spot_img
spot_img

SHARAD PAWAR MEETS PM MODI – ಮಹಾರಾಷ್ಟ್ರದ ದಾಳಿಂಬೆ ಉಡುಗೊರೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi news :

ರಾಜ್ಯಸಭಾ ಸಂಸದ ಶರದ್ ಪವಾರ್ ಬುಧವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಸಾತಾರಾ ಮತ್ತು ಫಲ್ಟನ್‌ನ ದಾಳಿಂಬೆ ರೈತರೊಂದಿಗೆ ಮೋದಿಯನ್ನು ಭೇಟಿಯಾದ ಅವರು, ದಾಳಿಂಬೆ ಪೆಟ್ಟಿಗೆಯನ್ನು ಉಡುಗೊರೆಯಾಗಿ ಕೊಟ್ಟರು. ಈ ಕುರಿತು ಮಾಹಿತಿ ನೀಡಿದ ಪವಾರ್, ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ವಿಚಾರಗಳನ್ನು ಚರ್ಚಿಸಿಲ್ಲ ಎಂದರು.

ಪ್ರಸಕ್ತ ಭೇಟಿಯ ಸಂದರ್ಭದಲ್ಲಿ ಮೋದಿಯವರ ಮುಂದೆ ಸಾಹಿತ್ಯ ಸಮ್ಮೇಳನದ ವಿಷಯವನ್ನು ಪ್ರಸ್ತಾಪಿಸಲಿಲ್ಲ ಎಂದು ಪವಾರ್ ಪ್ರಧಾನಿಯೊಂದಿಗಿನ ಸಭೆಯ ನಂತರ ಹೇಳಿದರು.ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಕೂಡ ಭೇಟಿಯಾದ ಪವಾರ್, ಅವರಿಗೂ ಮಹಾರಾಷ್ಟ್ರದಲ್ಲಿ ಬೆಳೆಯಲಾದ ದಾಳಿಂಬೆಗಳನ್ನು ಉಡುಗೊರೆಯಾಗಿ ನೀಡಿದರು.

ಫೆಬ್ರವರಿಯಲ್ಲಿ ದೆಹಲಿಯ ತಾಲ್ ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿರುವ 98ನೇ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲು ಆಹ್ವಾನಿಸಿ ಪವಾರ್ ಇತ್ತೀಚೆಗೆ ಪ್ರಧಾನಿಗೆ ಪತ್ರ ಬರೆದಿದ್ದರು.ಕಳೆದ ತಿಂಗಳು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್-ಎನ್​ಸಿಪಿ (ಎಸ್​ಪಿ) -ಶಿವಸೇನೆ (ಯುಬಿಟಿ) ಎಂವಿಎ ಮೈತ್ರಿಕೂಟವು ಬಿಜೆಪಿ-ಶಿವಸೇನೆ-ಎನ್​ಸಿಪಿಯ ಮಹಾಯುತಿ ಮೈತ್ರಿಕೂಟದ ಎದುರು ಅವಮಾನಕರ ಸೋಲು ಕಂಡಿತ್ತು.

288 ಸದಸ್ಯರ ವಿಧಾನಸಭೆಯಲ್ಲಿ ಮಹಾಯುತಿ 235 ಸ್ಥಾನಗಳನ್ನು ಗೆದ್ದರೆ, ಎಂವಿಎ 46 ಸ್ಥಾನಗಳಿಗೆ ಸೀಮಿತವಾಯಿತು.ಭೇಟಿಯ ಬಗ್ಗೆ ಉಪರಾಷ್ಟ್ರಪತಿಯವರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, “ಗೌರವಾನ್ವಿತ ಸಂಸತ್ ಸದಸ್ಯ (ರಾಜ್ಯಸಭಾ) ಶರದ್ ಪವಾರ್ ಅವರು ಇಂದು ಗೌರವಾನ್ವಿತ ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಸಂಸತ್ ಭವನದಲ್ಲಿ ಭೇಟಿಯಾದರು” ಎಂದು ಬರೆಯಲಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...

EARTHQUAKE IN AFGHANISTAN:ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲು

Kabul, Afghanistan News: ಜನವರಿ 30 ರಂದು ಅಫ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿತ್ತು. ಸೋಮವಾರ ತಡರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಇದರಿಂದ ಅಲ್ಲಿನ ಜನ ಭಯಭೀತಗೊಂಡಿದ್ದಾರೆ.ಈ ರೀತಿಯ...

205 INDIANS DEPORTED BY US:ಅಕ್ರಮವಾಗಿ ಅಮೆರಿಕದಲ್ಲಿದ್ದ ಭಾರತೀಯರ ಗಡಿಪಾರು

Amritsar News: ಅಕ್ರಮ ವಲಸಿಗರ ವಿರುದ್ದ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣಕ್ರಮ ಕೈಗೊಂಡಿದ್ದಾರೆ. ಅದರಂತೆ ದಾಖಲೆ ರಹಿತವಾಗಿ ಅಮೆರಿಕದಲ್ಲಿ ನೆಲೆನಿಂತಿದ್ದ INDIANSನ್ನು ಮರಳಿ ತವರಿಗೆ...