spot_img
spot_img

ತೆರಿಗೆ ಪ್ರಗತಿ ಪರಿಶೀಲನಾ ಸಭೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಕರ್ನಾಟಕದಲ್ಲಿ ನವೆಂಬರ್‌ ಅಂತ್ಯದವರೆಗೆ 13,722 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಸದಸ್ಯರು ತಿಳಿಸಿದ್ದಾರೆ.

2024 ನವೆಂಬರ್‌ ಅಂತ್ಯದವರೆಗಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ 56,317 ಕೋಟಿ ರೂ. ಇದ್ದು ಇದುವರೆಗೆ 53,103 ಕೋಟಿ ರೂ. ತೆರಿಗೆ ಸಂಗ್ರಹ ಮಾಡಲಾಗಿದ್ದು, ಶೇ.94 ರಷ್ಟು ಸಾಧಿಸಲಾಗಿದೆ. 2024-25ರ ಹಣಕಾಸು ಸಾಲಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹ ಗುರಿ 84,475 ಕೋಟಿ ರೂ. ಇದೆ.

ಮಲೆನಾಡು ಮತ್ತು ಮೈಸೂರು ವಿಭಾಗದಲ್ಲಿ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಕಡಿಮೆಯಿದೆ. ಎಲ್ಲಾ ವಿಭಾಗಗಳು ಮುಂದಿನ ನಾಲ್ಕು ತಿಂಗಳಲ್ಲಿ ಗುರಿಯನ್ನು ಕಡ್ಡಾಯವಾಗಿ ಸಾಧಿಸಬೇಕಿದೆ. 2023-24ರ ಒಟ್ಟು ತೆರಿಗೆ ಸಂಗ್ರಹಣೆ 70,575 ಕೋಟಿ ರೂ. ಇತ್ತು. ವಿಜಿಲೆನ್ಸ್‌ ಹೆಚ್ಚಿಸಿ, ತೆರಿಗೆ ಸೋರಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಬೆಂಗಳೂರು ವಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ವಿಶೇಷ ಅಭಿಯಾನ ಕೈಗೊಂಡು ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿ ಶೇ.100ರಷ್ಟು ಬಜೆಟ್‌ ಗುರಿ ಸಾಧಿಸಬೇಕಿದೆ.

ಜಿಎಸ್‌ಟಿ ಸಂಗ್ರಹ ಹೆಚ್ಚಿಸಬೇಕು. ಲೆಕ್ಕಪರಿಶೋಧನೆ ಮತ್ತು ನ್ಯಾಯನಿರ್ಣಯದಿಂದ ಪ್ರಸ್ತುತ ಹಣಕಾಸು ಸಾಲಿನಲ್ಲಿ 4,671 ಕೋಟಿ ರೂ. ತೆರಿಗೆ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ 3,076.86 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ.

ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ಸ್ವೀಕರಿಸಿದ ಮನವಿಗಳನ್ನು ವಿಲೇವಾರಿ ಮಾಡಿ ತೆರಿಗೆ ಸಂಗ್ರಹ ಕೈಗೊಳ್ಳಬೇಕು. ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಶೇ.15ರ ಬೆಳವಣಿಗೆ ದರ ಸಾಧಿಸಿದೆ. ರಾಜ್ಯದಲ್ಲಿ ನವೆಂಬರ್‌ ಅಂತ್ಯದವರೆಗೆ 13,722 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.

2024-25ನೇ ಸಾಲಿನಲ್ಲಿ ರೂ. 38,525 ಕೋಟಿ ಅಬಕಾರಿ ರಾಜಸ್ವ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ 23,600 ಕೋಟಿ ರೂ. ಸಂಗ್ರಹಿಸಲಾಗಿದ್ದು, ಶೇ.61.26 ಗುರಿ ಸಾಧಿಸಲಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ 1432.23 ಕೋಟಿ ರೂ. ರಾಜಸ್ವ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು, ಶೇ.6.46 ಬೆಳವಣಿಗೆ ದರ ಸಾಧಿಸಲಾಗಿದೆ.

ರಾಜ್ಯದಲ್ಲಿ 2023-24ರಲ್ಲಿ 34,628 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹಿಸಲಾಗಿತ್ತು. ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್‌ ಸಿ ಹುದ್ದೆಗಳನ್ನು ತುಂಬಲು ಕ್ರಮ ವಹಿಸಲಾಗಿದೆ.

2024-25ನೇ ಸಾಲಿನಲ್ಲಿ 26 ಸಾವಿರ ಕೋಟಿ ರೂ. ಗುರಿ ನಿಗದಿಪಡಿಸಿದ್ದು, ನವೆಂಬರ್‌ ಕೊನೆಯವರೆಗೆ 15,160.97 ಕೋಟಿ ರೂ. ರಾಜಸ್ವ ಸಂಗ್ರಹಿಸಲಾಗಿದ್ದು, ಶೇ.58ರಷ್ಟು ಪ್ರಗತಿ ಸಾಧಿಸಲಾಗಿದೆ.

ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಬೇಕು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.21ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ.

ಕಾನೂನುಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.
ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.
ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು.
ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ.

ಈ ವರ್ಷದ ಒಟ್ಟು ರಾಜಸ್ವ ಗುರಿ ರೂ.9 ಸಾವಿರ ಕೋಟಿ ಇದ್ದು, ನವೆಂಬರ್‌ ಅಂತ್ಯದವರೆಗೆ ರೂ.4,862 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ ವಹಿಸಲಾಗಿದೆ. 2025-26ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ ಸಂಗ್ರಹಿಸಲು ಕ್ರಮ ವಹಿಸಿದ್ದು, ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಎಸ್.ಎಸ್.ಮಲ್ಲಿಕಾರ್ಜುನ್, ಆರ್.ಬಿ.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಆಯಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...