spot_img
spot_img

ತಿರುಪತಿಯಲ್ಲಿ ರಾಜಕೀಯಕ್ಕೆ ಲಗಾಮು ಹಿಂದೂಯೇತರ ಸಿಬ್ಬಂದಿಗೆ ಗೇಟ್​​ಪಾಸ್

spot_img
spot_img

Share post:

ತಿರುಪತಿ (ಆಂಧ್ರಪ್ರದೇಶ): ಹಲವು ಅಪಭ್ರಂಶುಗಳಿಗೆ ಕಾರಣವಾಗಿದ್ದ ಹಿಂದೂಗಳ ಪವಿತ್ರ ಕ್ಷೇತ್ರವಾದ ತಿರುಪತಿ ದೇವಸ್ಥಾನದ ಶುದ್ಧೀಕರಣ ಮುಂದುವರಿದಿದೆ. ದೇವಸ್ಥಾನದ ಆವರಣದಲ್ಲಿ ರಾಜಕೀಯ ಭಾಷಣಕ್ಕೆ ಕಡ್ಡಾಯ ನಿಷೇಧ, ಹಿಂದುಯೇತರ ಸಿಬ್ಬಂದಿಗೆ ನಿವೃತ್ತಿ ಯೋಜನೆ​​, ಭಕ್ತರಿಗೆ 2 ಗಂಟೆಯಲ್ಲಿ ದೇವರ ದರ್ಶನ ಒದಗಿಸಲು ಯೋಜಿಸಲಾಗಿದೆ.

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ನೂತನ ಅಧ್ಯಕ್ಷ ಬಿ.ಆರ್. ನಾಯ್ಡು ಅವರ ನೇತೃತ್ವದಲ್ಲಿ ಟ್ರಸ್ಟ್​​ನ ಮೊದಲ ಸಭೆ ನಡೆಸಲಾಗಿದ್ದು, ಮಹತ್ವದ 28 ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ನೂತನ ಅಧ್ಯಕ್ಷ ಬಿ.ಆರ್. ನಾಯ್ಡು ಅವರ ನೇತೃತ್ವದಲ್ಲಿ ಸೋಮವಾರ ನಡೆದ ಟ್ರಸ್ಟ್​​ನ ಮೊದಲ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ತಿರುಪತಿಯ ಪ್ರಸಿದ್ಧ ಲಡ್ಡುಗಳ ತಯಾರಿಕೆಯಲ್ಲಿ ಕಲಬೆರಕೆ ಮಾಡಲಾಗಿದೆ ಎಂಬ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ತಿರುಪತಿ ಪ್ರಸಾದದ ವಿವಾದದ ಬಳಿಕ ದೇವಸ್ಥಾನದ ಟ್ರಸ್ಟ್​​ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ.

ತಿಮ್ಮಪ್ಪನ ದೇವಸ್ಥಾನದ ಆವರಣದಲ್ಲಿ ಯಾರೇ ಆಗಲಿ ರಾಜಕೀಯ ಭಾಷಣ ಮಾಡುವಂತಿಲ್ಲ. ರಾಜಕೀಯ ವಿಚಾರಗಳನ್ನು ಹಂಚಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಿ ಸಭೆಯು ಮಹತ್ವದ ನಿರ್ಧಾರ ಕೈಗೊಂಡಿದೆ.

ಹಾಗೊಂದು ವೇಳೆ ಯಾರಾದರೂ ನಿಯಮ ಮೀರಿದಲ್ಲಿ ಅವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ. ಜೊತೆಗೆ, ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಮುಮ್ತಾಜ್ ಹೋಟೆಲ್‌ನ ಅನುಮತಿ ರದ್ದು ಮಾಡಲಾಗಿದೆ.

ದೇವಸ್ಥಾನದಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸಕ್ಕೆ ನೇಮಿತವಾಗಿರುವ ಹಿಂದೂಯೇತರ ಸಿಬ್ಬಂದಿಯನ್ನು ಕೈಬಿಟ್ಟು, ಹಿಂದುಗಳನ್ನು ಮಾತ್ರ ನೇಮಿಸಬೇಕು ಎಂಬ ಬೇಡಿಕೆಗೆ ಟಿಟಿಡಿ ಸ್ಪಂದಿಸಿದೆ. ಈಗಿರುವ ಹಿಂದೂಯೇತರ ಸಿಬ್ಬಂದಿಗೆ ಸ್ವಯಂ ನಿವೃತ್ತಿ ಯೋಜನೆ (ವಿಆರ್​ಎಸ್​) ಜಾರಿಗೆ ತರಲಾಗುವುದು ಟಿಟಿಡಿ ಘೋಷಿಸಿದೆ.

ತಿಮ್ಮಪ್ಪನ ದರ್ಶನಕ್ಕಾಗಿ ಭಕ್ತರು ದಿನಗಟ್ಟಲೇ ಕಾಯುವುದನ್ನು ತಪ್ಪಿಸಲು ಟಿಟಿಡಿ ಮಾಸ್ಟರ್​ ಪ್ಲಾನ್​​ ಮಾಡಿದೆ. 2-3 ಗಂಟೆಯೊಳಗೆ ಎಲ್ಲ ಭಕ್ತರಿಗೆ ದರ್ಶನಾವಕಾಶ ಸಿಗುವಂತಾಗಲು ಕೃತಕ ಬುದ್ಧಿಮತ್ತೆ(ಎಐ) ಬಳಸಿಕೊಳ್ಳಲು ಯೋಜಿಸಲಾಗಿದೆ.

ಪ್ರತಿ ತಿಂಗಳ ಮೊದಲ ಮಂಗಳವಾರದಂದು ಸ್ಥಳೀಯ ನಿವಾಸಿಗಳಿಗೆ ವಿಶೇಷ ದರ್ಶನ
ಆಂಧ್ರಪ್ರದೇಶ ಮತ್ತು ತೆಲಂಗಾಣದ ದೇವಾಲಯಗಳ ಅಭಿವೃದ್ಧಿಗೆ ದೇಣಿಗೆ ನೀಡಲು ರೂಪಿಸಿದ ವೆಂಕಟೇಶ್ವರ ದೇವಾಲಯ ನಿರ್ಮಾಣಂ (ಶ್ರೀವಾಣಿ) ಟ್ರಸ್ಟ್ ಟಿಟಿಡಿಯಲ್ಲಿ ವಿಲೀನ
ಟಿಟಿಡಿ ನೌಕರರ ಕೊಡುಗೆಯನ್ನು ಗುರುತಿಸಲು ‘ಬ್ರಹ್ಮೋತ್ಸವ ಬಹುಮಾನ’
ಟಿಟಿಡಿ ಠೇವಣಿಗಳ ಸುರಕ್ಷತೆಗಾಗಿ ಖಾಸಗಿ ಬ್ಯಾಂಕ್‌ಗಳಲ್ಲಿ ಈಗಾಗಲೇ ಇಟ್ಟಿರುವ ಹಣವನ್ನು ಹಿಂಪಡೆದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲು ನಿರ್ಧಾರ
ಲಡ್ಡು ಪ್ರಸಾದ ತಯಾರಿಕೆಯಲ್ಲಿ ಹೆಚ್ಚಿನ ಗುಣಮಟ್ಟದ ತುಪ್ಪ ಬಳಕೆ
ಭಕ್ತರಿಗಾಗಿ ತಿರುಮಲದ ಅನ್ನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಪ್ರತಿದಿನ ಮೆನುವಿನಲ್ಲಿ ಮತ್ತೊಂದು ರುಚಿಕರವಾದ ಪಾಕ ಸೇವಿಸಬೇಕು ಎಂದು ಹೇಳಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...