spot_img
spot_img

MEDICAL WASTE CASE – ತಮಿಳುನಾಡಿನಲ್ಲಿ ಎಸೆದ ವೈದ್ಯಕೀಯ ತ್ಯಾಜ್ಯ ತೆರವುಗೊಳಿಸಿದ ಕೇರಳ ಸರ್ಕಾರ

spot_img
spot_img

Share post:

Chennai News:

ತಮಿಳುನಾಡಿನಲ್ಲಿ ವೈದ್ಯಕೀಯ ತ್ಯಾಜ್ಯ ಎಸೆದಿದ್ದಕ್ಕಾಗಿ ಎನ್​ಜಿಟಿ ಕೇರಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ ಜಿಟಿ) ದಕ್ಷಿಣ ಪೀಠದ ಕಟ್ಟುನಿಟ್ಟಿನ ನಿರ್ದೇಶನದ ನಂತರ ಕೇರಳ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಡಿಸೆಂಬರ್ 23 ರೊಳಗೆ ತ್ಯಾಜ್ಯವನ್ನು ತೆರವುಗೊಳಿಸುವಂತೆ ಎನ್ ಜಿಟಿ ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಹಾಯಕ ಕಲೆಕ್ಟರ್ ಆಲ್ಬರ್ಟ್ ನೇತೃತ್ವದ ಕೇರಳದ ತಂಡವು ತ್ಯಾಜ್ಯ ತೆರವು ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಬಿಸಾಡಲಾಗಿದ್ದ ವೈದ್ಯಕೀಯ ತ್ಯಾಜ್ಯವನ್ನು ಮರಳಿ ತರಲು ಕೇರಳದ ಪಿಣರಾಯಿ ವಿಜಯನ್ ಸರ್ಕಾರ ತಂಡವೊಂದನ್ನು ನಿಯೋಜಿಸಿದೆ.

ತ್ಯಾಜ್ಯವನ್ನು ಕೇರಳಕ್ಕೆ ಮರಳಿ ತರಲು ಎಂಟು ಟ್ರಕ್ ಗಳನ್ನು ನಿಯೋಜಿಸಲಾಗಿದೆ. ತಮಿಳುನಾಡಿದ ತಿರುನೆಲ್ವೇಲಿಯಲ್ಲಿ ವೈದ್ಯಕೀಯ ತ್ಯಾಜ್ಯ ಎಸೆದ ಕ್ರಮಕ್ಕೆ ಸುತ್ತಮುತ್ತಲಿನ ನಡುಕಲ್ಲೂರ್, ಕೊಡಗನಲ್ಲೂರ್, ಕೊಂಡನಗರಂ ಮತ್ತು ಸುತಮಲ್ಲಿಯಂತಹ ಪ್ರದೇಶಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಎಸೆಯಲಾದ ತ್ಯಾಜ್ಯ ಅಪಾಯಕಾರಿಯಲ್ಲ ಎಂದು ಕೇರಳ ಪರಿಶೀಲನಾ ತಂಡ ಹೇಳಿರುವ ಬಗ್ಗೆ ತಿರುನೆಲ್ವೇಲಿ ಜಿಲ್ಲಾಧಿಕಾರಿ ಕಾರ್ತಿಕೇಯನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತ್ಯಾಜ್ಯ ಅಪಾಯಕಾರಿಯಲ್ಲ ಎಂದಾದರೆ ಅದರ ವಿಲೇವಾರಿಗೆ ಮಧ್ಯವರ್ತಿಗಳನ್ನು ನೇಮಿಸಿದ್ದು ಏಕೆ ಮತ್ತು ಅದಕ್ಕಾಗಿ ಅಷ್ಟೊಂದು ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದು ಯಾಕೆ ಎಂದು ಅವರು ಪ್ರಶ್ನಿಸಿದರು. ಭವಿಷ್ಯದಲ್ಲಿ ಮತ್ತೆ ಇಂಥ ಘಟನೆ ನಡೆಯದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಕಾರ್ತಿಕೇಯನ್ ಒತ್ತಿ ಹೇಳಿದರು. ಈ ಸಂಬಂಧ ಸುತಮಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, 6 ಪ್ರಕರಣಗಳು ದಾಖಲಾಗಿವೆ.

ಕೇರಳದಿಂದ ತ್ಯಾಜ್ಯವನ್ನು ಅಕ್ರಮವಾಗಿ ಸಾಗಿಸಿ ಎಸೆಯುತ್ತಿದ್ದ ಆರೋಪದ ಮೇಲೆ ಕೇರಳದ ಲಾರಿ ಮಾಲೀಕ ಮತ್ತು ಖಾಸಗಿ ತ್ಯಾಜ್ಯ ನಿರ್ವಹಣಾ ಕಂಪನಿಯ ಮೇಲ್ವಿಚಾರಕ ಸೇರಿದಂತೆ ತಿರುನೆಲ್ವೇಲಿಯ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ತಿರುವನಂತಪುರಂ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಮತ್ತು ಕೇರಳದ ಖಾಸಗಿ ಆಸ್ಪತ್ರೆಯಲ್ಲಿನ ದೊಡ್ಡ ಪ್ರಮಾಣದ ಪ್ರಮಾಣದ ಬಯೋಮೆಡಿಕಲ್, ಪ್ಲಾಸ್ಟಿಕ್ ಮತ್ತು ಆಹಾರ ತ್ಯಾಜ್ಯವನ್ನು ಟ್ರಕ್​ಗಳಲ್ಲಿ ತಂದು ತಿರುನೆಲ್ವೇಲಿಯ ಕೊಡಗನಲ್ಲೂರ್ ಮತ್ತು ಪಲವೂರ್ ಗ್ರಾಮಗಳಲ್ಲಿ ಎಸೆಯಲಾಗಿದೆ.

ತ್ಯಾಜ್ಯವು ಬಳಸಿದ ಸಿರಿಂಜ್​​ಗಳು, ಪಿಪಿಇ ಕಿಟ್​ಗಳು ಮತ್ತು ಸೂಕ್ಷ್ಮ ವೈಯಕ್ತಿಕ ಮಾಹಿತಿಯನ್ನು ಒಳಗೊಂಡಿರುವ ವೈದ್ಯಕೀಯ ದಾಖಲೆಗಳಂತಹ ಅಪಾಯಕಾರಿ ವಸ್ತುಗಳನ್ನು ಒಳಗೊಂಡಿದೆ. ಇದರಿಂದ ಸ್ಥಳದಲ್ಲಿ ಗಂಭೀರ ಆರೋಗ್ಯ ಮತ್ತು ಪರಿಸರ ಸಮಸ್ಯೆಗಳು ಎದುರಾಗುವ ಆತಂಕ ನಿರ್ಮಾಣವಾಗಿದೆ.ಭೂಮಾಲೀಕರು ಈ ಬಗ್ಗೆ ಪದೇ ಪದೆ ದೂರು ನೀಡುತ್ತಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ.

ಹತ್ತಿರದ ಕಾಗದದ ಕಾರ್ಖಾನೆಗೆ ತ್ಯಾಜ್ಯ ಸಾಗಿಸುವ ಟ್ರಕ್​ಗಳು ಈ ಅಕ್ರಮ ಡಂಪಿಂಗ್ ನಲ್ಲಿ ಭಾಗಿಯಾಗಿವೆ ಎಂದು ಪೊಲೀಸರು ಶಂಕಿಸಿದ್ದಾರೆ.ಆಗಾಗ ರಾತ್ರಿ ಸಮಯದಲ್ಲಿ ಇಲ್ಲಿ ತ್ಯಾಜ್ಯಗಳನ್ನು ತಂದು ಎಸೆಯುತ್ತಿರುವುದರಿಂದ ಸ್ಥಳೀಯ ನೀರಿನ ಮೂಲಗಳು ಕಲುಷಿತಗೊಂಡಿವೆ, ಜಾನುವಾರುಗಳಿಗೆ ಅನಾರೋಗ್ಯ ಎದುರಾಗುತ್ತಿದೆ ಮತ್ತು ಜನರಿಗೂ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...