spot_img
spot_img

SBI REPORT ON DBT SCHEME : ಮಹಿಳೆಯರಿಗೆ ‘ನಗದು’ ಯೋಜನೆಯಿಂದ ರಾಜ್ಯಗಳ ಆರ್ಥಿಕತೆಗೆ ಪೆಟ್ಟು

spot_img
spot_img

Share post:

Hyderabad/ New Delhi News:

ಮಹಿಳೆಯರಿಗೆ ನೀಡುತ್ತಿರುವ ನಗದು ನೆರವಿನಿಂದ ಆಯಾ ರಾಜ್ಯಗಳ ಆರ್ಥಿಕತೆಗೆ ಹಾನಿ ಉಂಟಾಗಿದೆ ಎಂದು ಎಸ್​​ಬಿಐ ತನ್ನ ಅಧ್ಯಯನ ವರದಿಯಲ್ಲಿ ತಿಳಿಸಿದೆ. ಕರ್ನಾಟಕ, ಒಡಿಶಾ, ಪಶ್ಚಿಮಬಂಗಾಳ, ತೆಲಂಗಾಣ, ದೆಹಲಿ ಸೇರಿದಂತೆ ಹಲವು ರಾಜ್ಯಗಳು ಮಹಿಳಾ ಅಭಿವೃದ್ಧಿ ಹೆಸರಿನಲ್ಲಿ ಆರ್ಥಿಕ ನೆರವು ನೀಡುವ ಭಾಗವಾಗಿ ಮಾಸಿಕ ಇಂತಿಷ್ಟು ನಗದು ನೀಡುವ ಯೋಜನೆಗಳನ್ನು ರೂಪಿಸಿವೆ.

SBI REPORT ON DBT SCHEME ಇದು ರಾಜ್ಯದ ಆರ್ಥಿಕತೆಗೆ ಹೊರೆಯಾಗಿದೆ ಎಂದು ಬ್ಯಾಂಕ್​ ನಡೆಸಿದ ಅಧ್ಯಯನ ವರದಿಯು ಉಲ್ಲೇಖಿಸಿದೆ.  ರಾಜಕೀಯ ಪಕ್ಷಗಳು ಮಹಿಳೆಯರಿಗಾಗಿ ರೂಪಿಸಿರುವ ‘ನಗದು ವರ್ಗಾವಣೆ’ ಯೋಜನೆಗಳು ಆಯಾ ರಾಜ್ಯಗಳ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರುತ್ತಿವೆ ಎಂದು SBI REPORT ON DBT SCHEME(ಎಸ್​ಬಿಐ) ವರದಿ ಹೇಳಿದೆ.

ಕೆಲವು ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಮತಗಳನ್ನು ಗಳಿಸುವ ಮತ್ತು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಯೋಜನೆಗಳನ್ನು ಘೋಷಿಸುತ್ತಿವೆ. SBI REPORT ON DBT SCHEME ನಗದು ವರ್ಗಾವಣೆ ಯೋಜನೆಗಳ ಸುನಾಮಿಯಿಂದ ಆಯಾ ರಾಜ್ಯಗಳ ಆರ್ಥಿಕತೆಗೆ ಪೆಟ್ಟು ಬಿದ್ದಿದೆ ಎಂದು ಎಸ್‌ಬಿಐ ಎಚ್ಚರಿಸಿದೆ. ದೇಶದ 8 ರಾಜ್ಯಗಳಲ್ಲಿ ಜಾರಿಯಾಗಿರುವ ಇಂತಹ ಯೋಜನೆಗಳಿಂದ ಅದರ ಒಟ್ಟು ಮೊತ್ತ 1.5 ಲಕ್ಷ ಕೋಟಿ ರೂಪಾಯಿ ದಾಟಿದೆ.

ಈ ಯೋಜನೆಯಿಂದ ಖರ್ಚಾಗುವ ಹಣವು ಆಯಾ ರಾಜ್ಯಗಳು ಗಳಿಸುವ ವಾರ್ಷಿಕ ಆದಾಯದ ಸರಿಸುಮಾರು ಶೇಕಡಾ 3 ರಿಂದ 11 ರಷ್ಟಿದೆ. ಇದರಿಂದ ಹಲವು ರಾಜ್ಯಗಳು ಸಾಲದ ಮೊರೆ ಹೋಗುತ್ತಿವೆ ಎಂದು ವರದಿ ತಿಳಿಸಿದೆ.

Odisha is the best among other states:

ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಒಡಿಶಾ ಈ ಯೋಜನೆಯನ್ನು ಉತ್ತಮ ರೀತಿಯಲ್ಲಿ ನಿಭಾಯಿಸುತ್ತಿದೆ ಎಂದು ಎಸ್​​ಬಿಐ ಹೇಳಿದೆ. SBI REPORT ON DBT SCHEMEಈ ಯೋಜನೆಗೆ ತಗುಲುವ ವೆಚ್ಚವನ್ನು ಅಲ್ಲಿನ ಸರ್ಕಾರವು ತೆರಿಗೆಯೇತರ ಆದಾಯದಿಂದ ಸರಿದೂಗಿಸಿಕೊಂಡಿದೆ. ಇದರಿಂದ ಅದು ಹೊಸ ಸಾಲ ಪಡೆಯುತ್ತಿಲ್ಲ ಎಂದು ವರದಿಯಲ್ಲಿ ಪ್ರಸ್ತಾಪಿಸಿದೆ.

How much is spent in which state?

  • ಕರ್ನಾಟಕದಲ್ಲಿ ‘ಗೃಹಲಕ್ಷ್ಮಿ ಯೋಜನೆ’ಗೆ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ 2 ಸಾವಿರ ರೂಪಾಯಿ ನೀಡಲಾಗುತ್ತಿದೆ. ಇದಕ್ಕಾಗಿ ಒಂದು ವರ್ಷಕ್ಕೆ 28,608 ಕೋಟಿ ರೂಪಾಯಿ ವ್ಯಯವಾಗುತ್ತಿದೆ. ಇದು ರಾಜ್ಯದ ಆದಾಯದ ಶೇ.11 ರಷ್ಟಿದೆ.
  • ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ‘ಲಕ್ಷ್ಮಿ ಭಂಡಾರ್ ಯೋಜನೆ’ಯ ಮೂಲಕ ಮಾಸಿಕ 1 ಸಾವಿರ ರೂಪಾಯಿ ನೀಡಲಾಗುತ್ತದೆ. ಇದಕ್ಕಾಗಿ ವಾರ್ಷಿಕ 14,400 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ಇದು ರಾಜ್ಯದ ಆದಾಯದ ಶೇಕಡಾ 6 ರಷ್ಟಿದೆ.
  • ದೆಹಲಿಯ ಎಎಪಿ ಸರ್ಕಾರವು ‘ಮಹಿಳಾ ಸಮ್ಮಾನ್ ಯೋಜನೆ’ ಮೂಲಕ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿದೆ. ಇದಕ್ಕಾಗಿ 2 ಸಾವಿರ ಕೋಟಿ ಖರ್ಚಾಗಲಿದೆ. ಇದು ದೆಹಲಿಯ ವಾರ್ಷಿಕ ಆದಾಯದ 3 ಪ್ರತಿಶತಕ್ಕೆ ಸಮಾನವಾಗಿದೆ.

Centre-State Joint Scheme:

ವಿವಿಧ ರಾಜ್ಯಗಳಲ್ಲಿ ಮಹಿಳೆಯರಿಗೆ ರೂಪಿಸಿರುವ ಇಂತಹ ಯೋಜನೆಗಳ ಜನಪ್ರಿಯತೆಯಿಂದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಿದೆ. ಮಹಿಳೆಯರಿಗಾಗಿ ಇಂತಹ ನಗದು ವರ್ಗಾವಣೆ ಯೋಜನೆ ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರವೂ ಚಿಂತಿಸಿದೆ ಎಂದು ಎಸ್‌ಬಿಐ ವರದಿ ತಿಳಿಸಿದೆ. SBI REPORT ON DBT SCHEMEಕೇಂದ್ರ ಮತ್ತು ರಾಜ್ಯಗಳು ಪ್ರತ್ಯೇಕವಾಗಿ ಹಣ ನೀಡುವ ಬದಲು, ರಾಷ್ಟ್ರೀಯ ಮಟ್ಟದಲ್ಲಿ ‘ಸಾರ್ವತ್ರಿಕ ನಗದು ವರ್ಗಾವಣೆ ಯೋಜನೆ’ಯನ್ನು ಜಾರಿಗೆ ತರುವುದು ಉತ್ತಮ ಎಂದು ಎಸ್‌ಬಿಐ ಅಭಿಪ್ರಾಯಪಟ್ಟಿದೆ. ಇದಕ್ಕಾಗಿ ರಾಜ್ಯಗಳು ಮತ್ತು ಕೇಂದ್ರ ಸರ್ಕಾರ ಸಮಾನವಾಗಿ ಅನುದಾನ ನೀಡಿದಲ್ಲಿ, ರಾಜ್ಯಗಳು ಸಾಲದ ಸುಳಿಗೆ ಸಿಲುಕುವುದು ತಪ್ಪುತ್ತದೆ ಎಂದು ವರದಿಯಲ್ಲಿ ವಿಶ್ಲೇಷಿಸಲಾಗಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...