spot_img
spot_img

SABARIMALA TEMPLE : 41 ದಿನದಲ್ಲಿ 32 ಲಕ್ಷ ಭಕ್ತರ ಭೇಟಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Kerala News :

2024-25ರ ಎರಡು ತಿಂಗಳ ತೀರ್ಥಯಾತ್ರೆಯ ಮೊದಲ ಹಂತವಾದ ನವೆಂಬರ್ 15 ಮತ್ತು ಡಿಸೆಂಬರ್ 26 ರ ನಡುವೆ, ದೇವಾಲಯಕ್ಕೆ 297 ಕೋಟಿ ರೂ. ಆದಾಯ ಬಂದಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿ ಬಂದಿದ್ದ 215 ಕೋಟಿ ರೂ.ಗಳಿಗಿಂತ ಹೆಚ್ಚಾಗಿದೆ ಎಂದು prashanth ಹೇಳಿದರು. ಕೇರಳದ ಪ್ರಸಿದ್ಧ SABARIMALA TEMPLE ಆದಾಯದಲ್ಲಿ ಭಾರೀ ಏರಿಕೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 82 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಬಂದಿದೆ.

ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್. ಪ್ರಶಾಂತ್, ಮುಖ್ಯವಾಗಿ ಭಕ್ತರ ಅರ್ಪಣೆಗಳು ಮತ್ತು ದೇವಾಲಯದಲ್ಲಿ ಉತ್ಪಾದಿಸಿದ ವಸ್ತುಗಳಾದ ಅರವಣ ಪಾಯಸ ಹಾಗೂ ಅಪ್ಪಂನ ಮಾರಾಟದಿಂದ ಆದಾಯ ಬರುತ್ತಿದೆ ಎಂದು ಹೇಳಿದರು.

Ayyappa’s darshan by 28 lakh devotees in 2024;

ತೀರ್ಥಯಾತ್ರೆಯ ಎರಡನೇ ಹಂತ ಡಿಸೆಂಬರ್ 30 ರಂದು ಪ್ರಾರಂಭವಾಗಿದೆ. ಎರಡನೇ ಋತುವಿನ ಅತ್ಯಂತ ಶುಭ ದಿನವನ್ನು ಮಕರವಿಳಕ್ಕು ಎಂದು ಕರೆಯಲಾಗುತ್ತದೆ. ಜನವರಿ 14 ರಂದು ಮಕರವಿಳಕ್ಕು ಆಚರಿಸಲಾಗುತ್ತದೆ. ಇದು ಸಂಕ್ರಾಂತಿ ಹಬ್ಬದ ದಿನವೂ ಹೌದು. ಇದಾಗಿ ಕೆಲ ದಿನಗಳ ನಂತರ ಎರಡನೇ ಸೀಸನ್ ಕೊನೆಗೊಳ್ಳುತ್ತದೆ. ಕಳೆದ ವರ್ಷಕ್ಕಿಂತ 22 ಕೋಟಿ ರೂ. ಹೆಚ್ಚು ದೇವಾಲಯದ ಉತ್ಪನ್ನಗಳು ಮಾರಾಟವಾಗಿವೆ. ಕಳೆದ ವರ್ಷ 2024ರಲ್ಲಿ ಈ 41 ದಿನಗಳ ಅವಧಿಯಲ್ಲಿ 28 ಲಕ್ಷ ಯಾತ್ರಾರ್ಥಿಗಳು ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ, ಈ ಬಾರಿ 32 ಲಕ್ಷ ಭಕ್ತರು ಇಲ್ಲಿಗೆ ಭೇಟಿ ನೀಡಿದ್ದಾರೆ.

Limit on number of pilgrims to manage crowd:

ಸಮುದ್ರ ಮಟ್ಟದಿಂದ 914 ಮೀಟರ್ ಎತ್ತರದಲ್ಲಿರುವ ಪಶ್ಚಿಮ ಘಟ್ಟಗಳಲ್ಲಿ ನೆಲೆಗೊಂಡಿರುವ ಶಬರಿಮಲೆ ದೇವಸ್ಥಾನವು ಕೇರಳದ ರಾಜಧಾನಿ ತಿರುವನಂತಪುರಂನಿಂದ ಸುಮಾರು 100 ಕಿಲೋಮೀಟರ್ ದೂರದಲ್ಲಿರುವ ಪಥನಂತಿಟ್ಟ ಜಿಲ್ಲೆಯ ಪಂಬಾದಿಂದ ನಾಲ್ಕು ಕಿಲೋಮೀಟರ್ ಅಂತರದಲ್ಲಿ ಬೆಟ್ಟ ಗುಡ್ಡಗಳಲ್ಲಿದೆ.

ಹೆಚ್ಚುತ್ತಿರುವ ಜನಸಂದಣಿ ನಿರ್ವಹಿಸಲು, SABARIMALA TEMPLE ಅಧಿಕಾರಿಗಳು ದೈನಂದಿನ ಯಾತ್ರಾರ್ಥಿಗಳ ಸಂಖ್ಯೆಯನ್ನು 70,000 ಕ್ಕೆ ಮಿತಿಗೊಳಿಸಿದ್ದಾರೆ. ಇದರಲ್ಲಿ 60,000 ಆನ್ ಲೈನ್ ಬುಕಿಂಗ್ ಮತ್ತು 10,000 ಸ್ಪಾಟ್ ಬುಕಿಂಗ್ ಸೇರಿವೆ. ಭಕ್ತರ ಆಗಮನಕ್ಕೆ ಅನುಗುಣವಾಗಿ ದೇವಾಲಯವು ತನ್ನ ಸಮಯವನ್ನು ಸರಿಹೊಂದಿಸಿದೆ. ದೇವಾಲಯವು ಪ್ರತಿದಿನ ಬೆಳಗ್ಗೆ 3 ಗಂಟೆಗೆ ತೆರೆಯುತ್ತದೆ ಮತ್ತು ಮಧ್ಯಾಹ್ನ 1 ಗಂಟೆಗೆ ಮುಚ್ಚುತ್ತದೆ. ನಂತರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ರವರೆಗೆ ತೆರೆದಿರುತ್ತದೆ.

Devotees who are going to undertake a strict fast of 41 days:

ವ್ರತಾಚರಣೆ ಸಮಯದಲ್ಲಿ ಮಾಲಾಧಾರಿಗಳು ಕಟ್ಟುನಿಟ್ಟಾದ ಸಸ್ಯಾಹಾರ ಪಾಲಿಸಿ ಕಪ್ಪು ಉಡುಪು ಧರಿಸುತ್ತಾರೆ. ಈ ಅವಧಿಯಲ್ಲಿ ಅವರು ಪಾದರಕ್ಷೆ ಧರಿಸುವುದಿಲ್ಲ. ಪ್ರತಿಯೊಬ್ಬ ಭಕ್ತನು ತೆಂಗಿನಕಾಯಿಗಳನ್ನು ಹೊಂದಿರುವ ಇರುಮುಡಿಯನ್ನು ತಲೆಯ ಮೇಲೆ ಹೊತ್ತು ದೇವಸ್ಥಾನಕ್ಕೆ ಆಗಮಿಸುತ್ತಾನೆ. ಅದನ್ನು ಸನ್ನಿಧಾನದ ಪವಿತ್ರ 18 ಮೆಟ್ಟಿಲುಗಳನ್ನು ಏರುವ ಮೊದಲು ವಿಧಿವತ್ತಾಗಿ ದೇವರಿಗೆ ಅರ್ಪಿಸಲಾಗುತ್ತದೆ.

ಸಾಂಪ್ರದಾಯಿಕವಾಗಿ ಈ ದೇವಸ್ಥಾನದಲ್ಲಿ ಪ್ರೌಢ ವಯಸ್ಕ ಮಹಿಳೆಯರ ಪ್ರವೇಶವನ್ನು ನಿಷೇಧಿಸಲಾಗಿದೆ. ದೇವಾಲಯವನ್ನು ಪಂಬಾ ನದಿಯಿಂದ ಕಾಲ್ನಡಿಗೆಯಲ್ಲಿ ಮಾತ್ರ ಪ್ರವೇಶಿಸಬಹುದು. ಯಾತ್ರಾರ್ಥಿಗಳು ತಮ್ಮ ಪ್ರಯಾಣಕ್ಕೆ ಮುಂಚಿತವಾಗಿ 41 ದಿನಗಳ ಕಠಿಣ ವ್ರತ ಕೈಗೊಳ್ಳುತ್ತಾರೆ.

ಇದನ್ನು ಓದಿರಿ : KHALISTANI SEPARATIST PANNUN : ಭುವನೇಶ್ವರದಲ್ಲಿ ಅತಿದೊಡ್ಡ ಭಯೋತ್ಪಾದಕ ದಾಳಿ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...