spot_img
spot_img

ವರುಣ ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ಪ್ರಾರಂಭ

spot_img
spot_img

Share post:

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ಕ್ಷೇತ್ರದ ಯುವಕರು ಹಾಗೂ ಯುವತಿಯರು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಲು ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಪುತ್ರ, ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ಹಾಲಿ ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ತರಬೇತಿ, ಮಾರ್ಗದರ್ಶನ ನೀಡಲಾಗುತ್ತದೆ.

ತಾಲ್ಲೂಕಿನ ವರುಣದ ಅಂಬೇಡ್ಕರ್‌ ಭವನದಲ್ಲಿ ನಾಲ್ಕು ತಿಂಗಳವರೆಗೆ ತರಬೇತಿ ನೀಡಲಾಗುವುದು. ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸುವ ಆಕಾಂಕ್ಷಿಗಳಿಗ, ಪರೀಕ್ಷೆಯನ್ನು ಎದುರಿಸುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತಾರೆ.

ನ.11ರಿಂದ ನೋಂದಣಿ ಪ್ರಾರಂಭ ಗೊಳ್ಳಲಿದೆ. ನ.25ರೊಳಗೆ ಹೆಸರು ನೋಂದಾಯಿಸಿದವರಿಗೆ ಅವಕಾಶ ದೊರೆಯಲಿದೆ. ಕೆಪಿಎಸ್‌ಸಿಯಿಂದ ನಡೆಸುವ ಕೆಎಎಸ್ ಮೊದಲಾದ ಪರೀಕ್ಷೆಗಳಿಗೆ, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ, ಪಿಡಿಒ ಹಾಗೂ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆ ಗಳನ್ನು ಪಡೆಯಲು ಬಯಸುವವರು ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಬೇಕಾಗುವ ಸಿದ್ಧತೆಯ ಕುರಿತು ಮಾರ್ಗದರ್ಶನವನ್ನು ಪಡೆಯಬಹುದಾಗಿದೆ.

ಪದವೀಧರರು, ಪದವಿ ವಿದ್ಯಾಭ್ಯಾಸ ಮಾಡುತ್ತಿರುವವರು ಹಾಗೂ ಪಿಯುಸಿ ಪಾಸಾದವರು ಭಾಗವಹಿಸಬಹುದು.
ದೂರದ ಊರಿಗೆ ಹೋಗುವುದು ತಪ್ಪುತ್ತದೆ: ಉದ್ಯೋಗ ಆಕಾಂಕ್ಷಿಯು ಪರೀಕ್ಷೆಯ ತರಬೇತಿಗೆಂದು ಬೆಂಗಳೂರು ಅಥವಾ ಧಾರವಾಡಕ್ಕೆ ಹೋಗಬೇಕಾದರೆ ₹50ಸಾವಿರದಿಂದ ₹60 ಸಾವಿರ ಬೇಕಾಗುತ್ತದೆ.

ಸಮೀಪದಲ್ಲೇ ತರಬೇತಿ ದೊರೆತರೆ ಆ ಹಣ ಉಳಿಯಲಿದೆ. ಹೀಗಾಗಿ, ಇನ್ಮುಂದೆ ವರುಣ ಕ್ಷೇತ್ರದಲ್ಲೇ ಪ್ರತಿ ವರ್ಷ ತರಬೇತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.

ವರುಣ, ದಂಡಿಕೆರೆ, ಸಿದ್ದರಾಮನ ಹುಂಡಿ, ಯಡಕೊಳ, ಕುಪ್ಪೇಗಾಲ, ಹೊಸಹಳ್ಳಿ, ರಂಗನಾಥಪುರ, ಶ್ರೀನಿವಾಸಪುರ, ದೇವೇಗೌಡ ಹುಂಡಿ, ತುಮ್ಮನೇರಳೆ, ನಂದಿಗುಂದಿ, ಮರಡಿಹುಂಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ನಿರುದ್ಯೋಗಿ ಪದವೀಧರರಿಗೆ ಅನುಕೂಲವಾಗಲಿದೆ.

ಗ್ರಾಮೀಣ ಪ್ರದೇಶದ ಯುವಜನರು ಸರ್ಕಾರಿ ನೌಕರಿ ಪಡೆದುಕೊಳ್ಳಲು ಎದುರಿಸಬೇಕಾದ ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಲು ಸೂಕ್ತ ತರಬೇತಿಯ ಅಗತ್ಯವಿರುತ್ತದೆ.

ನಗರ ಪ್ರದೇಶಗಳಿಗೆ ಅಥವಾ ಬೆಂಗಳೂರು, ಧಾರವಾಡದಂತಹ ಕಡೆಗಳಿಗೆ ಹೋಗುವುದು ಆರ್ಥಿಕವಾಗಿ ಹೊರೆಯಾಗುತ್ತದೆ. ಹಣವನ್ನು ಹೊಂದಿಸುವುದು ಅವರಿಗೆ ಕಷ್ಟವಾಗುತ್ತದೆ. ಇದಕ್ಕಾಗಿ ಅವರಿಗೆ ಸಮೀಪದಲ್ಲೇ ತರಬೇತಿ ದೊರೆಯಲೆಂದು, ಕ್ಷೇತ್ರದಲ್ಲೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಯತೀಂದ್ರ ತಿಳಿಸಿದ್ದಾರೆ.

ನ.11ರಿಂದ ನೋಂದಣಿ 25ರವರೆಗೆ ಹೆಸರು ನೋಂದಾಯಿಸಬಹುದು ಪದವೀಧರರು, ಪದವಿ ವಿದ್ಯಾರ್ಥಿಗಳಿಗೆ ಅವಕಾಶದಂಡಿಕೆರೆ ನಾಗರಾಜ್‌ ಸಿಂಡಿಕೇಟ್ ಸದಸ್ಯ ಬೆಂಗಳೂರು ವಿಶ್ವವಿದ್ಯಾಲಯಇಂತಹ ತರಬೇತಿಯಿಂದ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಹೊಂದಬೇಕು ಎನ್ನುವವ ರಿಗೆ ಅನುಕೂಲವಾಗಲಿದೆ.

ಕೋಚಿಂಗ್‌ ಕೇಂದ್ರಗಳಿಗೆ ಹೋಗಲಾರದ ಬಡವರಿಗೆ ಸಹಕಾರಿ ಆಗುತ್ತದೆ. ನೋಂದಣಿಗೆ ಮೊ.ಸಂ. 88670 71733 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...