯಿಂದ ಕೈಬಿಟ್ಟವರಿಗೆ ಅಧಿಕೃತವಾಗಿಯೇ ಹಿಂಬರಹ ನೀಡುವಂತೆ ಸೂಚಿಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹೇಳಿದ್ದಾರೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...