spot_img
spot_img

MAHAKUMBHA MELA : 3.5 ಕೋಟಿ ಭಕ್ತರು, ಸಾಧು – ಸಂತರಿಂದ ‘ಅಮೃತ ಸ್ನಾನ’

spot_img
spot_img

Share post:

Mahakumbha Nagar (Uttar Pradesh) News:

ಮಂಗಳವಾರ ಶ್ರೀ ಪಂಚಾಯತಿ ಆಖಾಡಾ ಮಹಾನಿರ್ವಾಣಿ ಸದಸ್ಯರು ಮತ್ತು ಶ್ರೀ ಶಂಭು ಪಂಚಾಯತಿ ಅಟಲ್‌ ಅಖಾಡಾ ಸದಸ್ಯರು ಮೊದಲು ‘ಅಮೃತ ಸ್ನಾನ’ ಮಾಡಿದರು. ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ MAHAKUMBHA MELAದ ಮೊದಲ ಅಮೃತ ಸ್ನಾನಕ್ಕಾಗಿ ನಿರಂಜನಿ ಅಖಾಡದ ಮೆರವಣಿಗೆಗೆ ಆಧ್ಯಾತ್ಮಿಕ ನಾಯಕ ಸ್ವಾಮಿ ಕೈಲಾಶಾನಂದ ಗಿರಿ ಚಾಲನೆ ನೀಡಿದರು.

ವಿವಿಧ ಅಖಾಡಾಗಳ ಸಂತರು ಮತ್ತು ನಾಗಾ ಸಾಧುಗಳು ಸೇರಿದಂತೆ ಸುಮಾರು 3.5 ಕೋಟಿ ಭಕ್ತರು ಮಕರ ಸಂಕ್ರಾಂತಿ ದಿನದಂದು ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ MAHAKUMBHA MELAದ ‘ಅಮೃತ ಸ್ನಾನ’ ಮಾಡಿ ಪುನೀತರಾಗಿದ್ದಾರೆ. ಸೋಮವಾರ ‘ಪುಷ್ಯ ಪೂರ್ಣಿಮಾ’ ದಿನದಂದು ಮೊದಲ ‘ಸ್ನಾನ’ ನಡೆದಿತ್ತು. MAHAKUMBHA MELAದಲ್ಲಿ ವಿವಿಧ ಪಂಗಡಗಳ 13 ಅಖಾಡಗಳು ಭಾಗವಹಿಸುತ್ತವೆ.

ಯೋಗ, ಧ್ಯಾನ ಮತ್ತು ಆಧ್ಯಾತ್ಮಿಕ ಜ್ಞಾನದ ಅನ್ವೇಷಣೆಗೆ ಒತ್ತು ನೀಡುವ ಮೂಲಕ ಹೆಸರುವಾಸಿಯಾಗಿರುವ ನಿರಂಜನಿ ಅಖಾಡಾ ಈ MAHAKUMBHA MELAದಲ್ಲಿ ಭಾಗವಹಿಸುವ ಪ್ರಮುಖ ಅಖಾಡಾಗಳಲ್ಲಿ ಒಂದಾಗಿದೆ. ಇದು ಆಧ್ಯಾತ್ಮ ಬಗ್ಗೆ ಒಲವು ಹೊಂದಿರುವವರಿಗೆ ಮಾರ್ಗದರ್ಶನ ನೀಡುತ್ತದೆ.

“ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ MAHAKUMBHA MELA ನಡೆಯುತ್ತಿದೆ. ರಾಜ್ಯದ ಜನತೆಗೆ ಅಭಿನಂದನೆಗಳು. ಪುಣ್ಯ ಫಲ ನೀಡಲಿ, ಮಹಾಕುಂಭ ನಡೆಯಲಿ. ಈ ಪವಿತ್ರ ಕಾರ್ಯಕ್ರಮವು ಭಾರತದ ಸನಾತನ ಸಂಸ್ಕೃತಿ ಮತ್ತು ನಂಬಿಕೆಗೆ ಜೀವಂತ ಸಾಕ್ಷಿಯಾಗಿದೆ” ಎಂದಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿ, “ಮೊದಲ ಅಮೃತ ಸ್ನಾನದ ದಿನದಂದು 3.50 ಕೋಟಿಗೂ ಹೆಚ್ಚು ಭಕ್ತರು, ಸಂತರು ಮತ್ತು ಸಾಧುಗಳು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಮೊದಲು ಅಮೃತ ಸ್ನಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಸನಾತನ ಧರ್ಮ, MAHAKUMBHA MELAದ ಆಡಳಿತ ಮಂಡಳಿ, ಸ್ಥಳೀಯ ಆಡಳಿತ, ಪೊಲೀಸರು, ನೈರ್ಮಲ್ಯ ಕಾರ್ಯಕರ್ತರು, ಸ್ವಯಂಸೇವಾ ಸಂಸ್ಥೆಗಳು ಮತ್ತು ಧಾರ್ಮಿಕ ಸಂಸ್ಥೆಗಳು, ಅಂಬಿಗರು ಮತ್ತು ಎಲ್ಲ ಅಖಾಡಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು” ತಿಳಿಸಿದ್ದಾರೆ.

13 ಅಖಾಡಾಗಳನ್ನು ಸನ್ಯಾಸಿ (ಶೈವ), ಬೈರಾಗಿ (ವೈಷ್ಣವ) ಮತ್ತು ಉದಾಸೀನ್ ಎಂದು ಮೂರು ಗುಂಪುಗಳಾಗಿ ವಿಂಗಡಿಸಲಾಗಿದೆ. ಶೈವ ಅಖಾಡಾಗಳಲ್ಲಿ ಶ್ರೀ ಪಂಚ ದಶನಮ್ ಜುನಾ ಅಖಾಡಾ, ಶ್ರೀ ಪಂಚಾಯತಿ ಅಖಾಡಾ ನಿರಂಜನಿ, ಶ್ರೀ ಶಂಭು ಪಂಚಾಯತಿ ಅಟಲ್ ಅಖಾಡಾ, ಶ್ರೀ ಪಂಚಾಯತಿ ಅಖಾಡಾ ಮಹಾನಿರ್ವಾಣಿ, ಶ್ರೀ ಶಂಭು ಪಂಚಾಗ್ನಿ ಅಖಾಡಾ, ಶ್ರೀ ಪಂಚದಶನಂ ಆವಾಹನ ಅಖಾಡಾ ಮತ್ತು ತಪೋನಿಧಿ ಪಂಚಾ ಅಖಾಡಾ ಪ್ರಮುಖ ಅಖಾಡಾಗಳಾಗಿವೆ.

ತ್ರಿವೇಣಿ ಸಂಗಮದಲ್ಲಿ ‘ಹರ ಹರ ಮಹಾದೇವ್’, ‘ಜೈ ಶ್ರೀ ರಾಮ್’ ಮತ್ತು ‘ಜೈ ಗಂಗಾ ಮಾತೆ’ ಘೋಷಣೆಗಳು ಎಲ್ಲೆಡೆ ಮೊಳಗಿದವು. ಚಳಿಯ ನಡುವೆ ಭಕ್ತರು ಗುಂಪು ಗುಂಪಾಗಿ ಪವಿತ್ರ ಸ್ನಾನ ಮಾಡಿದರು. ಸನಾತನ ಧರ್ಮದ 13 ಅಖಾಡಾಗಳ ಸಾಧುಗಳು ಮಂಗಳವಾರ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸೇರುವ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು.

ಇದನ್ನು ಓದಿರಿ : GAVISIDDESHWARA JATRE 2025 : ದಕ್ಷಿಣ ಭಾರತದ ಕುಂಭಮೇಳ ‘ಗವಿಮಠ ರಥೋತ್ಸವ’ಕ್ಕೆ ಕ್ಷಣಗಣನೆ

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...