spot_img
spot_img

LALBAGH FLOWER SHOW : ಲಾಲ್ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದ್ದಾರೆ ವಾಲ್ಮೀಕಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಗಣರಾಜ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್‌ಬಾಗ್‌ನಲ್ಲಿ ವಾಲ್ಮೀಕಿ ಕುರಿತ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲು ರಾಜ್ಯ ತೋಟಗಾರಿಕೆ ಇಲಾಖೆ ಮುಂದಾಗಿದೆ. ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಜನವರಿ 16ರಿಂದ ಹತ್ತು ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ರಾಮಾಯಣ ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ಅವರ ಜೀವನ ಚಿತ್ರಣವು ವಿವಿಧ ಜಾತಿಯ ಲಕ್ಷಾಂತರ ಪುಷ್ಪಗಳಲ್ಲಿ ಅನಾವರಣಗೊಳ್ಳಲಿದೆ.

ಸ್ವಾತಂತ್ರ್ಯೊತ್ಸವ ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುವ ಮೂಲಕ ರಾಜ್ಯಧಾನಿ ಬೆಂಗಳೂರು ಮಾತ್ರವಲ್ಲದೇ ಇಡೀ ರಾಜ್ಯದ ಜನರನ್ನು ಆಕರ್ಷಣೆ ಮಾಡುತ್ತಿರುವ ತೋಟಗಾರಿಕೆ ಇಲಾಖೆ, ಪ್ರಸಕ್ತ ವರ್ಷ ಮಹರ್ಷಿ ವಾಲ್ಮೀಕಿ ಅವರ ಜೀವನ ಕುರಿತ ಫಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದೆ.

ಮಹಾನ್ ಗ್ರಂಥ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜೀವನಾಧಾರಿತ ಪುಷ್ಪ ಚಿತ್ರಣಗಳು ನೋಡುಗರ ಮೈಮನ ಸೆಳೆಯಲಿವೆ. ಮಹರ್ಷಿ ಅವರು ರಾಮಾಯಣ ಬರೆಯುತ್ತಿರುವ ಚಿತ್ರ, ರಾಮಾಯಣ ಪುಸ್ತಕದ ಚಿತ್ರ ಸೇರಿದಂತೆ ಹಲವು ಆಕರ್ಷಣೆಗಳು ವಿವಿಧ ಹೂವುಗಳಿಂದ ವಿನ್ಯಾಸಗೊಳ್ಳಲಿವೆ. ಅಲ್ಲದೆ, ಬ್ಯಾಂಡ್‌ಸ್ಟ್ಯಾಂಡ್ ಮತ್ತು ರಾಕ್ ಗಾರ್ಡನ್ ಸೆಲ್ಫಿ ಪಾಯಿಂಟ್ ಸಂದರ್ಶಕರನ್ನು ಸೂಜಿಗಲ್ಲಿನಂತೆ ಸೆಳೆಯುವ ರೀತಿಯಲ್ಲಿ ಅಲಂಕರಿಸಲು ಲಾಲ್ ಬಾಗ್ ಆಡಳಿತ ಮಂಡಳಿ ನಿರ್ಧರಿಸಿದೆ.

ಬೋನ್ಸೈ ಮತ್ತು ಇಕಾಬಾನಾ ಪ್ರದರ್ಶನವು ಈ ಪ್ರದರ್ಶನಕ್ಕೆ ಕಲಾತ್ಮಕ ಸ್ಪರ್ಶ ನೀಡಲಿದೆ. ಹೂವಿನ ತಾಜಾತನ ಕಾಪಾಡಿಕೊಳ್ಳಲು 6 ದಿನಗಳ ನಂತರ ಹೂವುಗಳನ್ನು ಬದಲಾಯಿಸಲಾಗುತ್ತದೆ. ಜನವರಿ 16ರಿಂದ ನಡೆಯುವ ಪ್ರದರ್ಶನಕ್ಕಾಗಿ ಈಗಾಗಲೇ ಹೂವು ಕುಂಡಗಳಲ್ಲಿ ಬೆಳೆಸಿದ ಪುಷ್ಪಗಳ ಜೋಡಣೆ ಆರಂಭವಾಗಿದ್ದು, ಹುಲ್ಲು ಹಾಸು ಸೇರಿದಂತೆ ಉದ್ಯಾನದ ನಾನಾ ಭಾಗಗಳಿಗೆ ತುಂತುರು ಹನಿ ನೀರನ್ನು ಹರಿಸುವ ಮೂಲಕ ಉದ್ಯಾನದ ಅಂದ ಹೆಚ್ಚಿಸಲು ತೋಟಗಾರಿಕೆ ಇಲಾಖೆ ಸಿಬ್ಬಂದಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

Different types of flower for fruit display:

ಚಳಿಗಾಲದಲ್ಲಿ ಬೆಳೆಯುವಂತಹ ಪೂಷಿಯಾ, ಅಗಪಾಂಥಸ್, ಸೈಕ್ಲೋಮನ್, ಕ್ಯಾಲಾಲಿಲ್ಲಿ, ಟ್ಯೊಬಿರಸ್ ರೂಟೆಡ್ ಸೇರಿದಂತೆ ಹಲವು ಶೀತ ವಲಯದ ವಿಶೇಷ ಹೂಗಳ ಪ್ರದರ್ಶನ, ದೇಶ-ವಿದೇಶಗಳ ಹತ್ತಾರು ಬಗೆಯ ಕುಂಡಗಳಲ್ಲೇ ಅರಳಿದ ಹೂಗಳು, ಆರ್ಕಿಡ್ಸ್, ಬೋಗನ್‌ವಿಲ್ಲಾದ ಹೂವಿನ ಗಿಡಗಳನ್ನು ಕಂಟೈನ್‌ಗಳಲ್ಲಿ ಪ್ರದರ್ಶಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಅಲ್ಲದೆ, ಲಾಲ್‌ಬಾಗ್​ಗೆ ಈ ಬಾರಿ ಭೇಟಿ ನೀಡುವ ಪ್ರವಾಸಿಗರು, ಬೆಂಗಳೂರಿನ ಜನತೆಯನ್ನು ಸೆಳೆಯಲು ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಹೂವಿನ ಪ್ರತಿಕೃತಿ ಹಾಗೂ ರಾಮಾಯಾಣ ಮಹಾಕಾವ್ಯದ ಪ್ರಮುಖ ಘಟನೆಗಳು ಫಲಪುಷ್ಪ ಪ್ರದರ್ಶನದಲ್ಲಿ ಮೂಡಿಬರಲಿದೆ.

ಅಲಂಕಾರಕ್ಕಾಗಿ ದೇಶ ವಿದೇಶಗಳಿಂದ ಹೂಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಪ್ರದರ್ಶನಕ್ಕೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಹಾಗೂ ರಾಜ್ಯದ ಹಲವು ಭಾಗಗಳಲ್ಲಿನ ತೋಟಗಾರಿಕಾ ಇಲಾಖೆಯ ಉದ್ಯಾನವನಗಳಲ್ಲಿನ ಹೂಗಳನ್ನು ಬಳಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು 25 ಲಕ್ಷ ಹೂವುಗಳಲ್ಲಿ, ಹೂವು ಕುಂಡದಲ್ಲಿ ಬೆಳೆಯುವ ಹಾಗೂ ಲಾಲ್‌ಬಾಗ್​ನಲ್ಲಿ ಬೆಳೆಯುವ ಹೂವುಗಳು, ಲಾಲ್​ಬಾಗ್ 25 ಸ್ಥಳಗಳಲ್ಲಿ ಬೆಳೆಯುವ 15 ಲಕ್ಷ ಹೂಗಳು ಹಾಗೂ 10 ಲಕ್ಷ ಪ್ರತ್ಯೇಕಿಸಿದ ಹೂವುಗಳಾದ ಗುಲಾಬಿ, ಸೇವಂತಿಗೆ ಸೇರಿದಂತೆ 10 ವಿವಿಧ ಜಾತಿಯ ಪುಷ್ಪಗಳನ್ನು ಬಳಸಿಕೊಳ್ಳಲಾಗುತ್ತಿದೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...