spot_img
spot_img

ಬೃಹತ್ ಹೋರಾಟ: ಒಮರ್ ಅಬ್ದುಲ್ಲಾ

spot_img
spot_img

Share post:

ಶ್ರೀನಗರ:ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸುಳಿವು ನೀಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಆಗಸ್ಟ್ 5, 2019 ರಂದು, ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿತು.
ಶ್ರೀನಗರದಲ್ಲಿ ನನ್ನೆ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನ ಮರುಸ್ಥಾಪಿಸಲು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಾಗಿದೆ ಎಂದರು.
ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಗಳಲ್ಲಿ ರಾಜ್ಯ ಸ್ಥಾನವನ್ನು ಮರುಸ್ಥಾಪಿಸುವ ಬಗ್ಗೆ ಪಿಎಂ ಮೋದಿ ಅವರು ಜಮ್ಮು-ಕಾಶ್ಮೀರ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು.
ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಗಳಲ್ಲಿ ರಾಜ್ಯ ಸ್ಥಾನವನ್ನು ಮರುಸ್ಥಾಪಿಸುವ ಬಗ್ಗೆ ಪಿಎಂ ಮೋದಿ ಅವರು ಜಮ್ಮು-ಕಾಶ್ಮೀರ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳೆರಡರಲ್ಲೂ ಜನರು ಯಾವುದೇ ಭಯವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯಸ್ಥಾನಮಾನ ಮರುಸ್ಥಾಪನೆ ಕುರಿತು ತಮಗೆ ನೀಡಿದ ಭರವಸೆಯನ್ನು ಈಡೇರುವ ಭರವಸೆಯಿಂದ ವಿಧಾನಸಭೆ ಚುನಾವಣೆಯನ್ನು ಜನರು ಯಶಸ್ವಿಗೊಳಿಸಿದ್ದಾರೆ ಎಂದರು.
ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು-ಕಾಶ್ಮೀರದಲ್ಲಿ ನಡೆದ ಮೊದಲ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದ ನ್ಯಾಷನಲ್ ಕಾನ್ಫರೆನ್ಸ್ ರಾಜ್ಯತ್ವವನ್ನು ಮರುಸ್ಥಾಪಿಸಲು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿತ್ತು.
ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಜಾರ್ಖಂಡ್ ಮತ್ತು ಮಹಾರಾಷ್ಟ್ರ ಚುನಾವಣೆ ಮುಗಿಸಿ ಈಗ ಸ್ವಲ್ಪ ವಿರಾಮವಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರೊಂದಿಗೆ ಮಾತನಾಡುತ್ತೇನೆ. ಇದರಿಂದ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ತರಲಾಗುವುದು ಎಂಬ ವಿಶ್ವಾಸ ನನಗಿದೆ ಎಂದರು.
ಒಮರ್‌ ಅಬ್ದುಲ್ಲಾ ಅವರಿಗೆ ನಿಕಟವಾಗಿರುವ ಹಿರಿಯ ಎನ್‌ಸಿ ನಾಯಕ ಮತ್ತು ಶಾಸಕ ತನ್ವಿರ್ ಸಾದಿಕ್, ರಾಜ್ಯ ಸ್ಥಾನಮಾನ ಮರುಸ್ಥಾಪನೆ ಕುರಿತು ಮೋದಿ, ಶಾ ಮತ್ತು ಇತರ ಕೇಂದ್ರ ಸಚಿವರೊಂದಿಗೆ ಸಿಎಂ ನಡೆಸಿದ ಮಾತುಕತೆ ಸಕಾರಾತ್ಮಕವಾಗಿದೆ ಎಂದಿದ್ದಾರೆ.
ಅಕ್ಟೋಬರ್ 19 ರಂದು ಒಮರ್ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯು ರಾಜ್ಯತ್ವವನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿತು. ರಾಜ್ಯತ್ವದ ಮರುಸ್ಥಾಪನೆ ಪ್ರಕ್ರಿಯೆ ಪ್ರಾರಂಭವಾಗಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ನಿರ್ಣಯವನ್ನು ಅಂಗೀಕರಿಸಿದ ನಂತರ, ಒಮರ್ ಅವರು ಪ್ರಧಾನಿ ಮೋದಿ, ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಕೇಂದ್ರ ಸಚಿವರನ್ನು ಭೇಟಿಯಾಗಿ ನಿರ್ಣಯದ ಪ್ರತಿಗಳನ್ನು ಅವರಿಗೆ ನೀಡಿದರು.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...