spot_img
spot_img

ಕ್ರಿಮಿನಲ್ ಪ್ರಕರಣದಡಿ ಸರ್ಕಾರಿ ನೌಕರ ಸೇವೆಯಿಂದ ಅಮಾನತು

spot_img
spot_img

Share post:

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯ್ದೆಗಳಡಿ ಬಂಧಿತನಾದ ಸರ್ಕಾರಿ ನೌಕರ 48 ಗಂಟೆಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದರೆ, ಸೇವೆಯಿಂದಲೂ ತಾನಾಗಿಯೇ ಅಮಾನತುಗೊಳ್ಳುತ್ತಾರೆ ಎಂದು ಹೈಕೋರ್ಟ್​ ತಿಳಿಸಿದೆ.
ಸರ್ಕಾರಿ ನೌಕರರೊಬ್ಬರು ಕೊಫೇಪೋಸಾ, ಎನ್‌ಐಎ ಅಥವಾ ಇನ್ಯಾವುದೇ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯ್ದೆಗಳಡಿ 48 ಗಂಟೆಗಳಿಗೂ ಹೆಚ್ಚು ಅವಧಿಯವರೆಗೆ ಬಂಧನಕ್ಕೊಳಗಾಗಿ, ಬಳಿಕ ಜಾಮೀನು ಸಿಕ್ಕರೆ ತಮ್ಮ ಸೇವೆ ಮುಂದುವರೆಸಲಾಗದು ಎಂದು ಹೈಕೋರ್ಟ್ ಹೇಳಿದೆ.
ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಎಂ.ಪದ್ಮನಾಭ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ.
ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮ 10(2) (ಎ) ನಿಯಮಗಳ ಪ್ರಕಾರ 48 ಗಂಟೆಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದರೆ ಆತ ಸೇವೆಯಿಂದ ತಾನಾಗಿಯೇ ಅಮಾನತುಗೊಳ್ಳುತ್ತಾನೆ. ಬಂಧನಕ್ಕೆ ಒಳಗಾಗಿದ್ದ ಸರ್ಕಾರಿ ನೌಕರನೊಬ್ಬ ಕೋರ್ಟ್‌ನಿಂದ ಜಾಮೀನು ಪಡೆದು ಹೊರಗೆ ಬಂದ ಮೇಲೆ ನೇರ ಕಚೇರಿಗೆ ಹೋಗಬಹುದೇ, ಇಲ್ಲವೇ ಎಂಬುದನ್ನು 2015ರ ಸರ್ಕಾರಿ ಸುತ್ತೋಲೆಯ ಪ್ರಕಾರ ಸಕ್ಷಮ ಪ್ರಾಧಿಕಾರವೇ ನಿರ್ಧರಿಸಬೇಕು. ಅಂತಹ ಸೇವಕನ ಅಮಾನತು ಆದೇಶವನ್ನು ರದ್ದುಪಡಿಸಬೇಕೊ, ಬೇಡವೊ ಎಂಬ ಬಗ್ಗೆ ಪ್ರಾಧಿಕಾರವೇ ಅಂತಿಮ ನಿರ್ಣಯ ಕೈಗೊಳ್ಳಬೇಕು. ಜಾಮೀನು ಪಡೆದು ಹೊರಗೆ ಬಂದಿದ್ದೇನೆ ಎಂಬ ಏಕೈಕ ಕಾರಣದಿಂದ ಅಮಾನತು ಆದೇಶ ಕೊನೆಗೊಂಡಂತಾಗುತ್ತದೆ ಎಂದು ಭಾವಿಸತಕ್ಕದ್ದಲ್ಲ ಎಂದು ಪೀಠ ಹೇಳಿದೆ.
ದೇವನಹಳ್ಳಿ ತಾಲೂಕಿನ ಇಲತೊರೆ ಗ್ರಾಮದಲ್ಲಿ ಅಭಿವೃದ್ಧಿಪಡಿಸಲಾದ ಬಡಾವಣೆಯಲ್ಲಿ ಒಳಚರಡಿ ಮೂಲಕ ಎಲೆಕ್ಟ್ರಿಕಲ್ ಕೇಬಲ್ ಅಳವಡಿಕೆಗೆ ಡಿ.ಎಂ.ಪದ್ಮನಾಭ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇರಿಸಿದ್ದರು. ಮುಂಗಡವಾಗಿ 3 ಲಕ್ಷ ರೂ. ಪಡೆದಿದ್ದಲ್ಲದೇ, ಇನ್ನೂ 2 ಲಕ್ಷ ರೂ. ಕೊಟ್ಟರೆ ಮಾತ್ರ ಪರವಾನಗಿ ನೀಡುವುದಾಗಿ ತಿಳಿಸಿದ್ದರು ಎಂಬ ಆರೋಪವಿತ್ತು. ಈ ಸಂಬಂಧ ಅವರನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನು ಪಡೆದು ಹೊರ ಬಂದಿದ್ದ ಅವರು ಅಮಾನತು ಆದೇಶ ರದ್ದುಗೊಳಿಸುವಂತೆ ಕೋರಿ ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. 2024ರ ನವೆಂಬರ್ 25ರಂದು ಕೆಎಟಿ ಇವರ ಮನವಿ ತಿರಸ್ಕರಿಸಿತ್ತು.
48 ಗಂಟೆಗಳಿಗೂ ಹೆಚ್ಚು ಕಾಲ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974 (ಕೊಫೇಪೋಸಾ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆ 2008 (ಎನ್‌ಐಎ) ಅಥವಾ ಇನ್ನಾವುದೇ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯ್ದೆಗಳಡಿ ಬಂಧನಕ್ಕೊಳಗಾದಲ್ಲಿ ಅವರು ಸೇವೆಯಿಂದ ಅಮಾನತುಗೊಂಡಂತಾಗಿದೆ. ಹೀಗಾಗಿ, ಬಳಿಕ ಜಾಮೀನಿನ ಮೇಲೆ ಹೊರಬಂದರೂ ಕೂಡ ಸಕ್ಷಮ ಪ್ರಾಧಿಕಾರವು ತನ್ನ ಈ ಹಿಂದಿನ ಆದೇಶ(ಅಮಾನತು) ರದ್ದುಗೊಳಿಸಿ, ಮುಂದಿನ ಔಪಚಾರಿಕ ಆದೇಶ ನೀಡುವವರೆಗೂ ಅಮಾನತು ಮುಂದುವರೆಯಲಿದೆ ಎಂದು ತಿಳಿಸಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...