spot_img
spot_img

ರೈತರ ಕಂಗೆಡಿಸಿದ ಡೀಮ್ಡ್ ಫಾರೆಸ್ಟ್

spot_img
spot_img

Share post:

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ರೈತರು ಸಾಗುವಳಿ ಮಾಡುತ್ತಿರುವ ಜಮೀನಿಗೂ ಅರಣ್ಯ ಇಲಾಖೆಯಿಂದ ಬೇಲಿ ಹಾಕುತ್ತಿದ್ದರು. ಕೃಷಿ ಮಾಡುತ್ತಿದ್ದ ರೈತರೆಲ್ಲ ದಿಕ್ಕೆಟ್ಟು ಕೂತಿದ್ದರು. ಕೆಲವೆಡೆ ಸರಕಾರವೇ ರೈತರಿಗೆ ಪಹಣಿ ಹಾಗೂ ಇನ್ನಿತರ ದಾಖಲೆಗಳನ್ನು ನೀಡಿ ಜಮೀನನ್ನು ಮಂಜೂರು ಮಾಡಿದೆ.

ಈಗ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದ್ದು, ರೈತರು ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಪರದಾಡುತ್ತಿದ್ದಾರೆ.

ರೈತರು ಮಾತ್ರವಲ್ಲ, ಸರಕಾರಿ ಜಾಗವೂ ಸಿಗದೇ ಜಿಲ್ಲೆಯ ಅಭಿವೃದ್ಧಿಗೂ ಹಿನ್ನಡೆಯಾಗಿದೆ. ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯವೆಂದು ಸರಕಾರದಿಂದ ಘೋಷಣೆಯಾಗಿರುವ ಪ್ರದೇಶದಲ್ಲಿ ಪ್ರಸ್ತುತ ಸ್ವಾಭಾವಿಕ ಗಿಡ, ಮರ, ಕೆರೆ ಕುಂಟೆ, ಕಲ್ಲುಬಂಡೆ, ಲೀಸ್‌ ಲ್ಯಾಂಡ್‌, ಮುಜರಾಯಿ ಜಮೀನು, ಅರಣ್ಯ, ರೈತರ ಹಿಡುವಳಿ ಜಮೀನು ಸೇರಿದೆ.

ಜಿಲ್ಲೆಯ ಬರೋಬ್ಬರಿ 49 ಸಾವಿರ ಎಕರೆ ಪ್ರದೇಶ ಈಗ ವಿವಾದಕ್ಕೆ ಸಿಲುಕಿದೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಾಗಿರುವ ಕಟ್ಟಡಗಳ ನಿರ್ಮಾಣ ಸೇರಿದಂತೆ ಇನ್ನಿತರ ಮೂಲಸೌಕರ್ಯ ಕಲ್ಪಿಸಲು ಅಗತ್ಯವಾಗಿರುವ ಜಾಗವೂ ನಗರಗಳ ಆಸುಪಾಸು ಸಿಗುತ್ತಿಲ್ಲ.

ಖಾಲಿ ಇರುವ ಜಾಗಕ್ಕೆಲ್ಲಾ ಡೀಮ್ಡ್ ಫಾರೆಸ್ಟ್‌ ಎಂದು ತೋರಿಸುತ್ತಿದ್ದು, ಸರಕಾರಿ ಜಾಗ ಸಿಗುವುದೇ ಕಷ್ಟ ಎನ್ನುವ ಪರಿಸ್ಥಿತಿ ಇದೆ.

ಪುರಾತನ ಕಾಲದ ಕಾಯಿದೆಯಿಂದ ಇರುವ ಖಾಲಿ ಭೂಮಿಯೆಲ್ಲಪರಿಭಾವಿತ ಅರಣ್ಯ ಪ್ರದೇಶ ಎಂದು ಘೋಷಿಸಿದ್ದು ರೈತರನ್ನು ಕಂಗೆಡಿಸಿದೆ.

ಇದರ ಆಧಾರದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಆರಂಭಿಸಿದರು. ಇದು ರಾಜ್ಯವ್ಯಾಪಿ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿತು.

2015ರಲ್ಲಿಅಂದಿನ ಸರಕಾರ ಈ ವರದಿಯನ್ನು ಸಂಪುಟದ ಅನುಮೋದನೆಗಾಗಿ ಮಂಡನೆ ಮಾಡಿತ್ತು. ಆದರೆ, ಅನುಮೋದನೆ ಬಳಿಕ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಬಳಿಕ, ಪ್ರಕರಣಗಳು ಉಳಿದುಕೊಂಡರೆ ಮತ್ತೊಮ್ಮೆ ಪರಿಗಣಿಸಲು ಕಷ್ಟವಾಗುತ್ತದೆ ಎಂದು ಅಂತಿಮ ದೃಢೀಕರಣಕ್ಕೆಂದು ಸೂಚಿಸಲಾಗಿತ್ತು.

ಆ ಪ್ರಕ್ರಿಯೆಯಲ್ಲಿಪ್ರಗತಿ ಕಾಣದೇ ಸಾಗುವಳಿದಾರರು ಸಮಸ್ಯೆ ಎದುರಿಸುವಂತಾಗಿದೆ. ಕೃಷಿ ಮಾಡುತ್ತಿದ್ದ ರೈತರೆಲ್ಲ ದಿಕ್ಕೆಟ್ಟು ಕೂತಿದ್ದರು. ಕೆಲವೆಡೆ ಸರಕಾರವೇ ರೈತರಿಗೆ ಪಹಣಿ ಹಾಗೂ ಇನ್ನಿತರ ದಾಖಲೆಗಳನ್ನು ನೀಡಿ ಜಮೀನನ್ನು ಮಂಜೂರು ಮಾಡಿದೆ.

ಸರಕಾರದ ದಾಖಲೆಗಳನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತೋರಿಸಿದರೂ ಪ್ರಯೋಜನವಾಗುತ್ತಿರಲಿಲ್ಲ. ಕೊನೆಗೂ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಮಧ್ಯಪ್ರವೇಶದಿಂದ ಸದ್ಯಕ್ಕೆ ಅರಣ್ಯ ಇಲಾಖೆಯವರ ದಾಳಿ ನಿಂತಿದೆ. ಆದರೆ ದಾಖಲೆಗಳಲ್ಲಿ ಡೀಮ್ಡ್ ಫಾರೆಸ್ಟ್‌ ಮಾತ್ರ ಇನ್ನೂ ಹಾಗೇ ಉಳಿದುಕೊಂಡಿದೆ.

ಸುಪ್ರಿಂ ಕೋರ್ಟ್‌ನ 1996ರ ಗೋಧವರ್ಮನ್‌ ಪ್ರಕರಣದ ತೀರ್ಪಿನ ಮಾನದಂಡದಂತೆ ಇಂತಿಷ್ಟು ಪ್ರದೇಶದಲ್ಲಿಇಂತಿಷ್ಟು ಮರಗಳಿದ್ದರೆ ಮಾತ್ರ ಅದನ್ನು ಅರಣ್ಯ ಎಂಬಂತೆ ವರದಿ ಸಿದ್ಧಪಡಿಸಲಾಗಿದೆ.
ದಶಕಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿಗೂ ಅರಣ್ಯ ಇಲಾಖೆಯಿಂದ ಬೇಲಿ ಹಾಕಲು ಆರಂಭಿಸಿದ್ದರು.

2022ರಲ್ಲಿ ಡೀಮ್ಡ್ ಫಾರೆಸ್ವ್‌ ಪರಿಷ್ಕರಣೆ ಮಾಡದೇ ಜಿಲ್ಲೆಯ ಜಮೀನುಗಳನ್ನು ಡೀ ಫಾಮ್ಡ್ ಫಾರೆಸ್ಟ್‌ ಎಂದು ಮಾಡಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಕೇವಲ 4 ಸಾವಿರ ಎಕರೆ ಡೀಮ್ಡ್ ಫಾರೆಸ್ಟ್‌ ಎಂದು ಮಾಡಿದ್ದಾರೆ. ಆದರೆ ಜಿಲ್ಲೆಯಲ್ಲಿ 49 ಸಾವಿರ ಎಕರೆ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್‌ ಎಂದು ಮಾಡಿದ್ದಾರೆ. ಇದಕ್ಕೆ ಆಗಿನ ಜಿಲ್ಲಾಧಿಕಾರಿ, ಜಿಲ್ಲಾಉಸ್ತುವಾರಿ ಸಚಿವರು, ಕಂದಾಯ ಸಚಿವರೇ ನೇರ ಕಾರಣ.

ಈಗ ನಾವೊಂದನ್ನು ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದು ಡಾ.ಎಂ.ಸಿ.ಸುಧಾಕರ್‌, ಜಿಲ್ಲಾಉಸ್ತುವಾರಿ ಸಚಿವ ಹೇಳಿದ್ದಾರೆ. ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಬಹಳ ಹಿಂದಿನಿಂದಲೂ ಇದೆ. ಅರಣ್ಯ ಇಲಾಖೆಯವರೇ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನನ್ನ ಅವಧಿಯಲ್ಲಿ ಡೀಮ್ಡ್ ಫಾರೆಸ್ಟ್‌ನಿಂದ ಸಾಕಷ್ಟು ಜಮೀನಿಗೆ ಮುಕ್ತಿ ಕೊಡುವ ಕೆಲಸ ಮಾಡಿದ್ದೇನೆ. ಈಗ ಕಾಂಗ್ರೆಸ್‌ ಸರಕಾರವೂ ಮಾಡಲಿ. ರೈತರ ಜಮೀನು ಉಳಿಸಬೇಕು.

ರಾಜ್ಯ ಸರಕಾರ ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆರ್‌.ಅಶೋಕ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಹೇಳಿದ್ದಾರೆ. ಜಿಲ್ಲೆಯಲ್ಲಿವಕ್ಫ್ ಜಮೀನು ವಿವಾದದ ಜತೆ ಡೀಮ್ಡ್ ಫಾರೆಸ್ಟ್‌ ವಿವಾದ ಕೂಡಾ ಸಾಕಷ್ಟು ಸದ್ದು ಮಾಡುತ್ತಿದ್ದು, ಇದೀಗ ರಾಜಕೀಯ ಬಣ್ಣ ಪಡೆದಿರುವುದು ಚರ್ಚೆಗೆ ಗ್ರಾಸವಾಗಿದೆ.

ಹೀಗಾಗಿ ರಾಜ್ಯ ಸರಕಾರದ ವತಿಯಿಂದ ಜಂಟಿ ಸರ್ವೆ ಮಾಡಲು ನಿರ್ಧರಿಸಲಾಗಿದ್ದು, ಈಗಾಗಲೇ ಸಾಕಷ್ಟು ಸರ್ವೆ ಕೂಡಾ ನಡೆದಿದೆ. ಸರಣಿ ಸಭೆಗಳನ್ನು ನಡೆಸಲು ಕಸರತ್ತು ನಡೆಸಲಾಗುತ್ತಿದೆ. ಇದರಲ್ಲಿರೈತರಿಗೆ ಹಾಗೂ ಸರಕಾರಕ್ಕೆ ಸೇರಿದ ಜಮೀನನ್ನು ಉಳಿಸಿಕೊಳ್ಳುವ ಪ್ರಯತ್ನಗಳು ನಡೆದಿವೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...