spot_img
spot_img

ಆರೋಗ್ಯ ಇಲಾಖೆ ಮಾಫಿಯಾ ಅಲ್ಲ : ದಿನೇಶ್ ಗುಂಡೂರಾವ್ ತಿರುಗೇಟು

spot_img
spot_img

Share post:

ಬೆಳಗಾವಿ: ಆರೋಗ್ಯ ಸಚಿವ ದಿನೇಶ್​​​ ಗುಂಡೂರಾವ್​​, ನಮ್ಮ ಸರ್ಕಾರ ಯಾವುದೇ ಮಾಫಿಯಾದಲ್ಲಿ ಸಿಲುಕಿಕೊಂಡಿಲ್ಲ. ಕೋವಿಡ್ ಹಗರಣದ ಕುರಿತು ಮೊದಲು ಉತ್ತರ ನೀಡಲಿ ಎಂದು ಬಿಜೆಪಿಗೆ ಟಾಂಗ್​ ನೀಡಿದ್ದಾರೆ.
ಅವರು ಬೆಳಗಾವಿ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತ, “ರಾಜ್ಯದಲ್ಲಿ ಬಾಣಂತಿಯರ ಮರಣಗಳಾಗುತ್ತವೆ. ಅವು ವೈದ್ಯಕೀಯ ಕಾರಣದಿಂದ ಅಂತ ಹೇಳಲು ಆಗುವುದಿಲ್ಲ. ವಿರೋಧ ಪಕ್ಷಗಳು ನಿಜವಾದ ಲೋಪದೋಷಗಳ ಬಗ್ಗೆ ಮಾತನಾಡಲಿ. ದೇಶದ ಆರೋಗ್ಯ ಸೇವೆಗಳಲ್ಲಿ ಕರ್ನಾಟಕ ಉತ್ತಮ ಸ್ಥಾನದಲ್ಲಿದೆ. ಬಾಣಂತಿಯರ ಮರಣ ವೈದ್ಯಕೀಯ ಕಾರಣಗಳಿಂದ ಆಗಿರಬಹುದು. ನಮ್ಮ ಸರ್ಕಾರ ಯಾವುದೇ ಮಾಫಿಯಾದಲ್ಲಿ ಸಿಲುಕಿಕೊಂಡಿಲ್ಲ. ಕೋವಿಡ್ ಹಗರಣದ ಕುರಿತು ಮೊದಲು ಉತ್ತರ ನೀಡಲಿ” ಎಂದರು.
“ಬೆಳಗಾವಿಯಲ್ಲಿ ಇವತ್ತಿನಿಂದ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಆರೋಗ್ಯ ಇಲಾಖೆಯ ಕುರಿತು ಗಂಭೀರ ಚರ್ಚೆ ನಡೆಯಲಿ. ಅದಕ್ಕೆ ಉತ್ತರ ನೀಡಲು ನಾವು ಸಿದ್ಧರಿದ್ದೇವೆ. ನಡೆದ ಘಟನೆಗಳ ಕುರಿತು ಸತ್ಯಾಂಶ ಸಹಿತ ಮಾತನಾಡಲಿ” ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಬಿಜೆಪಿ ನಾಯಕರಿಗೆ ಸವಾಲು ಎಸೆದರು.
“ಗರ್ಭಿಣಿಯರು ಬಳ್ಳಾರಿ ಆಸ್ಪತ್ರೆಗೆ ಮತ್ತೆ ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲೂ ವೈದ್ಯರ ಕೊರತೆಯಿದೆ. ನಾವು ವೈದ್ಯಕೀಯ ನೇಮಕಾತಿಯಲ್ಲಿ ಯಾವುದೇ ರಾಜಕೀಯಕ್ಕೆ ಆಸ್ಪದ ನೀಡದೆ ಪಾರದರ್ಶಕತೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ವೈದ್ಯಕೀಯ ಸಿಬ್ಬಂದಿಗಳು, ಸ್ಟಾಫ್​​ ನರ್ಸ್​ಗಳ ನೇಮಕಾತಿ ಪ್ರಕ್ರಿಯೆಗೆ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದರು.
“ಬಿಜೆಪಿಯವರು ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಿದರೆ ನಾವು ಸ್ವಾಗತ ಮಾಡುತ್ತೇವೆ. ವಿಪಕ್ಷಗಳು ಸರ್ಕಾರದ ವೈಫಲ್ಯಗಳ ಬದಲು ಜನರ ಸಮಸ್ಯೆ, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ಅವರು ಜನರ ಭಾವನೆಗಳನ್ನು ಕೆರಳಿಸುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡಬಾರದು ಎಂದು ವಿರೋಧ ಪಕ್ಷಗಳ ನಾಯಕರು ಅರಿತುಕೊಳ್ಳಬೇಕು” ಎಂದರು.
“ಉತ್ತರ ಕರ್ನಾಟಕ ಸಮಸ್ಯೆ ಜೊತೆಗೆ ರಾಜ್ಯದ ಸಮಸ್ಯೆ ಬಗ್ಗೆ ಪ್ರತಿಪಕ್ಷ ನಾಯಕರು ಗಮನ ಸೆಳೆಯಬೇಕು. ನಾವು ಮೊದಲಿನಿಂದಲೂ ಚಿಂತನೆ ನಡೆಸಿ ಹಾಸನದಲ್ಲಿ ಸಮಾವೇಶ ಮಾಡಿದ್ದೇವೆ. ವಿರೋಧಪಕ್ಷಗಳು ಜನರ ಸಮಸ್ಯೆಗಳನ್ನು ಬಗೆಹರಿಸಲು ಆಸಕ್ತಿ ತೋರಿಸಬೇಕು. ನಮ್ಮಲ್ಲಿ ಆಂತರಿಕ ಕಲಹ ಸೃಷ್ಟಿಸುವ ಬದಲು ಬಿಜೆಪಿಯವರು ಅವರವರೇ ಕತ್ತಿ ಹಿಡಿದು ಹೊಡೆದಾಡಿಕೊಳ್ಳುತ್ತಾರೆ ನೋಡಿ” ಎಂದು ಸಹಕಾರ ಸಚಿವ ಕೆ. ಎನ್​. ರಾಜಣ್ಣ. ಅವರು ಬಿಜೆಪಿ ನಾಯಕರ ಕಾಲು ಎಳೆದಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...