spot_img
spot_img

ಸಿಎಂ ಸಿದ್ದರಾಮಯ್ಯ ಕೂಡಲೇ ಕ್ಷಮೆಯಾಚಿಸಬೇಕು: ಬಸವಜಯ ಮೃತ್ಯುಂಜಯ ಸ್ವಾಮೀಜಿ

spot_img
spot_img

Share post:

ಬೆಳಗಾವಿ: ಗುರುವಾರ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳು, ತಾಲೂಕುಗಳಲ್ಲಿ ಮತ್ತು ಹಿರೇಬಾಗೇವಾಡಿ ಹಾಗೂ ಹತ್ತರಗಿ ಟೋಲ್ ನಾಕಾಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

“ಹಿಂದಿನ ಯಾವೊಬ್ಬ ಮುಖ್ಯಮಂತ್ರಿಯೂ ಈ ರೀತಿ ಮಾಡಿರಲಿಲ್ಲ. ಸಿದ್ದರಾಮಯ್ಯ ಬಗ್ಗೆ ಬಹಳಷ್ಟು ಅಭಿಮಾನವಿತ್ತು. ಲಿಂಗಾಯತರ ಮೇಲೆ ಹಲ್ಲೆ ಮಾಡಿದ ಅಪಖ್ಯಾತಿಗೆ ಈ ಸರ್ಕಾರ ಗುರಿಯಾಗಿದೆ‌. ಕೂಡಲೇ ಮುಖ್ಯಮಂತ್ರಿಗಳು ಕ್ಷಮೆ ‌ಕೇಳಬೇಕು” ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.

“ರ್‍ಯಾಲಿಗೆ ಬರುವ ಟ್ರ್ಯಾಕ್ಟರ್​ಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದರು. ಆ ಬಳಿಕ ಕೊಂಡಸಕೊಪ್ಪ ಬಳಿ ಸಮಾವೇಶ ಮಾಡಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು ನಿರ್ಧರಿಸಿದೆವು. ಆಗ ಸರ್ಕಾರದ ಪರವಾಗಿ ಆಗಮಿಸಿದ ಸಚಿವರಾದ ಹೆಚ್.ಸಿ.ಮಹಾದೇವಪ್ಪ, ಡಾ.ಎಂ.ಸಿ.ಸುಧಾಕರ್​, ಕೆ.ವೆಂಕಟೇಶ್​ ನಿಮ್ಮ ಅಭಿಪ್ರಾಯ ಕೇಳಲು ಬಂದಿದ್ದೇವೆ ಅಂತ ಅಷ್ಟೇ ಹೇಳಿದರು. ಮಹಾದೇವಪ್ಪನವರು 10 ಜನ ಬನ್ನಿ ಅಂತ ಆಗ ಹೇಳಿದ್ದರೆ, ನಾವಷ್ಟೇ ಹೋಗುತ್ತಿದ್ದೆವು. ಆದರೆ, ಲಾಠಿ ಚಾರ್ಜ್​ಗೂ ಮೊದಲೇ 10 ಜನರನ್ನು ಕರೆದಿದ್ದೆ ಎಂದು ಸಿಎಂ ಸುಳ್ಳು ಹೇಳುತ್ತಿದ್ದಾರೆ” ಎಂದು ದೂರಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಳೆದ ನಾಲ್ಕು ವರ್ಷಗಳಿಂದ ಶಾಂತ ರೀತಿಯಿಂದ ‌ಹೋರಾಟ ಮಾಡಲಾಗಿತ್ತು. ಎಂದಿಗೂ ನಮ್ಮ ಜನ ಅಶಾಂತಿಗೆ ಅವಕಾಶ ಕೊಟ್ಟಿಲ್ಲ. ಕಳೆದ ವರ್ಷ 12 ಜಿಲ್ಲೆಯಲ್ಲಿ ಹೋರಾಟ ಮಾಡಿದಾಗ ಯಾವುದೇ ಸಮಸ್ಯೆ ಆಗಿರಲಿಲ್ಲ.

ಸಿಎಂ ಸಿದ್ದರಾಮಯ್ಯ ನಮ್ಮ ಮನವಿಗೆ ಸ್ಪಂದಿಸಲಿಲ್ಲ‌. ಹಾಗಾಗಿ, ಸುವರ್ಣಸೌಧದ ಬಳಿ ನ್ಯಾಯ ಕೇಳಬೇಕು ಎಂದು ಉಗ್ರ ಹೋರಾಟಕ್ಕೆ ಇಳಿದೆವು. ನಮ್ಮ ಪದಾಧಿಕಾರಿಗಳಿಗೆ ಪೊಲೀಸ್ ಇಲಾಖೆಯಿಂದ ನಿರಂತರ ಬೆದರಿಕೆ ಹಾಕಲಾಗಿದೆ” ಎಂದು ದೂರಿದರು.

“ಸಿಎಂ ಸಿದ್ದರಾಮಯ್ಯ ಅವರೇ ಸ್ಥಳಕ್ಕೆ ಬರಬೇಕು ಎಂದು ಸಮುದಾಯದ ಜನರು ಪಟ್ಟು ಹಿಡಿದರು. ಸಿಎಂ ಬರುವುದಿಲ್ಲ ಎಂದು ಎಡಿಜಿಪಿ ಹೇಳಿದರು. ಹಾಗಾಗಿ, ಸಿಎಂ ಇದ್ದ ಜಾಗಕ್ಕೆ ನಾವೇ ಹೋಗೋಣ ಎಂದು ತೀರ್ಮಾನಿಸಿ ಹೊರಟೆವು. ಹೀಗೆ ಹೋಗುವಾಗಲೂ‌ 10 ಜನರನ್ನು ಸಿಎಂ ಆಹ್ವಾನಿಸಿದ್ದಾರೆ ಅಂತ ಯಾವ ಅಧಿಕಾರಿಯೂ ನಮ್ಮ ಮುಂದೆ ಹೇಳಿಲ್ಲ. ಇನ್ನು ಸಿವಿಲ್ ಬಟ್ಟೆಯಲ್ಲಿ ಇದ್ದ ಕೆಲ‌ ಪೊಲೀಸರು ನಮ್ಮವರ ಮೇಲೆ ಕಲ್ಲು ತೂರಿದ್ದಾರೆ. ಪೊಲೀಸರು ದ್ವೇಷದಿಂದ ಮಾರಣಾಂತಿಕ ಹಲ್ಲೆ ಮಾಡಿದರು. ವಕೀಲರ ಮೇಲೂ ಹಲ್ಲೆ ಮಾಡಿದ್ದಾರೆ” ಎಂದು ಹೇಳಿದರು.

“ಲಾಠಿ ಚಾರ್ಜ್​ ಮಾಡಿಸಿದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದೇ ರೀತಿ ರೈತರ ಮೇಲಿನ ಕೇಸ್​ಗಳನ್ನು ವಾಪಸ್​ ಪಡೆಯಬೇಕು. ಗುರುವಾರ ರಾಜ್ಯಾದ್ಯಂತ ಜಿಲ್ಲಾ ಕೇಂದ್ರ, ತಾಲೂಕುಗಳಲ್ಲಿ ಮತ್ತು ಹಿರೇಬಾಗೇವಾಡಿ ಹಾಗೂ ಹತ್ತರಗಿ ಟೋಲ್ ನಾಕಾಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತೇವೆ.

ಸೋಮವಾರದಿಂದ ಕೊಂಡಸಕೊಪ್ಪ ಪ್ರತಿಭಟನೆ ವೇದಿಕೆಯಲ್ಲಿ ಬೆಳಿಗ್ಗೆ 10ರಿಂದ ಸಾಯಂಕಾಲ 6 ಗಂಟೆವರೆಗೆ ಧರಣಿ ಸತ್ಯಾಗ್ರಹ ಮಾಡುತ್ತೇವೆ” ಎಂದು ತಿಳಿಸಿದರು.

ಹಿಂದುಳಿದ ವರ್ಗದ ಸಮುದಾಯದ ಮುಖಂಡರು ಪಂಚಮಸಾಲಿಗರಿಗೆ 2ಎ ಮೀಸಲಾತಿ ಕೊಡಬಾರದು ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿರುವ ಕುರಿತು ಮಾತನಾಡಿ, “ಸಿದ್ದರಾಮಯ್ಯ ಜಾಣ ಮುಖ್ಯಮಂತ್ರಿ. ಹಾಗಾಗಿ, ಪಂಚಮಸಾಲಿಗೆ ಮೀಸಲಾತಿ ಕೊಡಬೇಡಿ ಎಂದು ತಾವೇ ಮನವಿ ತರಿಸಿಕೊಂಡಿದ್ದಾರೆ” ಎಂದು ಆರೋಪಿಸಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...