ಬಿಜೆಪಿ ಸದಸ್ಯರು ಸುಳ್ಳುಗಾರರು ಮತ್ತು ಅವರು ಅಧಿಕಾರದ ಅಮಲಿನಲ್ಲಿದ್ದಾರೆ ಎಂಬ ಆರೋಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ RAHUL GANDHIವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ವಿರೋಧ ಪಕ್ಷದ ನಾಯಕ (ಎಲ್ಒಪಿ) RAHUL GANDHI ವಿರುದ್ಧ ದಾಖಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ.
Rahul had filed an application in the Jharkhand High Court:ಜಾರ್ಖಂಡ್ ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ RAHUL GANDHI ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ವಿಶೇಷ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.
2018 ರಲ್ಲಿ ಬಿಜೆಪಿ ಕಾರ್ಯಕರ್ತ ನವೀನ್ ಝಾ ಎಂಬುವರು ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ RAHUL GANDHI ಜಾರ್ಖಂಡ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.ಆದರೆ ಜಾರ್ಖಂಡ್ ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.
Abhishek Manu Singhvi Argument for Rahul: RAHUL GANDHI ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅನ್ಯಾಯಕ್ಕೊಳಗಾದ ವ್ಯಕ್ತಿ ಮಾತ್ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಬಹುದು ಮತ್ತು ವಿಷಯಕ್ಕೆ ಸಂಬಂಧಪಡದವರು ದೂರು ದಾಖಲಿಸಲು ಸಾಧ್ಯವಿಲ್ಲ ಎಂದು ಹಲವಾರು ಬಾರಿ ನ್ಯಾಯಾಲಯಗಳು ತೀರ್ಪು ನೀಡಿವೆ ಎಂದು ಹೇಳಿದರು.
Four weeks time to respond to Singhvi’s argument:2018ರಲ್ಲಿRAHUL GANDHI ವಿರುದ್ಧ ನವೀನ್ ಝಾ ಎಂಬುವರು ಪ್ರಕರಣ ದಾಖಲಿಸಿದ್ದರು. ಸಿಂಘ್ವಿಯವರ ವಾದಕ್ಕೆ ಉತ್ತರಿಸಲು ನ್ಯಾಯಾಲಯವು ದೂರುದಾರ ನವೀನ್ ಝಾ ಮತ್ತು ಜಾರ್ಖಂಡ್ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿತು.
ಅಲ್ಲದೆ ಮುಂದಿನ ಆದೇಶದವರೆಗೆ RAHUL GANDHI ವಿರುದ್ಧ ಈ ಪ್ರಕರಣದಲ್ಲಿ ಯಾವುದೇ ವಿಚಾರಣೆ ನಡೆಸುವಂತಿಲ್ಲ ಎಂದು ಆದೇಶಿಸಿತು.ಕಳೆದ ವರ್ಷ ಫೆಬ್ರವರಿಯಲ್ಲಿ ಜಾರ್ಖಂಡ್ ಹೈಕೋರ್ಟ್
Related