spot_img
spot_img

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯಿಂದ ಜರುಗಿದ ಚಿಕ್ಕ ಜಾತ್ರಾ ಮಹೋತ್ಸವ

spot_img
spot_img

Share post:

ಮೈಸೂರು : ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ಚಿಕ್ಕ ಜಾತ್ರಾ ಮಹೋತ್ಸವವು ಸಡಗರ, ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿದೆ.

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ಚಿಕ್ಕ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಬೆಳಗ್ಗೆ 10.45 ರಿಂದ 11.30 ಗಂಟೆಯೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ಶ್ರೀ ನಂಜುಂಡೇಶ್ವರ ಸ್ವಾಮಿಯ ಚಿಕ್ಕ ಜಾತ್ರಾ ಮಹೋತ್ಸವದಲ್ಲಿ, ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

ಬಣ್ಣ ಬಣ್ಣದ ಹೂ ಮತ್ತು ವಜ್ರಾಭರಣಗಳಿಂದ ಅಲಂಕೃತಗೊಂಡ ಶ್ರೀ ನಂಜುಂಡೇಶ್ವರಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿ ಸೇರಿದಂತೆ ಶ್ರೀ ಗಣಪತಿ, ಚಂಡಿಕೇಶ್ವರ ಹಾಗೂ ಶ್ರೀ ಮನೋನ್ಮಣಿ ಅಮ್ಮನವರ ಉತ್ಸವ ಮೂರ್ತಿಗಳಿಗೆ ಹಲವು ಧಾರ್ಮಿಕ ವಿಧಿ -ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು.

ದೇವಾಲಯದ ಸುತ್ತ ಮೆರವಣಿಗೆ ತಂದ ಉತ್ಸವ ಮೂರ್ತಿಗಳನ್ನು ಬಣ್ಣ ಬಣ್ಣದ ಹೂ ಹಾಗೂ ಬಂಟಿಂಗ್ಸ್ ಮತ್ತು ಬಾವುಟಗಳಿಂದ ಅಲಂಕರಿಸಲಾಗಿದ್ದ ರಥಗಳಲ್ಲಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ನೆರವೇರಿಸಲಾಯಿತು.

ರಥಕ್ಕೆ ಪೂಜೆ ಸಲ್ಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ್, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಮತ್ತಿತರ ಗಣ್ಯರು ರಥವನ್ನು ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ಬಳಿಕ ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ರಥವನ್ನು ಎಳೆದು ಭಕ್ತಿ ಭಾವ ಮೆರೆದರು.

ಮೊದಲಿಗೆ ಶ್ರೀ ಗಣಪತಿ ಹಾಗೂ ಚಂಡಿಕೇಶ್ವರ, ನಂತರ ಪಾರ್ವತಿ ಸಮೇತ ಶ್ರೀ ನಂಜುಂಡೇಶ್ವರ ಸ್ವಾಮಿ ಅದರ ಹಿಂದೆ ಶ್ರೀ ಮನೋನ್ಮಣಿ ಅಮ್ಮನವರ ರಥಗಳು ಒಂದರ ಹಿಂದೆ ಒಂದರಂತೆ ಪಟ್ಟಣದ ರಥ ಬೀದಿಯಲ್ಲಿ ಸಾಗಿ ಯಾವುದೇ ಅಡೆತಡೆ ಇಲ್ಲದೆ ಸ್ವಸ್ಥಾನ ತಲುಪಿದವು.

ದೊಡ್ಡ ಜಾತ್ರೆಯಲ್ಲಿ 5 ಪಂಚಮಹಾರಥಗಳು ರಥೋತ್ಸವದಲ್ಲಿ ಭಾಗಿಯಾದರೆ, ಚಿಕ್ಕ ಜಾತ್ರೆಯಲ್ಲಿ ದೊಡ್ಡ ರಥಗಳನ್ನು ಬಿಟ್ಟು ಚಿಕ್ಕ ಚಿಕ್ಕ ಮೂರು ರಥಗಳು ಮಾತ್ರ ಪಾಲ್ಗೊಳ್ಳುವುದು ವಿಶೇಷವಾಗಿದೆ.

ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರು ಮಾತನಾಡಿ, ”ಈ ದಿವಸ ಎಂದಿನಂತೆ 5 ಗಂಟೆಗೆ ದೇವಾಲಯದ ಬಾಗಿಲು ತೆರೆದಿದ್ದೇವೆ. ದೇವರಿಗೆ ಕ್ಷೀರಾಭಿಷೇಕ, ಫಲ ಪಂಚಾಮೃತಾಭಿಷೇಕ ಹಾಗೂ ರುದ್ರಾಭಿಷೇಕವನ್ನ ನೆರವೇರಿಸಲಾಗಿದೆ. ನಂತರ ಪ್ರಾತಃಕಾಲ ಪೂಜೆ, ನಿತ್ಯೋತ್ಸವ, ಬಲಿಪ್ರಧಾನವಾದ ನಂತರ ಜಂಗಮಕಾಲ ಪೂಜೆಯೊಂದಿಗೆ ಬೆಳಗಿನ ಪೂಜೆ ಸಮಾಪ್ತಿಯಾಗಿದೆ.

ನವಗ್ರಹ ಪೂಜೆ, ಗಣಪತಿ ಪ್ರಾರ್ಥನೆಯನ್ನ ನೆರವೇರಿಸಿ, ದೇವಾಲಯದ ಸುತ್ತ ಪ್ರದಕ್ಷಿಣಾಕಾರವಾಗಿ ಬಂದು ಉತ್ಸವವು ಮಂಟಪ ಪ್ರದರ್ಶನವಾದ ನಂತರ ಮಂಗಲಾಷ್ಠ ಪಠಣ ಪೂರ್ವಕವಾಗಿ 10:30 ರಿಂದ 11:15ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಶ್ರೀಯವರ ರಥಾರೋಹಣ ನೇರವೇರಿಸಲಾಗಿದೆ” ಎಂದರು.

ದೇಶ-ವಿದೇಶಗಳಿಂದ ಆಗಮಿಸಿದ ಸಾವಿರಾರು ಭಕ್ತರು ಬೆಳಗ್ಗೆಯಿಂದಲೇ ದೇವಾಲಯಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರಲ್ಲದೆ, ಚಿಕ್ಕ ಜಾತ್ರಾ ರಥೋತ್ಸವದಲ್ಲೂ ಪಾಲ್ಗೊಂಡು ತೇರುಗಳಿಗೆ ಹಣ್ಣು- ಜವನ ಎಸೆಯುವ ಮೂಲಕ ಭಕ್ತಿ ನಮನ ಸಲ್ಲಿಸಿದರು.

ರಥೋತ್ಸವ ಸಾಗುವ ರಥದ ಬೀದಿಯಲ್ಲಿ ಹರಕೆ ಹೊತ್ತ ಭಕ್ತರು ಪ್ರಸಾದ ವಿನಿಯೋಗ ಮಾಡಿದರು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಡಿವೈಎಸ್​ಪಿ ರಘು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಅಧಿಕಾರಿ ಮಹೇಶ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ಸೇರಿದಂತೆ ಸಾವಿರಾರು ಭಕ್ತರು ಸಾಕ್ಷಿಯಾದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...