spot_img
spot_img

ಅರುಣಾಚಲೇಶ್ವರ ದೇವಸ್ಥಾನದ ಬಳಿ ಘನಘೋರ ದುರಂತ

spot_img
spot_img

Share post:

ಫೆಂಗಲ್ ಚಂಡಮಾರುತದಿಂದ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗಿದ್ದು, ತಿರುವಣ್ಣಾಮಲೈ, ವಿಲ್ಲುಪುರಂ, ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.

ನಿರಂತರ ಮಳೆಯು ವಿನಾಶಕಾರಿ ಬಂಡೆಗಳ ಕುಸಿತಕ್ಕೆ ಕಾರಣವಾಯ್ತು. ಕೆಸರು ನೀರು ಮಿಶ್ರಣಗೊಂಡು ಬಂದ ವೇಗಕ್ಕೆ ಸಿಕ್ಕ ಸಿಕ್ಕಿದ್ದೆನ್ನೆಲ್ಲಾ ನುಂಗಿ ಬೆಚ್ಚಿಬೀಳುವಂತೆ ಮಾಡ್ತು.. ಭಯಬೀತರಾಗಿ ಮನೆಯಿಂದ ಹೊರ ಬಂದ ಮಹಿಳೆ ಗುಡ್ಡದ ಕಡೆಗೆ ನೋಡಿ.. ಕಾಪಾಡೋ ಭಗವಂತ ಅಂತಾ ಕೈ ಮುಗಿದು ಬೇಡಿಕೊಂಡಿದ್ದಾರೆ.

ಫೆಂಗಲ್‌ ಸೈಕ್ಲೋನ್‌ ಆರ್ಭಟಕ್ಕೆ ತಮಿಳುನಾಡು ತತ್ತರಿಸಿದೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಭೂ ಕುಸಿತ ಒಂದೇ ಕುಟುಂಬದ ಏಳು ಜನರನ್ನ ಕೊಂದು ಮುಗಿಸಿದೆ.

ಇನ್ನೂ ಸಹ ರಕ್ಷಣಾ ಕಾರ್ಯಾಚರಣೆ ಸಾಗ್ತಿದೆ. ಅರುಣಾಚಲೇಶ್ವರ ದೇವಸ್ಥಾನದ ಬಳಿಯ ಗುಡ್ಡದಿಂದ ಮನೆಗಳ ಮೇಲೆ ಬಂಡೆಗಳು ಉರುಳಿಬಿದ್ದಿದ್ದ ಭಯಾನಕ ಕ್ಷಣದ ದೃಶ್ಯಗಳು ಸಿಸಿವಿಟಿಯಲ್ಲಿ ಸೆರೆ.

ಮಣ್ಣಿನಡಿ ಸಿಲುಕಿರುವ ಇತರರಿಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ಕಮಾಂಡೋ, ತಮಿಳುನಾಡಿನ ಅಗ್ನಿ ಶಾಮಕ ದಳದ ಕಾರ್ಯಾಚರಣೆ ಮುಂದುವರೆದಿದೆ.

ಬೃಹತ್ ಗಾತ್ರದ ಕಲ್ಲುಗಳು ಇರುವುದರಿಂದ ಸಂತ್ರಸ್ತರ ಪತ್ತೆ ಹಚ್ಚಲು ಸ್ಕ್ಯಾನಿಂಗ್ ಯಂತ್ರಕ್ಕೆ ಕಷ್ಟವಾಗುತ್ತಿದೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಗುಡ್ಡ ಕುಸಿತದ ಸ್ಥಳಕ್ಕೆ ಸಚಿವ ಪೊನ್ಮುಡಿ ಭೇಟಿ ನೀಡಿದ್ದ ವೇಳೆ.. ಕೆಲವರು ಕೆಸರೆರೆಚಿದ ಘಟನೆ ನಡೆದಿದೆ. ಇದಕ್ಕೆ ವಿಪಕ್ಷಗಳೇ ಕಾರಣ ಎಂದು ಸಚಿವ ಪೊನ್ಮುಡಿ ಪ್ರತಿಕ್ರಿಯೆ ನೀಡಿದ್ದಾರೆ.

ತಿರುವಣ್ಣಾಮಲೈನ ಸಂತ್ರಸ್ತರ ಸಂಬಂಧಿಕರನ್ನ ಚಿನ್ನಮ್ಮ ಶಶಿಕಲಾ ಭೇಟಿ ಮಾಡಿದ್ದಾರೆ. ಸಾಂತ್ವನ ಹೇಳಲು ಹೋದಾಗ ಸಂತ್ರಸ್ತರ ಅಳಲನ್ನ ಕಂಡು ಅವರು ಕಣ್ಣೀರಿಟ್ರು.

ವಿಲ್ಲುಪುರಂನ ಆಯುರ್ ಅಕಾರಂ ಪ್ರವಾಹ ಪರಿಹಾರ ಕಾರ್ಯಕ್ಕೆ ವೇಗ ನೀಡುವಂತೆ ಆಗ್ರಹಿಸಿ ಗ್ರಾಮಸ್ಥರು ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಗಂಟೆಗಳ ಕಾಲ ಚಲಿಸದೆ ವಾಹನಗಳು ನಡುರಸ್ತೆಯಲ್ಲಿಯೇ ನಿಂತಿದ್ದವು.

ಫೆಂಗಲ್ ಚಂಡಮಾರುತ ಸೃಷ್ಟಿಸಿರೋ ಅನಾಹುತದಿಂದಾಗಿ ತಮಿಳುನಾಡಿನ ರಾಜಧಾನಿ ಚೆನ್ನೈ ತತ್ತರಿಸಿದೆ. ಅಪಾರ್ಟ್​ಮೆಂಟ್​ಗಳು ಜಲಾವೃತವಾಗಿದೆ.. ಹಾಗೆ ಜಲಾವೃತವಾದ ಅಪಾರ್ಟ್​ಮೆಂಟ್ ಮುಂದೆ ಇರೋ ಜಾಗದಲ್ಲಿ ನೀರು ನಿಂತು ಹೊರ ಬಾರಲಾರದೇ ಜನ ಸಂಕಷ್ಟ ಅನುಭವಿಸ್ತಿದ್ದಾರೆ. ಆದರೆ ಇಲ್ಲಿ ಅಜ್ಜನೊಬ್ಬ ತನ್ನ ಮೊಮ್ಮಕ್ಕಳ ಜೊತೆ ನೀರನಲ್ಲಿ ಹೇಗೆ ಆಟವಾಡಿದ್ದಾರೆ.

ಕತ್ತಿನ ಆಳದ ಪ್ರವಾಹದಲ್ಲಿ ಸಿಲುಕಿದ್ದ ಶಿಶುವನ್ನು ಯುವಕನೊಬ್ಬ ಬುಟ್ಟಿಯಲ್ಲಿ ಹೊತ್ತು ತಂದ ರಕ್ಷಿಸಿದ ಘಟನೆ ತಿರುಕೋವಿಲೂರ್​ನಲ್ಲಿ ಸೆರೆಯಾಗಿದೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸರ್ಕಾರ ಭೂಕುಸಿತದಿಂದ ಮೃತಪಟ್ಟ ಕುಟುಂಬದವರಿಗೆ ₹ 5 ಲಕ್ಷ ಪರಿಹಾರ ಮತ್ತು ವಿಲ್ಲುಪುರಂ, ಕಡಲೂರು ಮತ್ತು ಕಲ್ಲಕುರಿಚಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರತಿ ಕುಟುಂಬಕ್ಕೆ ₹ 2,000 ಪರಿಹಾರವನ್ನ ಘೋಷಿಸಿದೆ.

ಇದರ ಜೊತೆಗೆ ಕೇಂದ್ರವೂ ಕೂಡ ತಾನು ನೆರವು ನೀಡೋದಾಗಿ ಭರವಸೆ ಕೊಟ್ಟಿದೆ. ಫೆಂಗಲ್​ ಅಬ್ಬರ ಕಡಿಮೆಯಾದ್ರೂ ಕೂಡ, ಅದು ಸೃಷ್ಟಿಸಿ ಹೋಗಿರುವ ಅವಾಂತರಗಳು ನಿಜಕ್ಕೂ ಬೆಚ್ಚಿಬೀಳಿಸುವಂತಿವೆ.

ಸೇಲಂ ಜಿಲ್ಲೆಯ ಓಮಲೂರ್ ಭಾಗದ ಸರಬಂಗಾ ನದಿಯು ಉಕ್ಕಿ ಹರಿದಿದ್ದು, ಜನರು ಪ್ರವಾಹದಲ್ಲಿ ಸಿಲುಕಿದ್ರು.. ಸಂತ್ರಸ್ತರನ್ನ ಕ್ರೇನ್ ಮೂಲಕ ಅಗ್ನಿಶಾಮಕ ದಳದಿಂದ ರಕ್ಷಣೆ ಮಾಡಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...