spot_img
spot_img

FORMULA E RACE CASE : ಕೆ.ಟಿ.ರಾಮರಾವ್ ಮೇಲಿನ ಎಫ್ಐಆರ್ ರದ್ದತಿಗೆ ಹೈಕೋರ್ಟ್ ನಕಾರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hyderabad News:

FORMULA E RACE ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ತೆಲಂಗಾಣ ಹೈಕೋರ್ಟ್ ಮಂಗಳವಾರ ನಿರಾಕರಿಸಿತು. ಅಲ್ಲದೆ ಅವರನ್ನು ಬಂಧಿಸದಂತೆ ನೀಡಲಾದ ರಕ್ಷಣೆಯನ್ನು ನ್ಯಾಯಾಲಯ ಹಿಂಪಡೆಯಿತು. ತೀರ್ಪು ನೀಡುವವರೆಗೆ ಮತ್ತು ರಕ್ಷಣೆಯನ್ನು ತೆಗೆದುಹಾಕುವವರೆಗೆ ಮಾಜಿ ಸಚಿವ ಕೆ.ಟಿ.ರಾಮರಾವ್ ಅವರನ್ನು ಬಂಧಿಸದಂತೆ ನ್ಯಾಯಾಲಯವು ಈ ಹಿಂದೆ ಎಸಿಬಿಯನ್ನು ನಿರ್ಬಂಧಿಸಿತ್ತು.

ಇದಕ್ಕೂ ಮುನ್ನ, ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಪ್ರತಿವಾದಿಗಳ ವಾದಗಳನ್ನು ಆಲಿಸಿದ ನಂತರ ಹೈಕೋರ್ಟ್ ಡಿಸೆಂಬರ್ 31ರಂದು ಅರ್ಜಿಯ ಮೇಲಿನ ಆದೇಶಗಳನ್ನು ಕಾಯ್ದಿರಿಸಿತ್ತು.2023ರಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ರೇಸ್ ನಡೆಸಲು ಅನುಮತಿಯಿಲ್ಲದೆ ವಿದೇಶಿ ಕರೆನ್ಸಿಯಲ್ಲಿ ಹಣ ಪಾವತಿಸಿದ ಆರೋಪದ ಮೇಲೆ ರಾಮರಾವ್ ವಿರುದ್ಧ ಎಸಿಬಿ ಡಿಸೆಂಬರ್ 19ರಂದು ಪ್ರಕರಣ ದಾಖಲಿಸಿದೆ.ಸರ್ಕಾರದ ಬೊಕ್ಕಸಕ್ಕೆ ಸುಮಾರು 55 ಕೋಟಿ ರೂ.

ಗಳ ನಷ್ಟವನ್ನುಂಟು ಮಾಡಿದ ಕ್ರಿಮಿನಲ್ ದುರುಪಯೋಗ, ಕ್ರಿಮಿನಲ್ ದುರ್ನಡತೆ, ನಂಬಿಕೆ ಉಲ್ಲಂಘನೆ ಮತ್ತು ಕ್ರಿಮಿನಲ್ ಪಿತೂರಿ ನಡೆಸಿದ ಆರೋಪದ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಹಿಂದಿನ ಬಿಆರ್​ಎಸ್ ಆಡಳಿತದಲ್ಲಿ ನಡೆದ ರೇಸ್ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಮೇಲೆ ಜನವರಿ 7 ರಂದು ವಿಚಾರಣೆಗೆ ಹಾಜರಾಗುವಂತೆ ರಾಮರಾವ್​ಗೆ ಇಡಿ ಸಮನ್ಸ್ ನೀಡಿತ್ತು.

ಅಕ್ರಮ ನಡೆದಿದೆ ಎನ್ನಲಾದ ಅವಧಿಯಲ್ಲಿ ರಾಮರಾವ್ ಪೌರಾಡಳಿತ ಸಚಿವರಾಗಿದ್ದರು.FORMULA E RACE ಫೆಬ್ರವರಿ 2024ರಲ್ಲಿ ಮತ್ತೊಮ್ಮೆ ನಡೆಯಬೇಕಿತ್ತಾದರೂ, 2023ರ ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದನ್ನು ರದ್ದುಗೊಳಿಸಲಾಗಿದೆ.

ಎಫ್ಐಆರ್​ನಲ್ಲಿ ಸದ್ಯ ಶಾಸಕರಾಗಿರುವ ರಾಮರಾವ್ ಅವರನ್ನು ಪ್ರಮುಖ ಆರೋಪಿಯಾಗಿ, ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಮತ್ತು ನಿವೃತ್ತ ಅಧಿಕಾರಿ ಬಿಎಲ್ಎನ್ ರೆಡ್ಡಿ ಅವರನ್ನು ಕ್ರಮವಾಗಿ 2 ಮತ್ತು 3ನೇ ಆರೋಪಿಗಳಾಗಿ ಹೆಸರಿಸಲಾಗಿದೆ.ಕೆ.ಟಿ.ರಾಮರಾವ್ ವಿರುದ್ಧದ ಎಫ್​ಐಆರ್ ರದ್ದತಿಗೆ ನ್ಯಾಯಾಲಯ ನಿರಾಕರಿಸಿದೆ.

 

ಇದನ್ನು ಓದಿರಿ : PRASHANT KISHOR HOSPITALIZED : ಜೈಲಿನಿಂದ ಬಿಡುಗಡೆಯಾದ ಪ್ರಶಾಂತ್ ಕಿಶೋರ್ಗೆ ಅನಾರೋಗ್ಯ

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...