spot_img
spot_img

ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ : ವೀರಯ್ಯ ವಿರುದ್ಧ ವಿರುದ್ಧದ ಚಾರ್ಜ್​ಶೀಟ್ ತಡೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮ ಹಗರಣ ಪ್ರಕರಣದ ಎರಡನೇ ಆರೋಪಿಯಾಗಿರುವ ಮಾಜಿ ಎಂಎಲ್​ಸಿ ಡಿ.ಎಸ್.ವೀರಯ್ಯ ಅವರ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆರೋಪಪಟ್ಟಿಗೆ ಹೈಕೋರ್ಟ್ ತಡೆ ನೀಡಿದೆ.
ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮ ಹಗರಣ ಪ್ರಕರಣದ ಎರಡನೇ ಆರೋಪಿಯಾಗಿರುವ ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆರೋಪಪಟ್ಟಿಗೆ ಹೈಕೋರ್ಟ್ ಇಂದು ತಡೆ ನೀಡಿತು. ಈ ವಿಚಾರವಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ಆರೋಪಿ ಸೇರಿದಂತೆ ಸರ್ಕಾರಿ ಸೇವಕರು, ಮತ್ತಿತರರು ಇರುವುದರಿಂದ ಭ್ರಷ್ಟಾಚಾರ ಕಾಯಿದೆ ಸೆಕ್ಷನ್ 17ಎ ಅಡಿಯಲ್ಲಿ ತಿಳಿಸಿರುವಂತೆ ಅನುಮತಿಯಿಲ್ಲದೆ ತನಿಖೆ ನಡೆಸುವುದಕ್ಕೆ ಅವಕಾಶವಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಹಲವು ಪ್ರಕರಣಗಳಲ್ಲಿ ತಿಳಿಸಿದೆ. ಅಲ್ಲದೆ, ಪ್ರಕರಣದಲ್ಲಿ ಆರೋಪಿಗಳು ಅಪರಿಚಿತರಾಗಿದ್ದು, 9 ತಿಂಗಳುಗಳ ಕಾಲ ತನಿಖೆ ನಡೆಸಲಾಗಿದೆ. ಇದಾದ ನಂತರ ಅರ್ಜಿದಾರರ ತನಿಖೆ ನಡೆಸುವುದಕ್ಕೆ ಸೆಕ್ಷನ್ 17ಎ ಅಡಿಯಲ್ಲಿ ಮನವಿ ಮಾಡಲಾಗಿದೆ. ಆದ್ದರಿಂದ ಈ ಪ್ರಕ್ರಿಯೆಯಲ್ಲಿ ಅರ್ಜಿದಾರರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವುದಕ್ಕೆ ಸಾಧ್ಯವಿಲ್ಲ ಎಂಬುದಾಗಿ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.
ಅರ್ಜಿದಾರರ ವಾದವನ್ನು ಪರಿಗಣಿಸುವ ಅಗತ್ಯವಿದೆ. ಹೀಗಾಗಿ ಮುಂದಿನ ವಿಚಾರಣೆಯವರೆಗೂ ಅರ್ಜಿದಾರರ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯಲಿರುವ ಪ್ರಕ್ರಿಯೆಗೆ ತಡೆ ನೀಡಲಾಗುತ್ತಿದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿತು. ರಾಜ್ಯ ಸರ್ಕಾರ, ಸಿಐಡಿ ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿತು.
ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಎರಡನೇ ಆರೋಪಿಯಾಗಿದ್ದ ಅಧ್ಯಕ್ಷರು ತಮ್ಮ ಅಧಿಕಾರ ಬಳಸಿ ನಿಗಮದಲ್ಲಿನ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ಶಂಕರಪ್ಪ ವಿರುದ್ಧ ಆಸ್ತಿ ಅಕ್ರಮಗಳು ಮತ್ತು ಭ್ರಷ್ಟಾಚಾರ ಆರೋಪವಿದೆ. ಆದರೆ, ಅರ್ಜಿದಾರರ ವಿರುದ್ದ ಕೇವಲ ಐಪಿಸಿ ಕಾಯಿದೆಯ ಕೆಲ ಸೆಕ್ಷನ್‌ಗಳ ಅಡಿಯಲ್ಲಿ ಮಾತ್ರ ಆರೋಪವಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದರು.
ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ಕಾಯಿದೆ ಉಲ್ಲಂಘನೆ ಮಾಡಿ ಮತ್ತು ಯಾವುದೇ ಕಾಮಗಾರಿ ನಡೆಸದೇ ಬಿಲ್‌ಗಳನ್ನು ಮಂಜೂರು ಮಾಡಿ 47.50 ಕೋಟಿ ಹಗರಣ ನಡೆಸಿರುವ ಆರೋಪ ಕೇಳಿ ಬಂದಿತ್ತು. ಹಗರಣ ನಡೆದ ಸಂದರ್ಭದಲ್ಲಿ ನಿಗಮದ ಅಧ್ಯಕ್ಷರಾಗಿದ್ದ ವೀರಯ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಂಕರ್ ಅವರನ್ನು ಬಂಧಿಸಲಾಗಿತ್ತು.
ತನ್ನ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಕೋರಿ ವೀರಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...