spot_img
spot_img

ಮುಸ್ಲಿಮರಿಗೆ ಮೀಸಲಾತಿ, ಆರೆಸ್ಸೆಸ್ ನಿಷೇದಿಸಿ ನೇಮಕಾತಿಗೆ ಆಧ್ಯತೆ : ಸರ್ಕಾರ

spot_img
spot_img

Share post:

ಮುಂಬೈ: ಅಖಿಲ ಭಾರತ ಉಲಮಾ ಬೋರ್ಡ್ (Ulama Board) ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನಾ ಪಕ್ಷಗಳ ಮಹಾ ವಿಕಾಶ್ ಆಘಾಡಿ (ಎಂವಿಎ) ಸರ್ಕಾರಕ್ಕೆ ಬೆಂಬಲ ನೀಡಲು ಮುಂದಾಗಿದೆ.

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್​ಸಿಪಿ ಮುಖ್ಯಸ್ತ ಶರದ್ ಪವಾರ್ ಮತ್ತು ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವರಿಗೆ ಉಲಮಾ ಬೋರ್ಡ್ ಪತ್ರ ಬರೆದು, ತನ್ನ ನೆರವನ್ನು ಘೋಷಿಸಿದೆಯಾದರೂ, ಅದು ಷರತ್ತುಬದ್ಧ ಬೆಂಬಲ ಎಂದು ಸ್ಪಷ್ಟಪಡಿಸಿದೆ.

ಆರೆಸ್ಸೆಸ್ ನಿಷೇಧಿಸಬೇಕು, ವಕ್ಫ್ ಮಸೂದೆಯನ್ನು ವಿರೋಧಿಸಬೇಕು. ಮಹಾರಾಷ್ಟ್ರದ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು.

ಅತಿಕ್ರಮಗೊಂಡ ವಕ್ಫ್ ಆಸ್ತಿಗಳನ್ನು ಮರಳು ಕ್ರಮ ತೆಗೆದುಕೊಳ್ಳಬೇಕು ಎಂಬಿತ್ಯಾದಿ 17 ಬೇಡಿಕೆಗಳನ್ನು ಉಲೇಮಾ ಮಂಡಳಿ ಮುಂದಿಟ್ಟಿದೆ.

ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಬೇಕು. ಮಹಾರಾಷ್ಟ್ರದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ. 10 ಮೀಸಲಾತಿ ನೀಡಬೇಕು. ಮಹಾರಾಷ್ಟ್ರದ 48 ಜಿಲ್ಲೆಗಳಲ್ಲಿ ಅತಿಕ್ರಮಗೊಂಡಿರುವ ವಕ್ಫ್ ಆಸ್ತಿಗಳನ್ನು ಮರಳಿ ಕೊಡಲಾಗುವಂತೆ ಕಾನೂನು ರೂಪಿಸಬೇಕು.

ಮಹಾರಾಷ್ಟ್ರ ವಕ್ಫ್ ಬೋರ್ಡ್​ಗೆ 1,000 ಕೋಟಿ ರೂ ಹಣ ಒದಗಿಸಬೇಕು. ಮಹಾರಾಷ್ಟ್ರ ರಾಜ್ಯದಲ್ಲಿ ಪೊಲೀಸ್ ನೇಮಕಾತಿಯಲ್ಲಿ ಮುಸ್ಲಿಮರಿಗೆ ಆದ್ಯತೆ ಕೊಡಬೇಕು. ಎಂವಿಎ ಸರ್ಕಾರ ರಚನೆಯಾದರೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು.

ಬಿಜೆಪಿ ನಾಯಕ ನಿತೇಶ್ರಾ ಣೆ ಮತ್ತು ರಾಮಗಿರಿ ಮಹಾರಾಜ್ ಅವರನ್ನು ಕೂಡಲೇ ಬಂಧಿಸಬೇಕು. ಪ್ರಚೋದನಕಾರಿ ಹೇಳಿಕೆ ನೀಡಿ ಬಂಧಿತರಾಗಿರುವ ಮೌಲಾನ ಸಲ್ಮಾನ್ ಅಝೇರಿ ಅವರನ್ನು ಬಿಡುಗಡೆ ಮಾಡಬೇಕು.

2012ರಿಂದ 2024ರವರೆಗೆ ಗಲಭೆ ಪ್ರಕರಣಗಳಲ್ಲಿ ಬಂಧಿತರಾಗಿರುವ ಅಮಾಯಕ ಮುಸ್ಲಿಮರನ್ನು ಬಿಡುಗಡೆ ಮಾಡಬೇಕು. ಮಹಾರಾಷ್ಟ್ರ ಮಸೀದಿಗಳ ಇಮಾಮರು ಮತ್ತು ಮೌಲಾನಗಳಿಗೆ ಮಾಸಿಕ 15,000 ರೂ ಸಂಭಾವನೆ ನೀಡಬೇಕು.

ಅಧಿಕಾರಕ್ಕೆ ಬಂದ ಬಳಿಕ ಅಖಿಲ ಭಾರತ ಉಲಮಾ ಮಂಡಳಿಯ ಮುಫ್ತಿ ಮೌಲಾನ, ಅಲೀಮ್ ಹಫೀಜ್ ಮಸೀದಿಯ ಇಮಾಮರನ್ನು ಸರ್ಕಾರದ ಸಮಿತಿಯಲ್ಲಿ ಸೇರಿಸಿಕೊಳ್ಳಬೇಕು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮ್ ಸಮುದಾಯದ 50 ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು. ಮಹಾರಾಷ್ಟ್ರ ರಾಜ್ಯ ವಕ್ಫ್ ಬೋರ್ಡ್​ನಲ್ಲಿ 500 ಉದ್ಯೋಗಿಗಳ ನೇಮಕಾತಿ ಆಗಬೇಕು.

ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡುವ ಜನರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು.
ಮಹಾರಾಷ್ಟ್ರದ 48 ಜಿಲ್ಲೆಗಳಲ್ಲಿ ಎಂವಿಎ ಪರವಾಗಿ ಪ್ರಚಾರ ಮಾಡಲು ಉಲಮಾ ಮಂಡಳಿಗೆ ಅಗತ್ಯವಾಗಿರುವ ಸಾಮಗ್ರಿಗಳನ್ನು ಒದಗಿಸಬೇಕು.

ಮಹಾರಾಷ್ಟ್ರದಲ್ಲಿ ಮುಸ್ಲಿಮ್ ಜನಸಂಖ್ಯೆ 1.3 ಕೋಟಿಯಷ್ಟಿದೆ. ಆ ದೈತ್ಯರಾಜ್ಯದಲ್ಲಿ ಒಟ್ಟು 11.24 ಕೋಟಿ ಜನಸಂಖ್ಯೆ ಇದ್ದು ಮುಸ್ಲಿಮರ ಪ್ರಮಾಣ ಶೇ. 11.56ರಷ್ಟಿದೆ. ಕುತೂಹಲ ಎಂದರೆ ಅಲ್ಲಿನ 288 ವಿಧಾನಸಭಾ ಕ್ಷೇತ್ರಗಳ ಪೈಕಿ 38ರಲ್ಲಿ ಮುಸ್ಲಿಮ್ ಮತದಾರರ ಸಂಖ್ಯೆ ಶೇ. 20ರಷ್ಟಿದೆ. 9 ಕ್ಷೇತ್ರದಲ್ಲಿ ಇವರ ಬಾಹುಳ್ಯ ಶೇ. 40ಕ್ಕಿಂತಲೂ ಹೆಚ್ಚಿದೆ.

ಮುಂಬೈನ 10 ಕ್ಷೇತ್ರಗಳಲ್ಲಿ ಶೇ. 25ಕ್ಕೂ ಹೆಚ್ಚು ಮುಸ್ಲಿಮರಿದ್ದಾರೆ. ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ಆಗುತ್ತಿದೆ.

ನವೆಂಬರ್ 23ರಂದು ಮತ ಎಣಿಕೆಯಾಗಿ ಫಲಿತಾಂಶ ಹೊರಬರಲಿದೆ. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಈ ಚುನಾವಣೆ ಅಗ್ನಿಪರೀಕ್ಷೆಯಾಗಿದ್ದು, ನಿಕಟ ಪೈಪೋಟಿ ಇರುವ ಸಾಧ್ಯತೆ ಇದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...