spot_img
spot_img

ಸಿಎಂ ಕೂತಿದ್ದ ವೇದಿಕೆಗೆ ನುಗ್ಗಿದ ಯುವಕ ; ವಿಧಾನಸೌಧದ ಆವರಣದಲ್ಲೇ ನಡೆದ್ದಿದ ಘಟನೆ!

spot_img
spot_img

Share post:

ಬೆಂಗಳೂರು: ವಿಧಾನಸೌಧ (Vidhana Soudha) ಮುಂದೆಯೇ ಭದ್ರತಾ ವೈಫಲ್ಯ ನಡೆದಿರುವ ಘಟನೆ ಇಂದು ನಡೆದಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲೇ ಭದ್ರತಾ ಲೋಪ ಎದುರಾಗಿದ್ದು, ಏಕಾಏಕಿ ಯುವಕನೋರ್ವ ಸಿಎಂ ಬಳಿ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.

ಸಚಿವ ಮಹದೇವಪ್ಪ (Minister Mahadevappa) ಮಾತನಾಡುತ್ತಿದ್ದ ವೇಳೆ ಯುವನೋರ್ವ ಏಕಾಏಕಿ ವೇದಿಕೆ ಮುಂಭಾಗದಿಂದ ಹಾರಿ ವೇದಿಕೆ ಮೇಲೆ ಬರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೂಡಲೇ ಸ್ಥಳದಲ್ಲಿದ್ದ ರಕ್ಷಣಾ ಸಿಬ್ಬಂದಿ (Security Personnel) ಯುವಕನನ್ನು ವಶಕ್ಕೆ ಪಡೆದುಕೊಂಡು ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ : ಸಂತೋಷದ ಸುದ್ದಿ ಸುಮಲತಾ ಅಂಬರೀಶ್ ಅವರಿಗೆ, ಅಜ್ಜಿ ಆಗುವರಿದ್ದಾರೆ; ಸೊಸೆ ಗರ್ಭಿಣಿ ಸುದ್ದಿ.!

ಇವತ್ತು ವಿಧಾನಸೌಧದ ಎದುರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಏಕಾಏಕಿ ಯುವ ಜಂಪ್‌ ಮಾಡಿ ವೇದಿಕೆಗೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸೇರಿ ವೇದಿಕೆ ಮೇಲಿದ್ದ ಗಣ್ಯರು ತಬ್ಬಿಬ್ಬಾಗಿದ್ದರು.

ಕೂಡಲೇ ಸಿಎಂ ಅಂಗರಕ್ಷಕರು ಯುವಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಯುವಕನನ್ನು ವಶಕ್ಕೆ ಪಡೆದರೂ ಆತನ ಸಿಎಂ ಕಡೆಗೆ ಶಾಲು ಎಸೆದು ಅಲ್ಲಿಂದ ಹೋಗಿದ್ದಾನೆ. ವಿಧಾನಸೌಧದ ಆವರಣದಲ್ಲೇ ಘಟನೆ ನಡೆದಿದ್ದು, ಸಿಎಂ ಕಾರ್ಯಕ್ರಮದಲ್ಲೇ ಭದ್ರತಾ ಲೋಪ ಘಟನೆ ನಡೆದಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ವೇದಿಕೆ ಆಗಮಿಸಿದ ಯುವಕ ಯಾರು? ಯಾಕೆ ವೇದಿಕೆ ಬಂದ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕ ಕರ್ನಾಟಕದ ಬಾವುಟದ ಬಣ್ಣ ಇರುವ ಟಾವೆಲ್​ ಹೆಗಲ ಮೇಲೆ ಹಾಕಿಕೊಂಡಿರುವುದು ದೃಶ್ಯಗಳಲ್ಲಿ ಕಂಡು ಬರುತ್ತದೆ.

ಇದೇ ಮೊದಲೇನು ಅಲ್ಲ? ಸಿಎಂ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಭದ್ರತಾ ಲೋಪ ಆಗಿಲ್ಲ. ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಬೆಂಗಳೂರಿನಲ್ಲಿ ರೋಡ್​ ಶೋ ಮಾಡುವ ವೇಳೆ ತೆರೆದ ವಾಹನದ ಮೇಲೆ ಹತ್ತಿ ಸಿಎಂ ಅವರಿಗೆ ಹೂವಿನ ಹಾರ ಯತ್ನಿಸಿದ್ದರು. ಆದರೆ ಈ ವೇಳೆ ಆತನ ಸೊಂಟದಲ್ಲಿ ಗನ್ ಕಂಡು ಬಂದಿತ್ತು. ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು.

ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು..

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಅವರು, ಕರ್ನಾಟಕದಲ್ಲಿ ಪೊಲೀಸ್ ಇಲಾಖೆಗೆ ಜೀವ ಇದೆಯೋ ಇಲ್ಲವೋ ಎಂದು ಸಂದೇಹಿಸಿದ್ದಾರೆ. ವಿಧಾನಸೌಧದಲ್ಲಿ ಓರ್ವ ವೇದಿಕೆಗೆ ನುಗ್ಗಿ ಬರ್ತಾನೆ ಎಂದರೆ ಹಲವು ಪ್ರಶ್ನೆಗಳು ಎದುರಾಗುತ್ತಿದೆ. ಸಿಎಂ ಅಂಗರಕ್ಷಕರು ಏನು ಮಾಡುತ್ತಿದ್ದಾರೆ, ಪೊಲೀಸರು ಏನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕೆಲವೇ ದಿನಗಳ ಹಿಂದೆ ಬಾಂಬ್ ಬ್ಲಾಸ್ಟ್ ಆಗಿತ್ತು, ಬಿಜೆಪಿ ಕಚೇರಿ ಬ್ಲಾಸ್ಟ್​ ಮಾಡಲು ಸಂಚು ಮಾಡಿದ್ದರು.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...