spot_img
spot_img

ತಿರುಪತಿಯಲ್ಲಿ ರಾಜಕೀಯ, ದ್ವೇಷದ ಭಾಷಣ ನಿಷೇಧ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ತಿರುಪತಿ (ಆಂಧ್ರಪ್ರದೇಶ): ತಿರುಮಲದಲ್ಲಿ ಟಿಟಿಡಿಯ ಹೊಸ ಆಡಳಿತ ಮಂಡಳಿ ರಚನೆಯಾದ ಬಳಿಕ ದೇವಾಲಯದ ಪವಿತ್ರತೆಗಾಗಿ ಹಲವಾರು ಬದಲಾವಣೆ ತಂದಿದ್ದು, ಈಗ ರಾಜಕೀಯ ನಾಯಕರಿಗೆ ಖಡಕ್​ ಸೂಚನೆಯೊಂದನ್ನು ನೀಡಿದೆ.
ತಿರುಮಲದಲ್ಲಿ ರಾಜಕೀಯ ಮತ್ತು ದ್ವೇಷದ ಭಾಷಣಗಳನ್ನು ಟಿಟಿಡಿ ನಿಷೇಧಿಸಿದ್ದು, ಪವಿತ್ರ ಸ್ಥಳದ ಪವಿತ್ರತೆ ಮತ್ತು ಆಧ್ಯಾತ್ಮಿಕ ವಾತಾವರಣವನ್ನು ಕಾಪಾಡಲು ಸೂಚಿಸಿದೆ. ಜತೆಗೆ ಸ್ಥಳೀಯರಿಗೆ ವಿಶೇಷ ದರ್ಶನದಲ್ಲಿ ಬದಲಾವಣೆಯನ್ನು ಘೋಷಿಸಿದೆ.
ತಿರುಮಲದಲ್ಲಿ ನಡೆದ ಇತ್ತೀಚಿನ ಘಟನೆಗಳ ಪರಿಣಾಮ ರಾಜಕೀಯ ಅಥವಾ ದ್ವೇಷದ ಭಾಷಣಗಳನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಟಿಟಿಡಿ ಮಂಡಳಿ ಹೇಳಿದೆ.
“ರಾಜಕೀಯದ ಕೆಲ ಮುಖಂಡರು ದರ್ಶನದ ನಂತರ ದೇವಸ್ಥಾನದ ಆವರಣದ ಬಳಿ ಮಾಧ್ಯಮಗಳ ಮುಂದೆ ರಾಜಕೀಯ ಹಾಗೂ ಉದ್ರೇಕಕಾರಿ ಹೇಳಿಕೆಗಳನ್ನು ನೀಡಿ ಆಧ್ಯಾತ್ಮಿಕ ಶಾಂತಿಗೆ ಭಂಗ ತರುತ್ತಿದ್ದಾರೆ. ಟಿಟಿಡಿ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಈ ನಿರ್ಧಾರವನ್ನು ಗೌರವಿಸುವಂತೆ ಒತ್ತಾಯಿಸಿದೆ. ಮತ್ತು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ಅಲ್ಲದೇ, ‘ತಿರುಮಲದ ದೈವಿಕ ಮತ್ತು ಪ್ರಶಾಂತ ಪರಿಸರ ಸಂರಕ್ಷಿಸುವ ತನ್ನ(ಟಿಟಿಡಿ) ಬದ್ಧತೆಯನ್ನು ಮಂಡಳಿಯು ಒತ್ತಿಹೇಳುತ್ತದೆ” ಎಂದು ಟಿಟಿಡಿ ಎಕ್ಸ್​ ಪೋಸ್ಟ್​ನಲ್ಲಿ ತಿಳಿಸಿದೆ.
ತಿರುಪತಿ ನಿವಾಸಿಗಳ ವಿಶೇಷ ದರ್ಶನ ಟೋಕನ್‌ಗಳಲ್ಲಿ ಬದಲಾವಣೆಯನ್ನು ಟಿಟಿಡಿ ಪ್ರಕಟಿಸಿದೆ. ತಿರುಪತಿ ನಗರ, ತಿರುಪತಿ ಗ್ರಾಮಾಂತರ, ರೇಣಿಗುಂಟಾ, ಚಂದ್ರಗಿರಿ ಮಂಡಲಗಳ ಸ್ಥಳೀಯರು ಹಾಗೂ ತಿರುಮಲದ ಸ್ಥಳೀಯರು ತಮ್ಮ ಮೂಲ ಆಧಾರ್ ಕಾರ್ಡ್ ತೋರಿಸಿ ಆಯಾ ಕೇಂದ್ರಗಳಲ್ಲಿ ಸ್ಥಾಪಿಸಲಾದ ಕೌಂಟರ್‌ಗಳಲ್ಲಿ ಈ ಟೋಕನ್‌ಗಳನ್ನು ಪಡೆಯಲು ಅನುಮತಿಸಲಾಗಿದೆ. ಟಿಟಿಡಿ ಕೈಗೊಂಡಿರುವ ನಿರ್ಧಾರದ ಭಾಗವಾಗಿ ಪ್ರತಿ ತಿಂಗಳ ಮೊದಲ ಮಂಗಳವಾರದಂದು ಸ್ಥಳೀಯರಿಗೆ ದರ್ಶನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಎಕ್ಸ್‌ನಲ್ಲಿ ಪ್ರತ್ಯೇಕ ಪೋಸ್ಟ್‌ನಲ್ಲಿ “ಹವಾಮಾನದ ಕಾರಣ, ಡಿಸೆಂಬರ್ 3 ರಂದು ಸ್ಥಳೀಯರ ಶ್ರೀವಾರಿ ದರ್ಶನಕ್ಕಾಗಿ ಟೋಕನ್‌ಗಳನ್ನು ಡಿಸೆಂಬರ್ 2 ರಂದು ಬೆಳಗ್ಗೆ 5 ಗಂಟೆಗೆ ಮಹತಿ ಆಡಿಟೋರಿಯಂ (ತಿರುಪತಿ) ಮತ್ತು ಸಮುದಾಯ ಭವನದಲ್ಲಿ (ತಿರುಮಲ) ನೀಡಲಾಗುವುದು ಎಂದು ಟಿಟಿಡಿ ತಿಳಿಸಿತ್ತು. ಈ ಮೊದಲು ಡಿಸೆಂಬರ್ 1 ರಂದು ಟೋಕನ್ ನೀಡಬೇಕಿತ್ತು.
ಕಳೆದ ತಿಂಗಳ ಕೊನೆಯಲ್ಲಿ ಹೊಸ ಆಡಳಿತ ಮಂಡಳಿ ರಚನೆಯಾದ ನಂತರ ಭಕ್ತರ ಅನುಕೂಲಕ್ಕಾಗಿ ಟಿಟಿಡಿ ತೆಗೆದುಕೊಂಡ ಹಲವಾರು ನಿರ್ಧಾರಗಳಲ್ಲಿ ಇವು ಸೇರಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

VIRAT KOHLI RANJI TROPHY:ವಿರಾಟ್ ಕೊಹ್ಲಿ ಔಟ್ ಮಾಡುವುದರ ಹಿಂದೆ ಬಸ್ ಚಾಲಕನ ಮಾಸ್ಟರ್ ಪ್ಲಾನ್.

New Delhi News: ಇದರೊಂದಿಗೆ ಕೇವಲ 6 ರನ್​ಗಳಿಗೆ ಪೆವಿಲಿಯನ್​ ಸೇರಿಕೊಂಡಿದ್ದರು. ಕೊಹ್ಲಿ ವಿಕೆಟ್​ ಪಡೆಯುತ್ತಿದ್ದಂತೆ ಹಿಮಾಂಶು ಸಾಂಗ್ವಾನ್​ ಕುರಿತು ಭಾರೀ ಚರ್ಚೆಯಾಗಿದ್ದವು. ವಿಶ್ವದ ಶ್ರೇಷ್ಠ...

IPL 2025 RCB CAPTAIN:RCB ಮುಂದಿನ ನಾಯಕ ಯಾರು ಗೊತ್ತಾ?

IPL 2025 RQB Captain News: ಮಾರ್ಚ್​,21 ರಿಂದ ಚುಟುಕು ಕ್ರಿಕೆಟ್​ ಹಬ್ಬ ಪ್ರಾರಂಭವಾಗಲಿದ್ದು ಎರಡು ತಿಂಗಳು ಕಾಲ ನಡೆಯಲಿದೆ.ಐಸಿಸಿ ಚಾಂಪಿಯನ್ಸ್​ ಟ್ರೋಫಿ ಮುಗಿದ ಬೆನ್ನಲ್ಲೆ...

MAHA KUMBH MELA TOUR PACKAGE : ಎಚ್ಚರ.. ಎಚ್ಚರ… ಮಹಾ ಕುಂಭಮೇಳದ ಪ್ರವಾಸದ ಪ್ಯಾಕೇಜ್ ಹೆಸರಿನಲ್ಲಿ ವಂಚನೆ

Bangalore News: MAHA KUMBH MELA TOUR PACKAGE ಯಾತ್ರಿಗಳ ಈ ಆಸೆಯನ್ನೇ ಬಂಡವಾಳ ಮಾಡಿಕೊಂಡಿರುವವರು ಇದೀಗ ವಂಚನೆಗೆ ಇಳಿದಿದ್ದಾರೆ. ಈ ಹಿನ್ನೆಲೆ ಪ್ರಯಾಗ್​ರಾಜ್​ ಪ್ರವಾಸಕ್ಕೆ...

BSNL RS 99 PLAN : ಕೇವಲ 99 ರೂ.ಗೆ ಅನ್ಲಿಮಿಟೆಡ್ ಕಾಲಿಂಗ್ ಪ್ಲಾನ್ ತಂದ ಬಿಎಸ್ಎನ್ಎಲ್!

BSNL 99 Plan: ಬಿಎಸ್​ಎನ್​ಎಲ್​ ತಮ್ಮ ಗ್ರಾಹಕರಿಗೆ ಶುಭ ಸುದ್ದಿ ನೀಡಿದೆ. ಈ ಆಫರ್​ ಎರಡು ಸಿಮ್‌ಗಳನ್ನು ಬಳಸುವ ಗ್ರಾಹಕರಿಗೆ ಉಪಯುಕ್ತ. ಭಾರತ್ ಸಂಚಾರ್ ನಿಗಮ್...