spot_img
spot_img

ಅರಣ್ಯ ಭೂಮಿ ವಶಕ್ಕೆ ದೀರ್ಘಾವಧಿ ಗುತ್ತಿಗೆ ಬಾಕಿ: ಸಚಿವ ಈಶ್ವರ್ ಖಂಡ್ರೆ

spot_img
spot_img

Share post:

ಬೆಂಗಳೂರು: ಅರಣ್ಯ ಭೂಮಿ ರಕ್ಷಣೆಗೆ ಹಲವು ಹಾಗೂ ಕಠಿಣ ಕಾನೂನುಗಳಿದ್ದರೂ ಅತಿಕ್ರಮಣ ಹಾಗೂ ದೀರ್ಘಾವಧಿ ಗುತ್ತಿಗೆ ಬಾಕಿ ಇರುವ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ.
ದೀರ್ಘಾವಧಿ ಗುತ್ತಿಗೆ ಅವಧಿಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಗುತ್ತಿಗೆ ಪಾವತಿಸದ ಕಂಪನಿಗಳು ಮತ್ತು ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ ಈಶ್ವರ್ ಬಿ ಖಂಡ್ರೆ ಅವರು ಶನಿವಾರ ಹೇಳಿದರು.
ನಾವು ಭೂಮಿಯ ಸ್ವರೂಪವನ್ನು ಬದಲಾಯಿಸಲಾಗುವುದಿಲ್ಲ. ಗುತ್ತಿಗೆ ಅವಧಿಯಲ್ಲಿ ಭೂ ಬಳಕೆಯನ್ನು ಬದಲಾಯಿಸಬಾರದು ಎಂಬುದು ಎಲ್ಲಾ ಗುತ್ತಿಗೆ ಒಪ್ಪಂದಗಳಲ್ಲಿನ ಇರುವ ಪ್ರಮುಖ ಷರತ್ತಾಗಿದೆ. ಅರಣ್ಯಾಧಿಕಾರಿಗಳು ಅರಣ್ಯ ಹೊದಿಕೆ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದ್ದು, ಅರಣ್ಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೆ, ಅರಣ್ಯ ಹೊದಿಕೆ ಹೆಚ್ಚಳಕ್ಕೆ ಇಚ್ಛಾಶಕ್ತಿಯನ್ನೂ ಪ್ರದರ್ಶಿಸಬೇಕು. ಹಾಗಾದರೆ ಮಾತ್ರ ಕೆಲವೇ ವರ್ಷದಲ್ಲಿ ರಾಜ್ಯದ ಅರಣ್ಯ ಹೊದಿಕೆ ಶೇ.33ರಷ್ಟು ಹೆಚ್ಚಳವಾಗಲಿದೆ. ಸರ್ಕಾರ ಗುತ್ತಿಗೆ ಪಡೆದಿರುವ ಹಾಗೂ ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ವಶಪಡಿಸಿಕೊಳ್ಳಲು ಶ್ರಮಿಸುತ್ತಿದ್ದು, ಹೊಸದಾಗಿ ಒಂದು ಇಂಚು ಭೂಮಿಯನ್ನೂ ಅತಿಕ್ರಮಿಸಲು ಬಿಡುವುದಿಲ್ಲ ಎಂದು ತಿಳಿಸಿದರು.
ನಗರದಲ್ಲಿ ನಡೆದ ‘ಮೈಫಾರೆಸ್ಟ್’ 60ನೇ ವರ್ಷದ ಸಂಭ್ರಮಾಚರಣೆ ಹಾಗೂ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಅರಣ್ಯ ಭೂಮಿ ರಕ್ಷಣೆಗೆ ಹಲವು ಹಾಗೂ ಕಠಿಣ ಕಾನೂನುಗಳಿದ್ದರೂ ಅತಿಕ್ರಮಣ ಹಾಗೂ ದೀರ್ಘಾವಧಿ ಗುತ್ತಿಗೆ ಬಾಕಿ ಇರುವ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ ಎಂದು ಹೇಳಿದರು.
ಬಳಿಕ ಮಾತನಾಡಿದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು., ಸುಮಾರು 7,000 ಎಕರೆ ಅರಣ್ಯ ಭೂಮಿಯನ್ನು ಗುತ್ತಿಗೆಗೆ ನೀಡಲಾಗಿದ್ದು, ಸರ್ಕಾರಕ್ಕೆ 2000 ಕೋಟಿ ರೂ. ಹಣ ಬರಬೇಕಿದೆ. ಕಾಫಿ ಮತ್ತು ರಬ್ಬರ್ ತೋಟಗಳಿಗೆ ಕೊಡಗು ಮತ್ತು ಬಿಆರ್‌ಟಿ ಅರಣ್ಯ ವಿಭಾಗಗಳಲ್ಲಿ ದೊಡ್ಡ ಮಟ್ಟದ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಭೂಮಿಯನ್ನು ಗುತ್ತಿಗೆ ಪಡೆದಿದ್ದವರು, ಇದೀಗ ಭೂಮಿಯ ಮಾಲೀಕರೆಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಕೆಲವರು ಗುತ್ತಿಗೆ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿದ್ದು, ಮರ ಮತ್ತು ಕಾಫಿ ತೋಟಗಳಲ್ಲಿ ರೆಸಾರ್ಟ್‌ಗಳು ಮತ್ತು ಹೋಂ ಸ್ಟೇಗಳನ್ನು ನಿರ್ಮಾಣ ಮಾಡಿದ್ದಾರೆ. ಗುತ್ತಿಗೆ ಪಡೆದ ಭೂಮಿಯನ್ನು ಇತರರಿಗೆ ಮಾರಿದ್ದಾರೆ. ಆರ್ಥಿಕ ನಷ್ಟವನ್ನು ಉಲ್ಲೇಖಿಸಿ ಭೂಮಿಯನ್ನು ಇತರರಿಗೆ ಗುತ್ತಿಗೆ ನೀಡಿದ್ದಾರೆಂದು ತಿಳಿಸಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...