spot_img
spot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಬ್ರಹ್ಮ ರಥಾರೋಹಣ : ಚಂಪಾ ಷಷ್ಠಿ ಮಹೋತ್ಸವ

spot_img
spot_img

Share post:

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ಸಂಪನ್ನಗೊಂಡಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾಗಿ ಮಹಾರಥೋತ್ಸವ ಜರುಗಿದೆ.

ಮುಂಜಾನೆ 6:57ರ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾಗಿ, ಮಹಾರಥೋತ್ಸವ ಜರುಗಿತು. ಅಲ್ಲದೆ ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾಗಿ ಚಿಕ್ಕ ರಥೋತ್ಸವವೂ ಜರುಗಿತು.

ಮೊದಲು ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಈ ಉತ್ಸವವು ರಾಜ್ಯದಲ್ಲೇ ಅತೀದೊಡ್ಡ ಉತ್ಸವವಾಗಿಯೂ ಪ್ರಖ್ಯಾತಿ ಪಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಲ್ಲಿನ ಮಲೆಕುಡಿಯ ಆದಿವಾಸಿ ಜನಾಂಗದವರು ಚಂಪಾಷಷ್ಠಿ ವೇಳೆಯಲ್ಲಿ ವಿಶಿಷ್ಟವಾಗಿ ಬೆತ್ತದಿಂದ ಬ್ರಹ್ಮರಥವನ್ನು ನಿರ್ಮಿಸುವುದು ಪಾರಂಪರಿಕ ವಿಶೇಷತೆಯಾಗಿ ಇಂದಿಗೂ ಉಳಿದಿದೆ.

ಬೃಹತ್ ಬ್ರಹ್ಮರಥವನ್ನು ಪ್ರತ್ಯೇಕವಾಗಿ ಹಗ್ಗಗಳ ಬಳಕೆ ಇಲ್ಲದೆ ಬರೀ ಬಿದಿರು ಮತ್ತು ಬೆತ್ತದಿಂದ ಕೌಶಲ್ಯಕರವಾಗಿ ನಿರ್ಮಿಸುವುದು ಇದರ ವಿಶಿಷ್ಟತೆ. ಶ್ರೀ ದೇವರ ಬ್ರಹ್ಮ ರಥೋತ್ಸವವೇ ಕುಕ್ಕೆ ಸುಬ್ರಹ್ಮಣ್ಯ ಜಾತ್ರೆಯ ಆಕರ್ಷಣೆ.
ಮಾರ್ಗಶಿರ ಮಾಸದಲ್ಲಿ ಬರುವ ಷಷ್ಠಿಯೇ ಸುಬ್ರಹ್ಮಣ್ಯ ಷಷ್ಠಿ. ಶಿವ ಹಾಗೂ ಪಾರ್ವತಿಯರ ಮಗನಾದ ಕಾರ್ತಿಕೇಯ (ಸುಬ್ರಹ್ಮಣ್ಯ) ಕುಮಾರಧಾರ ನದಿ ತಟದಲ್ಲಿ ನೆಲೆಯಾದ ಸ್ಥಳವೇ ಕುಕ್ಕೆ ಸುಬ್ರಹ್ಮಣ್ಯ. ವರ್ಷಂ ಪ್ರತಿ ನಡೆಯುವ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿಯ ಹಿಂದೆಯೂ ಒಂದು ಪೌರಾಣಿಕ ಹಿನ್ನೆಲೆ ಇದೆ.

ಸ್ಕಂದ ಷಷ್ಠಿ ನಂತರ ಬರುವ ಆಚರಣೆಯೇ ಸುಬ್ರಹ್ಮಣ್ಯ ಷಷ್ಠಿ. ಮಾರ್ಗಶಿರ ಮಾಸದಲ್ಲಿ ಬರುವ ಈ ಷಷ್ಠಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಎಂದೂ ಪ್ರಸಿದ್ಧಿಯನ್ನು ಪಡೆದಿದೆ.

ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಹಾರಥೋತ್ಸವ ಸಂದರ್ಭವನ್ನು ಕಣ್ತುಂಬಿಕೊಂಡು, ಶ್ರೀ ದೇವರಿಗೆ ಜಯಘೋಷ ಹಾಕಿದರು.

ಈ ಸಮಯದಲ್ಲಿ ದೇಗುಲದ ಆನೆ ಯಶಸ್ವಿನಿ, ಚೆಂಡೆ ವಾದ್ಯ ನಿನಾದಗಳು, ಬಣ್ಣಬಣ್ಣದ ಬಟ್ಟೆಯ ನಿಶಾನಿಗಳು, ಮಕರತೋರಣಗಳು, ಹೂವಿನ ಅಲಂಕಾರಗಳು, ಸತ್ತಿಗೆ, ಓಲರಿಕೊಡೆಗಳು, ಬೆಳ್ಳಿಯ ಪಂಚ ದೀವಟಿಕೆಗಳು, ದೀಪಗಳು ದೇವರ ಉತ್ಸವಕ್ಕೆ ವಿಶೇಷವಾದ ಮೆರುಗುಗನ್ನು ನೀಡುತ್ತದೆ. ದ್ವಾದಶಿಯಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ಜಾತ್ರೆ ಕೊನೆಗೊಳ್ಳುತ್ತದೆ.

ಶುಕ್ಲಪಕ್ಷದ ಆರನೇ ದಿನ ಆಚರಿಸಲ್ಪಡುವ ಷಷ್ಠಿ ಹಿಂದೂ ಸಂಪ್ರದಾಯ ಪ್ರಕಾರ ಪ್ರಮುಖವಾದ ಹಬ್ಬ. ಕುಕ್ಕೆಯಲ್ಲಿ ವಿಶೇಷವಾಗಿ ಜಾತ್ರಾ ವೈಭವಕ್ಕೆ ಹಲವು ರಥಗಳೇ ಪ್ರಮುಖ. ಜಾತ್ರಾ ದಿನಗಳಲ್ಲಿ ದಿನವೊಂದಕ್ಕೆ ವಿವಿಧ ರಥಗಳ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವರು ಭಕ್ತರಿಗೆ ದರ್ಶನ ನೀಡುತ್ತಾರೆ. ವರ್ಷದಲ್ಲಿ ಒಂದು ಬಾರಿ ಮಾತ್ರ ಎಳೆಯುವ ಪವಿತ್ರ ಬ್ರಹ್ಮರಥ, ಪಂಚಮಿ ರಥ, ಐದು ಕಲಶವನ್ನೊಳಗೊಂಡ ಚಂದ್ರಮಂಡಲ, ಹೂವಿನ ತೇರು ಮತ್ತು ಒಳಾಂಗಣದ ಬಂಡಿರಥಗಳು ಕ್ಷೇತ್ರದ ಜಾತ್ರೋತ್ಸವಕ್ಕೆ ಮೆರುಗು ನೀಡುತ್ತವೆ.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...