spot_img
spot_img

SINGHATALUR ETHA IRRIGATION PROJECT : ಸಿಂಗಟಾಲೂರು ಏತ ನೀರಾವರಿ ನಂಬಿದ್ದ ರೈತರಿಗೆ ನಿರಾಸೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Koppala News:

ಯೋಜನೆಗಾಗಿ ತಂದಿರಿಸಿದ ಸಾಮಗ್ರಿಗಳು ತುಕ್ಕು ಹಿಡಿದು ಹಾಳಾಗುತ್ತಿವೆ. ಸ್ಥಳೀಯ ಜನಪ್ರತಿನಿಧಿಗಳು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ತುಂಗಭದ್ರಾ ಜಲಾಶಯಕ್ಕಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರ್ಯಾಯವಾಗಿ Singhatalur Irrigation Project ಯಿಂದ ಭೂಮಿಗೆ ನೀರು ಹರಿಸುವ ಭರವಸೆ ನೀಡಲಾಗಿತ್ತು. ಹಲವು ಹೋರಾಟದ ಬಳಿಕ ಕಾಮಗಾರಿ ಆರಂಭಿಸಿದ್ದರಾದರೂ ಒಂದು ಯೋಜನೆ ಮೂರು ದಶಕಗಳಾದರೂ ಪೂರ್ಣಗೊಳ್ಳದೇ ಇರುವುದರಿಂದ ಈ ಭಾಗದ ರೈತರಲ್ಲಿ ನಿರಾಸೆ ಮೂಡಿಸಿದೆ.

Dream for Hand Irrigation:

ತುಂಗಭದ್ರಾ ಜಲಾಶಯದ ಮೇಲ್ಭಾಗದ ಸಿಂಗಟಾಲೂರು ಬಳಿ 18.50 ಟಿಎಂಸಿ ನೀರು ಬಳಕೆ ಮಾಡಿಕೊಂಡು ಒಟ್ಟು 2.65 ಲಕ್ಷ ಎಕರೆ ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯ ನೀಡಲು ಯೋಜನೆ ಸಿದ್ಧವಾಗಿದೆ. ಸಿಂಗಟಾಲೂರಿನ ಬಲದಂಡೆಯಲ್ಲಿ 40 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿಯಾಗಿದೆ. ಆದರೆ, ಎಡದಂಡೆ ಭಾಗದ ಗದಗ, ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿಗಾಗಿ ಕಂಡ ರೈತರ ಕನಸು ನನಸಾಗಿಲ್ಲ. ಈ ಭಾಗದಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯನ್ನು ಮಧ್ಯಪ್ರದೇಶ ಮಾದರಿಯಲ್ಲಿ ಅಳವಡಿಸಲು 134 ಕೋಟಿ ರೂಪಾಯಿ ಇನ್ನೂ ಬೇಕಾಗಿದೆ. ಆದರೆ ಇಲ್ಲಿಯ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

Negligence of People’s Representatives:

ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಸಚಿವರಾಗಿ ಈಗ ಸಿಎಂ ಆರ್ಥಿಕ ಸಲಹೆಗಾರರಾಗಿದ್ದಾರೆ. ಗದಗನಲ್ಲಿ ಹೆಚ್.ಕೆ.ಪಾಟೀಲ ಪ್ರಭಾವಿ ಸಚಿವರಾಗಿದ್ದಾರೆ. ಆದರೂ ಒಂದು ಯೋಜನೆ ಪೂರ್ಣಗೊಳಿಸಲು ಮೂರು ದಶಕಗಳು ಬೇಕಾಗಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಯೋಜನೆಗಾಗಿ ಕ್ರೋಢೀಕರಿಸಿದ ಸಾಮಗ್ರಿಗಳು ತುಕ್ಕು ಹಿಡಿಯುತ್ತಿವೆ. ಕಾಲುವೆಗಳು ಹಾಳಾಗಿವೆ.

ಈಗಲಾದರೂ ಈ ಯೋಜನೆ ಪೂರ್ಣಗೊಳಿಸಲು ಸರಕಾರದ ಮೇಲೆ ಜನಪ್ರತಿನಿಧಿಗಳು ಒತ್ತಡ ಹಾಕಬೇಕು ಎಂದು ರೈತರು ಆಗ್ರಹಿಸಿದ್ದಾರೆ. SINGHATALUR ETHA IRRIGATION PROJECT ಗೆ ಕೊಪ್ಪಳ, ಯಲಬುರ್ಗಾ ಮತ್ತು ಗದಗ ಜಿಲ್ಲೆಯ ಒಬ್ಬ ಶಾಸಕರ ಕ್ಷೇತ್ರ ಒಳಗೊಂಡಿದ್ದು, ಈ ಮಧ್ಯೆ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಮೂರು ಭಾರಿ ಆಯ್ಕೆಯಾಗಿದ್ದಾರೆ. Singhatalur Irrigation Project ಸುಮಾರು 70 ರಿಂದ 75 ಸಾವಿರ ಏಕರೆ ಪ್ರದೇಶಕ್ಕೆ ನೀರಾವರಿ ಒದಗಿಸುವ ಯೋಜನೆ ಇದಾಗಿದೆ.

ಜಿಲ್ಲೆಯ ಸಚಿವರು, ಶಾಸಕರಾದ ನಾವು ಸರ್ಕಾರದ ಗಮನಕ್ಕೆ ತಂದು ಈ ವಿಷಯವನ್ನು ಬೋರ್ಡ್ ಮಿಟಿಂಗ್​ನಲ್ಲಿಟ್ಟು ಹೆಚ್ಚುವರಿ ಹಣ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ಕಾಮಗಾರಿ ಕೈಗೊಂಡು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ” ಎಂದು ಶಾಸಕ ರಾಘವೇಂದ್ರ ಹಿಟ್ನಾಳ್​​ ಹೇಳಿದ್ದಾರೆ.

ಮೂರು ದಶಕಗಳಾದರೂ ಯೋಜನೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಈ ಭಾಗದ ರೈತರು ನೀರಾವರಿಯ ಕನಸು ಕೈಬಿಟ್ಟು ತಮ್ಮ ಭೂಮಿಯನ್ನು ಸೋಲಾರ್​ ಹಾಗೂ ವಿಂಡ್ ಪವರ್ ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಬರುವ ದಿನಗಳಲ್ಲಿ ಸಿಂಗಟಾಲೂರು ಏತ ನೀರಾವರಿಗೆ ಭೂಮಿಯೇ ಇಲ್ಲದಂತಹ ಸ್ಥಿತಿ ಬರಲಿದೆ. ಈ ಬಗ್ಗೆ ಜನಪ್ರತಿನಿಧಿಗಳು ಎಚ್ಚರ ವಹಿಸಬೇಕಾಗಿದೆ.

ಇದನ್ನು ಓದಿರಿ : SCULPTOR ARUN YOGIRAJ : ‘ಬಾಲರಾಮನ ಮೂರ್ತಿ ಕೆತ್ತನೆ ಕನಸಿನಂತೆ ನಡೆದು ಹೋಯಿತು’

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...