ಕೇರಳ : ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯು ಭಕ್ತರು ದೇವರ ದರ್ಶನಕ್ಕೆ ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು ಎಂದು ಸೂಚನೆ ನೀಡಿದೆ.
ಕಾರ್ತಿಕ ಮಾಸದಲ್ಲಿ ಮಾಲೆ ಧರಿಸುವ ಸ್ವಾಮಿಗಳ ಸಂಖ್ಯೆಯೂ ಅಧಿಕವಾಗಿರುವ ಕಾರಣ, ನಿಯಂತ್ರಿಸಲು ಆಧಾರ್ ಕಾರ್ಡ್ ಅನ್ನು ಭಕ್ತರಿಗೆ ಕಡ್ಡಾಯಗೊಳಿಸಲಾಗಿದೆ ಎಂದು ತಿರುವಾಂಕೂರು ದೇವಸ್ಥಾನ ಮಂಡಳಿ ಹೇಳಿದೆ.
ಪ್ರತಿದಿನ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ 70 ಸಾವಿರ ಭಕ್ತರಿಗೆ ಅವಕಾಶವಿದೆ. ಮಕರವಿಳಕ್ಕು ಋತುವಿನ ಪ್ರಕಾರ ಆನ್ಲೈನ್ ಬುಕಿಂಗ್ ಆಧಾರದ ಮೇಲೆ ಈ ಪ್ರಮಾಣದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ತ್ವರಿತ ಬುಕಿಂಗ್ ಆಧಾರದ ಮೇಲೆ ಇನ್ನೂ 10 ಸಾವಿರ ಭಕ್ತರಿಗೆ ಅವಕಾಶ ನೀಡುವುದಾಗಿಯೂ ದೇಗುಲದ ಮಂಡಳಿ ಮಾಹಿತಿ ನೀಡಿದೆ.