spot_img
spot_img

ಭಾರತ ನಿರ್ಮಾಣಕ್ಕೆ ವಿವೇಕ ನೀಡುವ ಶಿಕ್ಷಣ ಒದಗಿಸಿ: ಮೋಹನ್ ಭಾಗವತ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬಂಟ್ವಾಳ (ದ.ಕ): ಕಲ್ಲಡ್ಕದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ವೀಕ್ಷಿಸಿದ ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್, ವಸುದೈವ ಕುಟುಂಬಕಂ ಎಂಬ ಭಾವನೆಯಿಂದ ಜೀವಿಸಲು ವಿವೇಕ ನೀಡುವ ಶಿಕ್ಷಣ ಬೇಕು ಎಂದು ಹೇಳಿದರು.
ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ವಿವೇಕವನ್ನು ನೀಡುವ ಶಿಕ್ಷಣ ಒದಗಿಸಬೇಕು, ಇದರಿಂದ ವಸುದೈವ ಕುಟುಂಬಕಂ ಎಂಬ ಭಾವನೆಯಿಂದ ಜೀವಿಸಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಹೇಳಿದರು.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಸಂಜೆ ಹೊನಲು ಬೆಳಕಿನ ಕ್ರೀಡೋತ್ಸವ ಉದ್ಘಾಟಿಸಿ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಬಳಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಇಂಥ ಸುಂದರ, ವಿಭಿನ್ನ ಪ್ರಕಾರದ ಕಾರ್ಯಕ್ರಮಕ್ಕೆ ಎಲ್ಲರ ಕೊಡುಗೆ ಇದೆ. ಇದಕ್ಕೆ ಎಲ್ಲರೂ ಅಭಿನಂದನಾರ್ಹರು. ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ಪಂಚಕೋಶದ ಆಧಾರದಲ್ಲಿ ಇದನ್ನು ರೂಪಿಸಲಾಗಿದೆ. ಆದರೆ, ಕಲ್ಲಡ್ಕದಲ್ಲಿ ಇದು ಹಲವು ವರ್ಷಗಳಿಂದ ನಡೆಯುತ್ತಿದೆ ಎಂದು ಶ್ಲಾಘಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸಹಕಾರ್ಯವಾಹ ಮುಕುಂದ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಉಮಾನಾಥ ಕೋಟ್ಯಾನ್, ಹರೀಶ ಪೂಂಜ, ಭಾಗೀರಥಿ ಮುರುಳ್ಯ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ ಗಂಟಿಹೊಳಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದ್ಯಮಿಗಳಾದ ಅಜಿತ್ ಕುಮಾರ್ ಎಸ್ ಜೈನ್, ಡಾ.ಕೃಷ್ಣಪ್ರಸಾದ್ ಕೂಡ್ಲು, ಹರಿಶ್ಚಂದ್ರ ಸನಿಲ್ ಡಾ.ವಿ.ಎಸ್.ವಿ.ಪ್ರಸಾದ್, ಪ್ರಕಾಶ್ ಶೆಟ್ಟಿ ಬಂಜಾರ, ಡಾ.ಸೂರಜ್ ಗೋಪಾಲ್ ಎರ್ಮಾಳ್, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಸ್ವಾಗತಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಮೂಹ ಪ್ರದರ್ಶನದಲ್ಲಿ ಆರೆಸ್ಸೆಸ್ 100 ಎಂಬ ರಚನೆ ಮಾಡಿದರು. ಅಯೋಧ್ಯೆ ಶ್ರೀರಾಮಜನ್ಮಸ್ಥಾನದಲ್ಲಿ ಬಾಲರಾಮ ಸ್ಥಾಪನೆಯ ಮರುದೃಶ್ಯಾವಳಿಯನ್ನು ಮಾಡಲಾಯಿತು.
ಶಿಕ್ಷಣ ಕೇವಲ ಹೊಟ್ಟೆಪಾಡಿಗೆ ಮಾಡುವುದಲ್ಲ. ಇಲ್ಲಿ ಸರ್ವಾಂಗೀಣ ವಿಕಾಸವೂ ಆಗಬೇಕು ಎಂದು ಸಲಹೆ ನೀಡಿದ ಭಾಗವತ್, ಮನುಷ್ಯ ತನ್ನ ಕಾಲ ಮೇಲೆ ನಿಂತುಕೊಳ್ಳುವಂತಾಗುವ ವ್ಯಾವಹಾರಿಕ ಜ್ಞಾನ ಶಿಕ್ಷಣದಲ್ಲಿ ಅಡಕವಾಗಿರಬೇಕು. ಶಿಕ್ಷಣ ಪಡೆದವನಿಗೆ ವಿವೇಕವೂ ಇರಬೇಕು ಎಂದರು.
ವಿದ್ಯೆಯನ್ನು ಸರಿಯಾಗಿ ಬಳಸುವ ವಿವೇಕವನ್ನು ಶಿಕ್ಷಣ ನೀಡಬೇಕು. ಸೃಷ್ಟಿಯಲ್ಲಿರುವ ಎಲ್ಲರನ್ನು ಸ್ನೇಹದಿಂದ ನೋಡುವ ದೃಷ್ಟಿಕೋನ ಬೇಕು. ಯಾರು ನಮಗೆ ತೊಂದರೆ ನೀಡುತ್ತಾರೆ ಅವರನ್ನು ಎದುರಿಸುವಂಥ ಶಿಕ್ಷಣ ಬೇಕು. ಬಲವನ್ನು ದುರ್ಬಲರ ರಕ್ಷಣೆಗೆ ಬಳಸಿ. ಹಣದ ಉಪಯೋಗ ದಾನಕ್ಕೆ ಬಳಸಿ ಎಂದು ಸಲಹೆ ನೀಡಿದರು.
ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ವೇಷಧಾರಿಗಳು ಪ್ರತಿಷ್ಠಾ ಕಾರ್ಯ ನೆರವೇರಿಸುವ ಹಾಗೂ ಶ್ರೀರಾಮನ ಪೂಜೆ ಮಾಡುವ ದೃಶ್ಯ ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶ್ರೀರಾಮ ಭಜನೆ ಮಾಡಿ ಗಮನ ಸೆಳೆದರು. ಇಸ್ರೋದಿಂದ ಉಡಾವಣೆಗೊಂಡ ರಾಕೆಟ್ ಪ್ರತಿಕೃತಿಯೊಂದಿಗೆ ಚಂದ್ರಯಾನದ ಪ್ರಾತ್ಯಕ್ಷಿಕೆ, ಬೆಂಕಿಯ ಗೋಲದಲ್ಲಿ ಹಾರುವುದು ಗಮನ ಸೆಳೆಯಿತು.
ಹಿರಿಯ ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ರಾಷ್ಟ್ರನಿರ್ಮಾಣದ ಕಲ್ಪನೆ ಹಾಗೂ ರಾಷ್ಟ್ರೀಯತೆಯನ್ನು ಮೈಗೂಡಿಸುವಂತೆ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಬೋಧನೆ ಮೂಲಕ ಸಶಕ್ತ ಭಾರತ ನಿರ್ಮಾಣಕ್ಕೆ ಯುವಪೀಳಿಗೆಯನ್ನು ತಯಾರು ಮಾಡುತ್ತಿರುವುದಾಗಿ ಹೇಳಿದರು.
ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪದವಿಕಾಲೇಜು, ಸೆಕೆಂಡರಿ ಸ್ಕೂಲ್, ಪದವಿಪೂರ್ವ ಕಾಲೇಜು, ಹೈಸ್ಕೂಲು ಹಾಗೂ ಪ್ರಾಥಮಿಕ ಶಾಲೆ ಹಾಗೂ ಶಿಶುಮಂದಿರಕ್ಕೆ ಸೇರಿದ 3338 ವಿದ್ಯಾರ್ಥಿಗಳು ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಭಾಗಿಯಾಗಿ ನಾನಾ ರೀತಿಯ ಪ್ರದರ್ಶನಗಳನ್ನು ಈ ಸಂದರ್ಭ ನೀಡಿದರು. ಇವರಲ್ಲಿ 20 ಮಂದಿ ವಿಶೇಷಚೇತನ ಮಕ್ಕಳೂ ಭಾಗವಹಿಸಿದ್ದು, ಇವುಗಳನ್ನು ವೀಕ್ಷಿಸಿದ ಡಾ. ಮೋಹನ್ ಭಾಗವತ್, ಮಕ್ಕಳ ಕ್ರೀಡಾಸ್ಫೂರ್ತಿಯನ್ನು ಶ್ಲಾಘಿಸಿದರು.
ಶಿಶುನೃತ್ಯ, ಸಂಚಲನ, ಘೋಷ್ ಪ್ರದರ್ಶನ, ಜಡೆಕೋಲಾಟ, ನಿಯುದ್ಧ, ದೀಪಾರತಿ, ಯೋಗಾಸನ, ಹಾಡಿನಲ್ಲಿ ಚಿತ್ತಾರ, ನೃತ್ಯಭಜನೆ, ಮಲ್ಲಕಂಭ, ತಿರುಗುವ ಮಲ್ಲಕಂಭ, ಕೇರಳ ಶೈಲಿ ವಾದ್ಯನಾದನ, ನೃತ್ಯವೈವಿಧ್ಯ, ಚಕ್ರ ಸಮತೋಲನ, ಕಾಲ್ಚಕ್ರ, ಕೂಪಿಕಾ ಸಮತೋಲನ ಸಹಿತ ಸುಮಾರು 18 ಪ್ರದರ್ಶನಗಳನ್ನು ಸುಮಾರು 3338 ವಿದ್ಯಾರ್ಥಿಗಳು ಗಣ್ಯರ ಸಮ್ಮುಖದಲ್ಲಿ ಪ್ರದರ್ಶಿಸಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...