Belthangadi (South Kannada) News:
ದಕ್ಷಿಣ ಕನ್ನಡ ಪ್ರವಾಸದಲ್ಲಿರುವ VICE PRESIDENT JAGDEEP DHANKAR ಅವರು ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮೀಯ ದರ್ಶನ ಪಡೆದರು. ಬಳಿಕ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ VICE PRESIDENT JAGDEEP DHANKAR ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಆಗಿಸುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. ಇದು ಕೇವಲ ಕಟ್ಟಡ ಮಾತ್ರವಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ.
ಎಲ್ಲರಿಗೂ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ ಎಂದರು. VICE PRESIDENT JAGDEEP DHANKAR ಮತ್ತು ಅವರ ಪತ್ನಿ ಡಾ.ಸುದೇಶ ಧನ್ಕರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮೀಯ ದರ್ಶನ ಪಡೆದರು. ನಂತರ ಕ್ಯೂ ಕಾಂಪ್ಲೆಕ್ಸ್ ಅನ್ನು ಉಪ ರಾಷ್ಟ್ರಪತಿಗಳು ಲೋಕಾರ್ಪಣೆಗೊಳಿಸಿದರು. ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ. ದೇಶ ಸೇವೆಗೆ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು, ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ.
ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ. ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಉಪರಾಷ್ಟ್ರಪತಿ ಕರೆ ನೀಡಿದರು. ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ನಾವು ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ್ಯ ಕೊಟ್ಟಿದೆ.
ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ್ಯವಿದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆಯಿದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದು ತಿಳಿಸಿದರು. ಇದಕ್ಕೂ ಮುನ್ನ VICE PRESIDENT JAGDEEP DHANKAR ಮತ್ತು ಅವರ ಪತ್ನಿ ಇಂದು ಮಧ್ಯಾಹ್ನದ 1 ಗಂಟೆ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಈ ವೇಳೆ ಉಪರಾಷ್ಟ್ರಪತಿಗಳನ್ನು ರಾಜ್ಯ ಸರ್ಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಸ್ವಾಗತಿಸಿದ್ದರು. ಈ ವೇಳೆ ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಉಪಸ್ಥಿತರಿದ್ದರು. ಬಳಿಕ ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ನಲ್ಲಿ ಅವರು ಧರ್ಮಸ್ಥಳಕ್ಕೆ ತೆರಳಿದ್ದರು. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಹೇಮಾವತಿ ವಿ. ಹೆಗ್ಗಡೆ, ಹರ್ಷೇಂದ್ರ ಹೆಗ್ಗಡೆ, ಸುರೇಂದ್ರ ಹೆಗ್ಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನು ಓದಿರಿ : DRIP IRRIGATION : ಹಸಿರು ಬೆಳಗಾವಿ ನಿರ್ಮಾಣಕ್ಕೆ ಸಸಿಗಳಿಗೆ ನೀರುಣಿಸಲು ಹನಿ ನೀರಾವರಿ