spot_img
spot_img

MASS PADA POOJA: ಮಕ್ಕಳಲ್ಲಿ ದೇಶಿ ಸಂಸ್ಕೃತಿ ಬೆಳೆಸುತ್ತಿರುವ ಶಾಲೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Shimoga News :

ಹೊಸ ವರ್ಷ ಅಂದರೆ ಮಕ್ಕಳು ವಿದೇಶಿ ಸಂಸ್ಕೃತಿಯಂತೆ ಕೇಕ್​​​ ಕತ್ತರಿಸಿ ಆಚರಿಸುವುದು ಸಾಮಾನ್ಯ. ಆದರೆ ಇದಕ್ಕೆ ತದ್ ವಿರುದ್ಧವಾಗಿ ರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ ಜನವರಿ 1ರಂದು ವಿದ್ಯಾರ್ಥಿಗಳಿಂದ ಅವರ ತಂದೆ-ತಾಯಂದಿರ ಅಥವಾ ಪೋಷಕರ ಪಾದಪೂಜೆಯನ್ನು ಮಾಡಲಾಗುತ್ತದೆ. ಶಾಲೆಯ ಪ್ರತಿಯೊಂದು ಮಕ್ಕಳು ಪಾದಪೂಜೆಯಲ್ಲಿ ಭಾಗವಹಿಸುವುದು ಇದರ ವಿಶೇಷವಾಗಿದೆ.

ಕಣ್ಣಿಗೆ ಕಾಣುವ ದೇವರು ಅಂದರೆ ತಂದೆ-ತಾಯಿ. ಮಕ್ಕಳಿಗೆ ತಮ್ಮ ಪೋಷಕರ ಬಗ್ಗೆ ಗೌರವ, ಅವರ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನಗರದ ಅನುಪಿನಕಟ್ಟೆ ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲ ವಸತಿ ಶಾಲೆಯಲ್ಲಿ ಬುಧವಾರ (ಜನವರಿ 1) ಪಾದಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮೊದಲು ತಟ್ಟೆಯಲ್ಲಿ ಪೋಷಕರ ಕಾಲುಗಳನ್ನು ಸ್ವಚ್ಛವಾಗಿ ತೊಳೆಯುತ್ತಾರೆ. ನಂತರ ವಿಭೂತಿ ಅರಿಶಿಣ ಕುಂಕುಮ ಹಚ್ಚುತ್ತಾರೆ.ಪಾದಗಳಿಗೆ ಹೂವುಗಳನ್ನಿಟ್ಟು ಮಂತ್ರದ ಸಮೇತ ಅಗರಬತ್ತಿಯಿಂದ ಪೂಜೆ ಮಾಡುತ್ತಾರೆ.

ಪೋಷಕರು ಮಕ್ಕಳು ಚೆನ್ನಾಗಿ ಓದಲಿ ಎಂದು ಕಂಕಣ ಕಟ್ಟುತ್ತಾ ತಮ್ಮ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತಾರೆ.ಪಾದಪೂಜೆಗೆ ಪೋಷಕರು ಕಡ್ಡಾಯವಾಗಿ ಭಾಗವಹಿಸುತ್ತಾರೆ. ಮಕ್ಕಳು ಶಾಲೆಯ ಗುರುಗಳು ಹೇಳಿದಂತೆ ಪೂಜೆ ಮಾಡುತ್ತಾರೆ. ಅವರೇ ಪೂಜೆಯ ಎಲ್ಲಾ ಸಾಮಗ್ರಿಗಳನ್ನು ನೀಡುತ್ತಾರೆ. ಬಳಿಕ ಶಾಲೆಯಲ್ಲಿ ಪಾಠ, ಆಟೋಟಗಳಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಬಹುಮಾನವನ್ನು ನೀಡಲಾಗುತ್ತದೆ.

ಈ ಪಾದಪೂಜೆಯು ಕಳೆದ 20 ವರ್ಷಗಳಿಂದ ನಡೆದುಕೊಂಡು ಬಂದಿದೆ. ಪಾದಪೂಜೆಗೆ ಪ್ರತಿ ವರ್ಷ ಇದೇ ಶಾಲೆಯಲ್ಲಿ ಓದಿ ಉದ್ಯೋಗದಲ್ಲಿ ಇರುವ ಹಳೆಯ ವಿದ್ಯಾರ್ಥಿಗಳನ್ನು ಕರೆಯಿಸಿ ಅವರಿಂದ ಸ್ಫೂರ್ತಿದಾಯಕ ಭಾಷಣವನ್ನು ಮಾಡಿಸಲಾಗುತ್ತದೆ. ಅಲ್ಲದೆ ಜಿಲ್ಲೆಯ ವಿವಿಧ ಮಠಾಧೀಶರನ್ನು ಕರೆಯಿಸಿ ಆಶೀರ್ವಾದ ಮಾಡಿಸಲಾಗುತ್ತದೆ.ಪಾದಪೂಜೆಯ ಮುಖ್ಯ ಉದ್ದೇಶ ಎಂದರೆ, ಮಕ್ಕಳು ಪೋಷಕರನ್ನು ಕಡೆಗಣಿಸುವುದನ್ನು ತಡೆಯಲು, ಮಕ್ಕಳಿಗೆ ವಿದ್ಯೆಯ ಜೊತೆ ನೈತಿಕ ಶಿಕ್ಷಣವನ್ನು ನೀಡಬೇಕು.

ಮಕ್ಕಳ ಕರ್ತವ್ಯ, ಬಾಧ್ಯತೆಗಳೇನು ಎಂಬುದನ್ನು ತಿಳಿಸಿಕೊಡುವುದು. ತಂದೆ- ತಾಯಿ ಮಕ್ಕಳ ಸಂಬಂಧವನ್ನು ಗಟ್ಟಿಗೊಳಿಸುವುದು ಪಾದಪೂಜೆಯ ಘನ ಉದ್ದೇಶವಾಗಿದೆ”.ಶಾಲೆಯಲ್ಲಿ ನಡೆದುಕೊಂಡು ಬಂದಿರುವ ಪಾದಪೂಜೆಯ ಕುರಿತು ಶಾಲೆಯ ಮುಖ್ಯಸ್ಥರಾದ ಶೋಭ ವೆಂಕಟರಮಣ ಅವರು ಹೇಳುವುದು ಹೀಗೆ.. ” ಪ್ರತಿ ವರ್ಷ ನಮ್ಮ ಶಾಲೆಯಲ್ಲಿ ಜನ್ಮದಾತರಿಗೆ ಪಾದಪೂಜೆ ನಡೆಸಲಾಗುತ್ತದೆ.

ಈ ಪಾದಪೂಜೆಯನ್ನು 2005-06 ರಿಂದ ನಮ್ಮ ಶಾಲೆ ಸಂಸ್ಥಾಪಕರಾದ ವೆಂಕಟರಮಣ ಅವರು ಪ್ರಾರಂಭಿಸಿದರು.‌”ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಕಡಿಮೆ ಮಾಡಲು, ನಮ್ಮ ಮಕ್ಕಳಲ್ಲಿ ತಂದೆ-ತಾಯಿಗಳ ಬಗ್ಗೆ ಪ್ರೀತಿ ಹೆಚ್ಚಿಸುವ ಕುರಿತು ಮಕ್ಕಳಿಗೆ ಶಿಕ್ಷಣ ನೀಡಿದರೆ, ಭವಿಷ್ಯದಲ್ಲಿ ತಮ್ಮ ತಂದೆ-ತಾಯಿಯನ್ನು ಚೆನ್ನಾಗಿ‌ ನೋಡಿಕೊಳ್ಳುತ್ತಾರೆ. ಮುಂದೆ ಈ ಮಕ್ಕಳು ಸಮಾಜದಲ್ಲಿ ಮಾದರಿಯಾಗಿರುತ್ತಾರೆ ಎಂಬ ಉದ್ದೇಶದಿಂದ ಪಾದಪೂಜೆ ನಡೆಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

ಈ ಒಂದು ಅಂಶವನ್ನು ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಅಳವಡಿಸಿಕೊಂಡಿದೆ. ಈಗ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬರಬೇಕು ಎಂಬುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಈ ಶಾಲೆಯಲ್ಲಿ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುತ್ತಿದ್ದಾರೆ.

ಶಾಲೆ
ಶಾಲೆ

ಇದು ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಜಾಗೃತಿ ಮೂಡುವಂತಹ ಕಾರ್ಯಕ್ರಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಮಾತ್ರ ನಡೆಸಲಾಗುತ್ತದೆ. ಈ ಶಾಲೆಯಲ್ಲಿ ಓದುತ್ತಿರುವುದು ನನಗೆ ತುಂಬ ಸಂತೋಷವಾಗಿದೆ. ನಾನು ಪೋಷಕರ ಕಾಲನ್ನು ತೊಳೆದು, ಅರಿಶಿಣ, ಕುಂಕುಮ ಹಚ್ಚಿ, ಹೂವು ಇಟ್ಟು ಮಂತ್ರದ ಸಮೇತ ಪೂಜೆ ಮಾಡಿದ್ದು ಉತ್ತಮ ಸಂಸ್ಕಾರ ಕಲಿಸುತ್ತದೆ” ಸಂತಸ ಹಂಚಿಕೊಂಡರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...