New Delhi News:
ಮರಣದಂಡನೆಗೆ ಗುರಿಯಾಗಿರುವ BEANT SINGH ರಾಜೋನಾ ಅವರ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ.ತನ್ನ ಕ್ಷಮಾದಾನ ಅರ್ಜಿಯ ಬಗ್ಗೆ 12 ವರ್ಷಗಳಾದರೂ ಯಾವುದೇ ನಿರ್ಣಯ ಕೈಗೊಳ್ಳದ ಹಿನ್ನೆಲೆಯಲ್ಲಿ ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ರಾಜೋನಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.1995ರಲ್ಲಿ ಪಂಜಾಬ್ನ ಮಾಜಿ ಮುಖ್ಯಮಂತ್ರಿ BEANT SINGH ಮತ್ತು ಇತರರ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ BEANT SINGH ರಾಜೋನಾ ತನ್ನ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪಿ.ಕೆ.ಮಿಶ್ರಾ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ವಿಶೇಷ ಪೀಠವು ಜನವರಿ 20ರಂದು ಪ್ರಕರಣದ ವಿಚಾರಣೆ ಪುನರಾರಂಭಿಸಲಿದೆ.ಕೇಂದ್ರದ ಎರಡನೇ ಅತ್ಯುನ್ನತ ಕಾನೂನು ಅಧಿಕಾರಿ ಸಾಲಿಸಿಟರ್ ಜನರಲ್ (ಎಸ್ಜಿ) ತುಷಾರ್ ಮೆಹ್ತಾ ಅವರು ಈ ವಿಷಯದಲ್ಲಿ ಒಳಗೊಂಡಿರುವ ಸೂಕ್ಷ್ಮತೆಗಳನ್ನು ಪರಿಗಣಿಸಿ ವಿವಿಧ ಇಲಾಖೆಗಳಿಂದ ಇನ್ನೂ ಹೆಚ್ಚಿನ ಮಾಹಿತಿಯ ಅಗತ್ಯವಿದೆ ಎಂದು ಹೇಳಿದ ನಂತರ ವಿಚಾರಣೆಯನ್ನು ಜನವರಿ 20 ರವರೆಗೆ ಮುಂದೂಡಲು ನ್ಯಾಯಾಲಯ ಒಪ್ಪಿಕೊಂಡಿತ್ತು.
ಈ ಹಿಂದಿನ ವಿಚಾರಣೆಯಲ್ಲಿ ನ್ಯಾಯಮೂರ್ತಿ ಗವಾಯಿ ನೇತೃತ್ವದ ವಿಶೇಷ ಪೀಠವು BEANT SINGH ರಾಜೋನಾ ಅವರ ಕ್ಷಮಾದಾನ ಅರ್ಜಿಯನ್ನು ನಿರ್ಧರಿಸಲು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿತ್ತು. ನ್ಯಾಯಮೂರ್ತಿ ಗವಾಯಿ ನೇತೃತ್ವದ ನ್ಯಾಯಪೀಠದ ಮುಂದೆ ಎಸ್ ಜಿ ಮೆಹ್ತಾ ತುರ್ತು ವಿಷಯ ಪ್ರಸ್ತಾಪ ಮಾಡಿದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಅಪ್ ಲೋಡ್ ಮಾಡದಿರಲು ಒಪ್ಪಿಕೊಂಡಿತು.
BEANT SINGH ರಾಜೋನಾ ಪರವಾಗಿ ಸಲ್ಲಿಸಲಾದ ಕ್ಷಮಾದಾನ ಅರ್ಜಿಯನ್ನು ಎರಡು ವಾರಗಳಲ್ಲಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ನವೆಂಬರ್ 18 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕೋರಿತ್ತು. ರಾಜೋನಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಮುರ್ಮು ಅವರ ಮುಂದೆ ಇಡುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ ಸೂಚಿಸಿದ್ದ ನ್ಯಾಯಾಲಯ, ಎರಡು ವಾರಗಳಲ್ಲಿ ರಾಜೋನಾ ಅವರ ಕ್ಷಮಾದಾನ ಅರ್ಜಿಯನ್ನು ಇತ್ಯರ್ಥಪಡಿಸದಿದ್ದರೆ, ಮಧ್ಯಂತರ ಬಿಡುಗಡೆಗಾಗಿ ಅವರ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿತ್ತು.
ತಮ್ಮ ಅನುಪಸ್ಥಿತಿಯಲ್ಲಿ ಹೊರಡಿಸಲಾದ ಆದೇಶದಲ್ಲಿ ಸೂಕ್ಷ್ಮ ವಿಚಾರಗಳಿರುವುದರಿಂದ ಆ ಆದೇಶಕ್ಕೆ ಸಹಿ ಮಾಡಬಾರದು ಮತ್ತು ಅದನ್ನು ಅಪ್ ಲೋಡ್ ಮಾಡಬಾರದು ಎಂದು ತುಷಾರ್ ಮೆಹ್ತಾ ವಿನಂತಿಸಿದ್ದರು. ರಾಜೋನಾ ಅವರ ಕ್ಷಮಾದಾನ ಅರ್ಜಿಗೆ ಸಂಬಂಧಿಸಿದ ಕಡತಗಳು ಕೇಂದ್ರ ಗೃಹ ಸಚಿವಾಲಯದಲ್ಲಿಯೇ ಹೊರತು ರಾಷ್ಟ್ರಪತಿಗಳ ಸಚಿವಾಲಯದಲ್ಲಿ ಅಲ್ಲ ಎಂದು ಮೆಹ್ತಾ ಹೇಳಿದರು.
ತನ್ನ ಮರಣದಂಡನೆಯನ್ನು ಕಡಿಮೆ ಮಾಡುವಂತೆ ಕೋರಿ ರಾಜೋನಾ ಸಲ್ಲಿಸಿದ್ದ ಮನವಿಯನ್ನು ಮೇ 2023 ರಲ್ಲಿ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು ಮತ್ತು ಇಂಥ ಸೂಕ್ಷ್ಮ ವಿಷಯಗಳ ಬಗ್ಗೆ ಕಾರ್ಯಾಂಗವೇ ನಿರ್ಧಿರುವುದು ಒಳ್ಳೆಯದು ಎಂದು ಹೇಳಿತ್ತು.ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಮತ್ತು ಕಾರ್ಯಗತಗೊಳಿಸಿದ್ದ ರಾಜೋನಾ ಮತ್ತು ಇತರ ಎಂಟು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಯಿತು.
ಜುಲೈ 2007 ರಲ್ಲಿ, ವಿಚಾರಣಾ ನ್ಯಾಯಾಲಯವು ರಾಜೋನಾ, ಸಹ ಆರೋಪಿಗಳಾದ ಜಗ್ತಾರ್ ಸಿಂಗ್ ಹವಾರಾ, ಗುರ್ಮೀತ್ ಸಿಂಗ್, ಲಖ್ವಿಂದರ್ ಸಿಂಗ್, ಶಂಶೇರ್ ಸಿಂಗ್ ಮತ್ತು ನಸೀಬ್ ಸಿಂಗ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು.1995ರ ಆಗಸ್ಟ್ ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಸೇರಿದಂತೆ 16 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೋನಾ ಅವರನ್ನು ಜನವರಿ 27, 1996 ರಂದು ಬಂಧಿಸಲಾಗಿತ್ತು.
ಇದನ್ನು ಓದಿರಿ : TRUMP INAUGURATION ON MONDAY : ಮೊದಲ ದಿನವೇ ಮಹತ್ವದ ಆದೇಶಕ್ಕೆ ಸಜ್ಜು