spot_img
spot_img

ನಗರದ ಎಲ್ಲ ಕೆರೆಗಳ ಒತ್ತುವರಿ ತೆರವು : ಹೈಕೋರ್ಟ್‌ಗೆ ಮಾಹಿತಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು : 183 ಕೆರೆಗಳ ಪೈಕಿ 122 ಕೆರೆಗಳು ಖಾಸಗಿಯವರಿಂದ ಒತ್ತುವರಿಯಾಗಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ವ್ಯಾಪ್ತಿಯಲ್ಲಿ ಸದ್ಯ ಜೀವಂತವಾಗಿ ಉಳಿದಿರುವ 183 ಕೆರೆಗಳ ಪೈಕಿ 122 ಕೆರೆಗಳು ಖಾಸಗಿಯವರಿಂದ ಒತ್ತುವರಿಯಾಗಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಹೇಳಿದೆ.

ಬೆಂಗಳೂರಿನ ಕೆರೆಗಳು ಮತ್ತು ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಿ ಅವುಗಳನ್ನು ರಕ್ಷಿಸಲು ಸರ್ಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಬೇಕೆಂದು 2014ರಲ್ಲಿ ಸಲ್ಲಿಕೆಯಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಖಾಸಗಿಯವರಿಂದ ಒತ್ತುವರಿಯಾಗಿರುವ 122 ಕೆರೆಗಳ ಪೈಕಿ 88 ಕೆರೆಗಳಲ್ಲಿ ಕಟ್ಟಡ, 44 ಕೆರೆಗಳು ಧಾರ್ಮಿಕ ಕಟ್ಟಡ, 58 ಕೆರೆಗಳಲ್ಲಿ ಖಾಲಿ ಜಾಗ, ರಸ್ತೆಗಾಗಿ 7 ಕೆರೆ, ಅಘೋಷಿತ ಸ್ಲಂಗಳಿಗಾಗಿ 9 ಕೆರೆಗಳ ಒತ್ತುವರಿಯಾಗಿದೆ. 183 ಕೆರೆಗಳ ಪೈಕಿ ಒತ್ತುವರಿಯಾಗಿರುವ 122 ಕೆರೆಗಳ ಸರ್ವೆ ನಡೆಸಿ ನಕಾಶೆಗಳನ್ನು ಕಂದಾಯ ಇಲಾಖೆಗೆ ನೀಡಲಾಗಿದೆ.

ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಈ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಇದು ಅಂದಾಜು ಲೆಕ್ಕಾಚಾರವಾಗಿದ್ದು, ಖಚಿತ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಂದಾಜಿನ ಪ್ರಕಾರ ಬಿಬಿಎಂಪಿಯಲ್ಲಿ ಸದ್ಯ 183 ಕೆರೆಗಳಿದ್ದು, ಅವುಗಳ ವಿಸ್ತೀರ್ಣ 5,094 ಎಕರೆ ಇದೆ. ಇದರಲ್ಲಿ ಖಾಸಗಿಯವರಿಂದ 122 ಕೆರೆಗಳಲ್ಲಿ ಒತ್ತುವರಿಯಾಗಿದ್ದು, ಅದರ ವಿಸ್ತೀರ್ಣ 235 ಎಕರೆ ಇದೆ. ಇದಲ್ಲದೆ ರಸ್ತೆ, ಸರ್ಕಾರಿ ಕಟ್ಟಡ, ಸ್ಮಶಾನ, ಧಾರ್ಮಿಕ ಸ್ಥಳಗಳು, ಸಾರ್ವಜನಿಕ ಕಟ್ಟಡಗಳು, ಅಘೋಷಿತ ಸ್ಲಂ, ರೈಲ್ವೆ ಹಳಿ ಇತ್ಯಾದಿ ರೂಪದಲ್ಲಿ ಕೆರೆಗಳ ಒತ್ತುವರಿಯಾಗಿದೆ ಎಂದರು.

ಅರ್ಜಿದಾರರ ಮನವಿಯಂತೆ ಕೆರೆಗಳ ಒತ್ತುವರಿಗೆ ಸಂಬಂಧಿಸಿದ ಸಮಗ್ರ ಮಾಹಿತಿಯ ಜೊತೆಗೆ ಒತ್ತುವರಿ ತೆರವಿಗೆ ಕೈಗೊಂಡ ಕ್ರಮಗಳನ್ನು ನ್ಯಾಯಾಲಯ ಮತ್ತು ಅರ್ಜಿದಾರರಿಗೆ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ಮುಂದೂಡಿತು.

ಒತ್ತುವರಿದಾರರಿಗೆ ನೋಟಿಸ್ ಕೊಟ್ಟು, ತೆರವು ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲಾ ಬಗೆಯ ಒತ್ತುವರಿಗಳನ್ನು ತೆರವುಗೊಳಿಸಲು ಸರ್ಕಾರ ಪ್ರಮಾಣಿಕ ಪ್ರಯತ್ನ ಮಾಡುತ್ತಿದೆ. ಇದಕ್ಕಾಗಿ ಕಾಲಾವಕಾಶಬೇಕು. ಆದರೆ, ಉಳಿದಿರುವ ಕೆರೆಗಳ ಸಂರಕ್ಷಣೆ ಮತ್ತು ನಿರ್ವಹಣೆಯೂ ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಖಾಸಗಿಯವರಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಕೆರೆಗಳ ಮಾಲಿಕತ್ವವನ್ನು ಖಾಸಗಿಯವರಿಗೆ ಬಿಟ್ಟುಕೊಡುವುದಿಲ್ಲ ಎಂದು ಭರವಸೆ ನೀಡಿದರು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

PM MODI SPEECH : SC, ST, OBC ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ಹೆಚ್ಚಳ

New Delhi News: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿಂದು ಪ್ರPM MODI SPEECH. ಸರ್ಕಾರದ ಸಾಧನೆಗಳ ಕುರಿತು ಸುದೀರ್ಘ ಭಾಷಣ ಮಾಡಿದ ಅವರು,...

PM MODI PRAYAGRAJ VISIT : ಕುಂಭಮೇಳದಲ್ಲಿ ಭಾಗಿಯಾಗಿ ಪವಿತ್ರ ಸ್ನಾನ ಮಾಡಲಿರುವ ಪ್ರಧಾನಿ

Prayagraj, Uttar Pradesh News: ಮಹಾಕುಂಭ ಮೇಳದಲ್ಲಿ ಭಾಗಿಯಾಲು PM MODI PRAYAGRAJ VISIT ನೀಡುತ್ತಿದ್ದಾರೆ. ಈ ವೇಳೆ ಅವರು ಭದ್ರತೆಯ ನಡುವೆ ಸಾಧು -...

ICC CHAMPIONS TROPHY 2025 : 1.8 ಲಕ್ಷ ರೂಪಾಯಿ ಬೆಲೆಯ ಟಿಕೆಟ್ಗಳೂ ಖಾಲಿ!

India vs Pakistan, ICC Champions Trophy-2025: 2023ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಉಭಯ ತಂಡಗಳು ಎದುರುಬದುರಾಗಿದ್ದವು. ಇದೀಗ 15 ತಿಂಗಳ ನಂತರ ಎರಡೂ...

IPL 2025 RCB CAPTAIN : RCB ಮುಂದಿನ ನಾಯಕ ಯಾರು ಗೊತ್ತಾ?

IPL 2025 RCB Captain: IPL 2025 RCB CAPTAIN ಇತ್ತೀಚೆಗೆ ಜೆಡ್ಡಾದಲ್ಲಿ 18ನೇ ಆವೃತ್ತಿ ಹಿನ್ನೆಲೆ ಆಟಗಾರರ ಮೆಗಾ ಹರಾಜು ನಡೆದಿತ್ತು. ಇದರಲ್ಲಿ ಎಲ್ಲಾ...