spot_img
spot_img

UPPER KRISHNA PROJECTI – 75 ಸಾವಿರ ಎಕರೆಗೆ ಏಕರೂಪ ಪರಿಹಾರ

spot_img
spot_img

Share post:

Allamatti Dam :

ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಅಣೆಕಟ್ಟೆಯ ಎತ್ತರದಿಂದ ಮುಳುಗಡೆಯಾಗುವ 75 ಸಾವಿರ ಎಕರೆ ಜಮೀನಿಗೆ ಏಕರೂಪ ಪರಿಹಾರ ನೀಡಲು ಸಿಎಂ ತೀರ್ಮಾನಿಸಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಸದನದಲ್ಲಿ ಮಾಹಿತಿ ನೀಡಿದರು.

ಕೃಷ್ಣಾ ಮೇಲ್ದಂಡೆ ನದಿ ಪಾತ್ರದ ಆಲಮಟ್ಟಿ ಅಣೆಕಟ್ಟೆಯ ಎತ್ತರದಿಂದ ಮುಳುಗಡೆಯಾಗುವ 75 ಸಾವಿರ ಎಕರೆ ಜಮೀನಿನ ರೈತರಿಗೆ ಏಕರೂಪದಲ್ಲಿ ಪರಿಹಾರ ಪಾವತಿಸಲು ಮುಖ್ಯಮಂತ್ರಿಯವರು ನಿರ್ಣಯಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2 ಕಂತಿನ ಪರಿಹಾರ ಪಾವತಿಸುವ ನಿರ್ಣಯ ಕೈಗೊಂಡು ಆದೇಶವು ಜಾರಿಯಾಗಿದೆ. ಆದರೆ ನಮ್ಮ ಸರ್ಕಾರದಲ್ಲಿ ಅದರ ಮುಂದುವರೆದ ಸಂಪರ್ಕದ ಪತ್ರಗಳು ರವಾನೆಯಾಗಿವೆ. ಇದು ನಮ್ಮ ಸರ್ಕಾರ ಕೈಗೊಂಡ ನಿರ್ಣಯವಲ್ಲ ಎಂದು ಹೇಳಿದರು.

ಸದನದಲ್ಲಿ ಇಂದು ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ವಿಶೇಷ ಚರ್ಚೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಳುಗಡೆ ಪ್ರದೇಶಕ್ಕೆ ಎರಡು ಕಂತಿನಲ್ಲಿ ಪರಿಹಾರ ಪಾವತಿಸಲು ಈ ಸರ್ಕಾರ ನಿರ್ಣಯ ಕೈಗೊಂಡಿದೆ ಎಂದು ಹೇಳಿದರು. ಆಗ ಮಧ್ಯಪ್ರವೇಶಿಸಿದ ಸಚಿವರು, ಇದು ತಪ್ಪು ಕಲ್ಪನೆ.ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದಲ್ಲಿ ಆಲಮಟ್ಟಿ ಎತ್ತರ ಸೇರಿದಂತೆ ಹಲವು ಕಾಮಗಾರಿಗಳಿಗೆ 1.50 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ ಎಂದು ಪದೇಪದೇ ಹೇಳುವ ಮೂಲಕ ಆ ಯೋಜನೆಯನ್ನು ಮುಟ್ಟಲು ಹೆದರುವಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಲಾಗಿದೆ ಎಂದು ಸಚಿವರು ಆಕ್ಷೇಪಿಸಿದರು.

20 ಹಳ್ಳಿಗಳ ಸ್ಥಳಾಂತರಕ್ಕೆ 12 ಸಾವಿರ ಕೋಟಿ, ಕೆಲವು ಕಾಲುವೆಗಳ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅದನ್ನು ಮುಂದುವರೆಸಲು ಹಾಗೂ ಭೂಸ್ವಾಧೀನ ಸೇರಿ 75 ಸಾವಿರ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಪೂರ್ಣಗೊಳ್ಳಲಿದೆ. ಆದರೆ 1.50 ಲಕ್ಷ ಕೋಟಿ ರೂ. ಅಂತಾ ಹೇಳಿ ಆತಂಕ ಮೂಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.ಯೋಜನೆಗೆ ಅಷ್ಟೊಂದು ಹಣ ಬೇಕಾಗುವುದಿಲ್ಲ.

ಸುಮಾರು 75 ಸಾವಿರ ಕೋಟಿ ರೂ. ವೆಚ್ಚದಲ್ಲೇ ಪೂರ್ಣಗೊಳಿಸಲು ಅವಕಾಶವಿದೆ. ತಾವು ಜಲ ಸಂಪನ್ಮೂಲ ಸಚಿವರಾಗಿದ್ದಾಗ 51 ಸಾವಿರ ಕೋಟಿ ರೂ.ಗಳಿಗೆ ಯೋಜನಾ ಮಂಜೂರಾತಿಯನ್ನು ನೀಡಿದ್ದೆ. 75 ಸಾವಿರ ಎಕರೆ ಭೂಸ್ವಾಧೀನಕ್ಕೆ 35 ಸಾವಿರ ಕೋಟಿ ರೂ. ವೆಚ್ಚವಾಗಲಿದೆ.

ಕಾವೇರಿಗಿಂತಲೂ ಕೃಷ್ಣೆ ಹೆಚ್ಚು ಅಚ್ಚುಕಟ್ಟು ಪ್ರದೇಶ ಹೊಂದಿದೆ. ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಜನ್ಮ ತಾಳಿ ಆಂಧ್ರಪ್ರದೇಶದವರೆಗೂ ಹರಿಯುತ್ತಿದೆ. ರಾಜ್ಯದಲ್ಲಿ 1,392 ಕಿ.ಮೀ. ಹರಿಯುತ್ತಿದೆ. 1,12,000 ಚ.ಕೀ. ಜಲಾನಯನ ಪ್ರದೇಶ ಹೊಂದಿದೆ ಎಂದು ತಿಳಿಸಿದರು.

ಚರ್ಚೆ ಮುಂದುವರೆಸಿದ ಯತ್ನಾಳ್, ಕಾವೇರಿ ನದಿಯಷ್ಟೇ ಪ್ರಾಮುಖ್ಯತೆಯನ್ನು ಕೃಷ್ಣೆಗೂ ನೀಡಬೇಕು. ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ಪಕ್ಷಗಳೂ ಕೂಡಲಸಂಗಮದಲ್ಲಿ ಆಣೆ ಪ್ರಮಾಣ ಮಾಡುತ್ತವೆ. ಆದರೆ ಯಾವ ಯೋಜನೆಗಳೂ ಈಡೇರುವುದಿಲ್ಲ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...